ಜಿಲ್ಲೆಗಳು

ಜನನಿಬಿಡ ರಸ್ತೆಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿ: ವ್ಯಾಪಾರಸ್ಥರು, ವಾಹನ ಸವಾರರಿಗೆ ಕಿರಿಕಿರಿ

ಮೈಸೂರು: ಇದು ನಗರದ ಹೃದಯಭಾಗದಲ್ಲಿರುವ ರಸ್ತೆ. ಇಲ್ಲಿ ಲಕ್ಷಾಂತರ ಜನರು ಪ್ರತೀ ದಿನ ಓಡಾಡುತ್ತಾರೆ. ವಾಹನ ಸಂಚಾರ ಕೂಡ ಲೆಕ್ಕವಿಲ್ಲ. ಅಂತಹ ರಸ್ತೆಯನ್ನು ದುರಸ್ಥಿ ನೆಪದಲ್ಲಿ ಕಳೆದ ೧೫ ದಿನಗಳ ಹಿಂದೆ ಅಗೆದಿರುವ ನಗರಪಾಲಿಕೆ ಕಾಮಗಾರಿಯನ್ನು ಅರ್ದಕ್ಕೇ ನಿಲ್ಲಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿದೆ.
ಯಾವುದೇ ಕಾಮಗಾರಿ ಕೈಗೆತ್ತಿಕೊಂಡಲ್ಲಿ ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸಿದಲ್ಲಿ ಸಾರ್ವಜನಿಕರಿಗೆ ಅದು ಅನುಕೂಲವಾಗುತ್ತದೆ. ಅನುದಾನ ಕಡಿತ. ಹಣ ಬಿಡುಗಡೆಯಾಗಿಲ್ಲ ಎಂಬ ಮುಂತಾದ ಕಾರಣಗಳನ್ನಿಟ್ಟುಕೊಂಡು ಕಾಮಗಾರಿಯನ್ನು ವಿಳಂಬ ಮಾಡಿದಲ್ಲಿ ಸಂಕಷ್ಟಕ್ಕೊಳಗಾಗುವವರು ಮಾತ್ರ ಸಾರ್ವಜನಿಕರು.
ಇದಕ್ಕೆ ತಾಜ ಉದಾಹರಣೆ ನಗರದ ದೇವರಾಜ ಮಾರುಕಟ್ಟೆಯ ಕೂಗಳತೆಯಲ್ಲಿರುವ ಹಾಗೂ ಮಕ್ಕಾಜಿ ಚೌಕದ ಎದುರಿನ ರಸ್ತೆ. ರಸ್ತೆಯಲ್ಲಿ ಚರಂಡಿ ನಿರ್ಮಾಣ ಮಾಡುವ ಕಾಮಗಾರಿಯನ್ನು ನಗರಪಾಲಿಕೆ ಕೈಗೆತ್ತಿಕೊಂಡಿದೆ.
ಕಾಮಗಾರಿಯ ಟೆಂಡರ್ ಪಡೆದ ಗುತ್ತಿಗೆದಾರ ದೀಪಾವಳಿ ಹಬ್ಬದ ಹಿಂದಿನ ದಿನ ಕಾಮಗಾರಿಯನ್ನು ಆರಂಭಿಸಿದ್ದಾರೆ. ಒಂದೆರಡು ದಿನ ಕಾಮಗಾರಿಯನ್ನು ನಡೆಸಿ ಚರಂಡಿ ನಿರ್ಮಾಣಕ್ಕೆ ಹಳ್ಳ ತೋಡಿದ್ದಾರೆ. ಇದಾದ ನಂತರ ಕಾಮಗಾರಿಯನ್ನು ಅರ್ದಕ್ಕೆ ನಿಲ್ಲಿಸಿದ್ದಾರೆ. ರಸ್ತೆಗೆ ಅಡ್ಡಲಾಗಿ ನೀರಿನ ಟ್ಯಾಂಕರ್ ನಿಲ್ಲಿಸಿ ಹೋದವರು ಇದುವರೆವಿಗೂ ಪತ್ತೆ ಇಲ್ಲ.
ಈ ರಸ್ತೆ ಸಯ್ಯಾಜಿರಾವ್ ರಸ್ತೆಯನ್ನು ಸಂಪರ್ಕಿಸುತ್ತದೆ. ಒಲಂಪಿಯಾ ಚಿತ್ರಮಂದಿರದ ಸುತ್ತಮುತ್ತಲಿನ ಮಳಿಗೆಗಳ ಸಂಪರ್ಕ ಕೂಡ ಇದೇ ರಸ್ತೆಯಿಂದ ಆಗುತ್ತದೆ. ಪ್ರತೀದಿನ ಕೋಟ್ಯಾಂತರ ರೂ. ವಹಿವಾಟು ನಡೆಯುವ ಸ್ಥಳದಲ್ಲಿ ಈ ರಸ್ತೆ ಇದೆ.
ಕಾಮಗಾರಿ ಅರ್ದಕ್ಕೆ ನಿಂತಿರುವುದರಿಂದ ವ್ಯಾಪಾರಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಜನರು ಕೂಡ ವಸ್ತುಗಳ ಖರೀದಿಗೆ ಕೆಟಿ ಸ್ಟ್ರೀಟ್ ರಸ್ತೆ ಮೂಲಕ ಒಂದು ಸುತ್ತುಹಾಕಿ ಅಲ್ಲಿಗೆ ಬರಬೇಕಿದೆ. ಈ ಬಗ್ಗೆ ವ್ಯಾಪಾರಸ್ಥರು ಸಾಕಷ್ಟು ದೂರು ಹೇಳಿಕೊಂಡರು ಕೂಡ ನಗರಪಾಲಿಕೆ ಅಧಿಕಾರಿಗಳ ಕಿವಿಗೆ ಬಿದ್ದಿಲ್ಲ. ಈಗಲಾದರೂ ಸಂಬಂದಪಟ್ಟವರು ಕಾಮಗಾರಿಯನ್ನು ತುರ್ತಾಗಿ ಪುರ್ಣಗೊಳಿಸಬೇಕಿದೆ.

ಚರಂಡಿ ನಿರ್ಮಾಣಕ್ಕೂ ಮುನ್ನ ಅಲ್ಲಿ ಒಳ ಚರಂಡಿಯ ಪೈಪ್‌ಲೈನ್ ಅಳವಡಿಸಬೇಕಾಗಿದೆ. ಈ ಕಾಮಗಾರಿಗಾಗಿ ಹಣ ಬಿಡುಗಡೆಯಾಗಿಲ್ಲದ ಕಾರಣ ಗುತ್ತಿಗೆದಾರರು ಕೆಲಸವನ್ನು ಅರ್ದಕ್ಕೆ ನಿಲ್ಲಿಸಿದ್ದಾರೆ. ಇದರ ಬಗ್ಗೆ ನಗರಪಾಲಿಕೆ ಆಯುಕ್ತರೊಂದಿಗೆ ಮಾತನಾಡಲಾಗಿದೆ. ಆದಷ್ಟು ಶೀಘ್ರವಾಗಿ ಕಾಂಗಾರಿ ಪೂರ್ಣಗೊಳ್ಳಲಿದೆ.
-ಎಂ.ಡಿ.ನಾಗರಾಜು, ನಗರಪಾಲಿಕೆ ಸದಸ್ಯರು.

ಇದು ಮಾರುಕಟ್ಟೆಯ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ಒಂದು. ಪ್ರತೀದಿನ ಸಾವಿರಾರು ವಾಹನಗಳ ಸಂಚಾರವಿದೆ. ಕಾಮಗಾರಿ ಅರಂಭವಾಗಿ ೧೫ ದಿನಗಳು ಕಳೆದರೂ ಪೂರ್ಣಗೊಂಡಿಲ್ಲ. ಇದರಿಂದ ಇಲ್ಲಿನ ವ್ಯಾಪಾರಸ್ಥರಿಗೆ ತೊಂದರೆಯಾಗಿದೆ. ನಗರಪಾಲಿಕೆ ಅಧಿಕಾರಿಗಳು ಇತ್ತ ಗಮನ ಹರಿಸಬೇಕು.
-ಅಸ್ಮತ್ ಅಲಿ, ರೆಡಿಮೇಡ್ ಉಡುಪು ವ್ಯಾಪಾರಿ.

andolanait

Recent Posts

ಹಾಸನ| ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…

16 mins ago

ಯುದ್ಧದ ನಡುವೆ ಇರಾನ್‌ನಲ್ಲಿ ಭೂಕಂಪ: 4.1 ತೀವ್ರತೆ ದಾಖಲು

ಟೆಹರಾನ್:‌ ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್‌ ಅಬ್ಬಾಸ್‌ ಸಮೀಪ ರಿಕ್ಟರ್‌ ಮಾಪಕದಲ್ಲಿ…

29 mins ago

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

3 hours ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

3 hours ago

ಓದುಗರ ಪತ್ರ: ಯುದ್ಧ ವಿನಾಶಕಾರಿ!

ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…

4 hours ago

ಓದುಗರ ಪತ್ರ: ಯಶಸ್ವಿನಿ : ಡಯಾಲಿಸಿಸ್ ವೆಚ್ಚ ಭರಿಸಲಿ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…

4 hours ago