Mysore
34
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಕರ್ತವ್ಯ ಲೋಪ : ಪಿಡಿಒ ಅಮಾನತು

ಚಾಮರಾಜನಗರ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ಗೋವಿಂದಪ್ಪ ಎಂಬವರನ್ನು ಅಮಾನತು ಮಾಡಿ ಜಿಪಂ ಸಿಇಒ ಕೆ.ಎಂ. ಗಾಯತ್ರಿ ಆದೇಶಿಸಿದ್ದಾರೆ.

ಮೂಲ ಕುರಟ್ಟಿ ಹೊಸೂರಿನ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿದ್ದ ಗೋವಿಂದಪ್ಪ ಬನ್ನಿತಾಳಪುರ ಗ್ರಾಮ ಪಂಚಾಯಿತಿಗೆ ನಿಯೋಜನೆಯಾಗಿದ್ದರು. ಆದರೆ, ಕರ್ತವ್ಯಕ್ಕೆ ಗೈರು ಹಾಜರಾಗುತ್ತಿದ್ದು, ಕಚೇರಿಯ ಕೆಲಸಗಳನ್ನು ನಿರ್ವಹಿಸದೇ ಇರುವ ಬಗ್ಗೆ ದೂರು ಬಂದಿತ್ತು.
ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಿದ್ದರೂ ಯಾವುದೇ ಸಮಜಾಯಿಷಿ ನೀಡಿರಲಿಲ್ಲ. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಎನ್. ಗೋವಿಂದಪ್ಪ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!