ಜಿಲ್ಲೆಗಳು

ಜನನಿಬಿಡ ರಸ್ತೆಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿ: ವ್ಯಾಪಾರಸ್ಥರು, ವಾಹನ ಸವಾರರಿಗೆ ಕಿರಿಕಿರಿ

ಮೈಸೂರು: ಇದು ನಗರದ ಹೃದಯಭಾಗದಲ್ಲಿರುವ ರಸ್ತೆ. ಇಲ್ಲಿ ಲಕ್ಷಾಂತರ ಜನರು ಪ್ರತೀ ದಿನ ಓಡಾಡುತ್ತಾರೆ. ವಾಹನ ಸಂಚಾರ ಕೂಡ ಲೆಕ್ಕವಿಲ್ಲ. ಅಂತಹ ರಸ್ತೆಯನ್ನು ದುರಸ್ಥಿ ನೆಪದಲ್ಲಿ ಕಳೆದ ೧೫ ದಿನಗಳ ಹಿಂದೆ ಅಗೆದಿರುವ ನಗರಪಾಲಿಕೆ ಕಾಮಗಾರಿಯನ್ನು ಅರ್ದಕ್ಕೇ ನಿಲ್ಲಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿದೆ.
ಯಾವುದೇ ಕಾಮಗಾರಿ ಕೈಗೆತ್ತಿಕೊಂಡಲ್ಲಿ ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸಿದಲ್ಲಿ ಸಾರ್ವಜನಿಕರಿಗೆ ಅದು ಅನುಕೂಲವಾಗುತ್ತದೆ. ಅನುದಾನ ಕಡಿತ. ಹಣ ಬಿಡುಗಡೆಯಾಗಿಲ್ಲ ಎಂಬ ಮುಂತಾದ ಕಾರಣಗಳನ್ನಿಟ್ಟುಕೊಂಡು ಕಾಮಗಾರಿಯನ್ನು ವಿಳಂಬ ಮಾಡಿದಲ್ಲಿ ಸಂಕಷ್ಟಕ್ಕೊಳಗಾಗುವವರು ಮಾತ್ರ ಸಾರ್ವಜನಿಕರು.
ಇದಕ್ಕೆ ತಾಜ ಉದಾಹರಣೆ ನಗರದ ದೇವರಾಜ ಮಾರುಕಟ್ಟೆಯ ಕೂಗಳತೆಯಲ್ಲಿರುವ ಹಾಗೂ ಮಕ್ಕಾಜಿ ಚೌಕದ ಎದುರಿನ ರಸ್ತೆ. ರಸ್ತೆಯಲ್ಲಿ ಚರಂಡಿ ನಿರ್ಮಾಣ ಮಾಡುವ ಕಾಮಗಾರಿಯನ್ನು ನಗರಪಾಲಿಕೆ ಕೈಗೆತ್ತಿಕೊಂಡಿದೆ.
ಕಾಮಗಾರಿಯ ಟೆಂಡರ್ ಪಡೆದ ಗುತ್ತಿಗೆದಾರ ದೀಪಾವಳಿ ಹಬ್ಬದ ಹಿಂದಿನ ದಿನ ಕಾಮಗಾರಿಯನ್ನು ಆರಂಭಿಸಿದ್ದಾರೆ. ಒಂದೆರಡು ದಿನ ಕಾಮಗಾರಿಯನ್ನು ನಡೆಸಿ ಚರಂಡಿ ನಿರ್ಮಾಣಕ್ಕೆ ಹಳ್ಳ ತೋಡಿದ್ದಾರೆ. ಇದಾದ ನಂತರ ಕಾಮಗಾರಿಯನ್ನು ಅರ್ದಕ್ಕೆ ನಿಲ್ಲಿಸಿದ್ದಾರೆ. ರಸ್ತೆಗೆ ಅಡ್ಡಲಾಗಿ ನೀರಿನ ಟ್ಯಾಂಕರ್ ನಿಲ್ಲಿಸಿ ಹೋದವರು ಇದುವರೆವಿಗೂ ಪತ್ತೆ ಇಲ್ಲ.
ಈ ರಸ್ತೆ ಸಯ್ಯಾಜಿರಾವ್ ರಸ್ತೆಯನ್ನು ಸಂಪರ್ಕಿಸುತ್ತದೆ. ಒಲಂಪಿಯಾ ಚಿತ್ರಮಂದಿರದ ಸುತ್ತಮುತ್ತಲಿನ ಮಳಿಗೆಗಳ ಸಂಪರ್ಕ ಕೂಡ ಇದೇ ರಸ್ತೆಯಿಂದ ಆಗುತ್ತದೆ. ಪ್ರತೀದಿನ ಕೋಟ್ಯಾಂತರ ರೂ. ವಹಿವಾಟು ನಡೆಯುವ ಸ್ಥಳದಲ್ಲಿ ಈ ರಸ್ತೆ ಇದೆ.
ಕಾಮಗಾರಿ ಅರ್ದಕ್ಕೆ ನಿಂತಿರುವುದರಿಂದ ವ್ಯಾಪಾರಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಜನರು ಕೂಡ ವಸ್ತುಗಳ ಖರೀದಿಗೆ ಕೆಟಿ ಸ್ಟ್ರೀಟ್ ರಸ್ತೆ ಮೂಲಕ ಒಂದು ಸುತ್ತುಹಾಕಿ ಅಲ್ಲಿಗೆ ಬರಬೇಕಿದೆ. ಈ ಬಗ್ಗೆ ವ್ಯಾಪಾರಸ್ಥರು ಸಾಕಷ್ಟು ದೂರು ಹೇಳಿಕೊಂಡರು ಕೂಡ ನಗರಪಾಲಿಕೆ ಅಧಿಕಾರಿಗಳ ಕಿವಿಗೆ ಬಿದ್ದಿಲ್ಲ. ಈಗಲಾದರೂ ಸಂಬಂದಪಟ್ಟವರು ಕಾಮಗಾರಿಯನ್ನು ತುರ್ತಾಗಿ ಪುರ್ಣಗೊಳಿಸಬೇಕಿದೆ.

ಚರಂಡಿ ನಿರ್ಮಾಣಕ್ಕೂ ಮುನ್ನ ಅಲ್ಲಿ ಒಳ ಚರಂಡಿಯ ಪೈಪ್‌ಲೈನ್ ಅಳವಡಿಸಬೇಕಾಗಿದೆ. ಈ ಕಾಮಗಾರಿಗಾಗಿ ಹಣ ಬಿಡುಗಡೆಯಾಗಿಲ್ಲದ ಕಾರಣ ಗುತ್ತಿಗೆದಾರರು ಕೆಲಸವನ್ನು ಅರ್ದಕ್ಕೆ ನಿಲ್ಲಿಸಿದ್ದಾರೆ. ಇದರ ಬಗ್ಗೆ ನಗರಪಾಲಿಕೆ ಆಯುಕ್ತರೊಂದಿಗೆ ಮಾತನಾಡಲಾಗಿದೆ. ಆದಷ್ಟು ಶೀಘ್ರವಾಗಿ ಕಾಂಗಾರಿ ಪೂರ್ಣಗೊಳ್ಳಲಿದೆ.
-ಎಂ.ಡಿ.ನಾಗರಾಜು, ನಗರಪಾಲಿಕೆ ಸದಸ್ಯರು.

ಇದು ಮಾರುಕಟ್ಟೆಯ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ಒಂದು. ಪ್ರತೀದಿನ ಸಾವಿರಾರು ವಾಹನಗಳ ಸಂಚಾರವಿದೆ. ಕಾಮಗಾರಿ ಅರಂಭವಾಗಿ ೧೫ ದಿನಗಳು ಕಳೆದರೂ ಪೂರ್ಣಗೊಂಡಿಲ್ಲ. ಇದರಿಂದ ಇಲ್ಲಿನ ವ್ಯಾಪಾರಸ್ಥರಿಗೆ ತೊಂದರೆಯಾಗಿದೆ. ನಗರಪಾಲಿಕೆ ಅಧಿಕಾರಿಗಳು ಇತ್ತ ಗಮನ ಹರಿಸಬೇಕು.
-ಅಸ್ಮತ್ ಅಲಿ, ರೆಡಿಮೇಡ್ ಉಡುಪು ವ್ಯಾಪಾರಿ.

andolanait

Recent Posts

ಬಹೂರೂಪಿ | ಜಾನಪದ ಉತ್ಸವಕ್ಕೆ ಚಾಲನೆ

ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…

49 mins ago

ಸಂಗ್ರಹಾಲಯವಾಗಿ ಕುವೆಂಪು ಅವರ ಉದಯರವಿ ಮನೆ

ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…

1 hour ago

ಮ.ಬೆಟ್ಟ ಮಾರ್ಗದಲ್ಲಿ ಚಿರತೆ ಪ್ರತ್ಯಕ್ಷ : ಎಚ್ಚರಿಕೆಯ ಸಂಚಾರಕ್ಕೆ ಕೋರಿಕೆ

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…

1 hour ago

ದ್ವೇಷ ಮರೆಯಿರಿ, ಪ್ರೀತಿ ಗಳಿಸಿ : ಡಿ.ಆರ್.ಪಾಟೀಲ್ ಕರೆ

ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…

2 hours ago

ಡ್ಯಾಡ್ ಈಸ್‌ ಹೋಂ | ಎಚ್‌ಡಿಕೆ ಎಂಟ್ರಿಗೆ ಡಿಕೆಶಿ, ಸಿದ್ದು ಶಾಕ್‌ ; ಸಂಚಲನ ಮೂಡಿಸುತ್ತಿರುವ AI ವಿಡಿಯೋ

ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…

2 hours ago

ಸೋಮನಾಥದಲ್ಲಿ ಶೌರ್ಯ ಯಾತ್ರೆ

ಸೋಮನಾಥ : ಗುಜರಾತ್‌ನ ಗಿರ್‌ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…

2 hours ago