ಜಿಲ್ಲೆಗಳು

ಮದ್ದೂರಿನಲ್ಲಿ ಕಾಡು ಹಂದಿ ಹಾವಳಿ ವಿರುದ್ಧ ಬೀದಿಗಿಳಿದ ಜನತೆ

ಮದ್ದೂರು: ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಚಿರತೆಗಳ ಜತೆ ಕಾಡು ಹಂದಿ ಮತ್ತು ಮುಳ್ಳು ಹಂದಿಗಳ ಹಾವಳಿಯೂ ಹೆಚ್ಚಾಗಿದ್ದು ಬೇಸತ್ತ ರೈತರು ಇಂದು (ನವೆಂಬರ್‌ 29) ಮದ್ದೂರಿನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ರೈತರು ಮತ್ತು ಜಿಲ್ಲೆಯ ನಾನಾ ಪ್ರಗತಿಪರ ಸಂಘಟನೆಗಳ ಸದಸ್ಯರು ಬೃಹತ್‌ ಸಂಖ್ಯೆಯಲ್ಲಿ ಸೇರಿ ಮಂಗಳವಾರ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿದರು.

ಈ ವೇಳೆ ಮಾತನಾಡಿದ ಮುಖಂಡರು ಮುಳ್ಳು ಹಂದಿ ಹಾಗೂ ಕಾಡು ಹಂದಿಗಳ ಹಾವಳಿಯಿಂದಾಗಿ ರೈತರು ಅನೇಕ ರೀತಿಯಲ್ಲಿ ಕಷ್ಟ ನಷ್ಟಗಳಿಗೆ ಸಿಲುಕಿದ್ದಾರೆ. ಜಮೀನುಗಳಲ್ಲಿ ಹಾಕಿರುವ ತೆಂಗಿನ ಸಸಿಗಳನ್ನೂ ಕಾಡು ಹಂದಿಗಳು ಕಿತ್ತುಹಾಕುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಕಾಡು ಹಂದಿಗಳ ಹಾವಳಿ ಮಿತಿ ಮೀರಿದೆ. ಇವುಗಳ ಉಪಟಳದಿಂದ ಯಾವುದೇ ಬೆಳೆ ಬೆಳೆಯಲು ಕಷ್ಟವಾಗಿದೆ. ಹಂದಿಗಳ ಹಾವಳಿ ತಡೆಗೆ ಗ್ರಾಮಸ್ಥರು ಹಾಗೂ ಪ್ರಗತಿಪರ ಸಂಘಟನೆಗಳು ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ತಾಲ್ಲೂಕು ಆಡಳಿತದ ವಿರುದ್ದ ಘೋಷಣೆ ಕೂಗಿದರು.

ಹಂದಿಗಳ ಹಾವಳಿಯಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ ನೀಡಬೇಕು, ಹಾವಳಿ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ತೆಂಗುಬೆಳೆಗಾರರ ಸಂಘ, ರಾಜ್ಯ ರೈತಸಂಘ, ಗ್ರಾಪಂ ಸದಸ್ಯರ ಒಕ್ಕೂಟ, ಹಾಲು ಉತ್ಪಾದಕರ ಹೋರಾಟ ಸಮಿತಿ, ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಮತ್ತಿತರ ಸಂಘಟನೆಗಳು ಭಾಗವಹಿಸಿದ್ದವು. ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯ ನಿರ್ವಾಹಕ ಸಂಚಾಲಕ ಶ್ರೀಕ ಶ್ರೀನಿವಾಸ್‌, ರೈತ ಮುಖಂಡರಾದ ನ.ಲಿ.ಕೃಷ್ಣ, ಚನ್ನಸಂದ್ರ ಲಕ್ಷ್ಮಣ್, ಸೋ.ಸಿ. ಪ್ರಕಾಶ್‌, ಕರವೇ ಅಶೋಕ್ ಕುಮಾರ್, ಶಿವಪ್ಪ, ರಾಜು, ಬೋರಯ್ಯ, ರಮೇಶ್, ಇಂದ್ರ ಸೇರಿದಂತೆ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಭಾಗಿಯಾಗಿದ್ದರು.

ಸ್ಥಳೀಯ ನಿವಾಸಿಗಳ ಮೇಲೂ ದಾಳಿ

ಬೆಳೆ ನಷ್ಟ ಒಂದೆಡೆಯಾದರೆ ಮದ್ದೂರು ಪಟ್ಟಣದಲ್ಲಿ ಮುಳ್ಳು ಹಂದಿಗಳು ಸ್ಥಳಿಯ ನಿವಾಸಿಗಳ ಮೇಲೂ ದಾಳಿ ಮಾಡಿ ಗಾಯಗೊಳಿಸಿವೆ. ರಾತ್ರೋ ರಾತ್ರಿ ಸ್ಥಳೀಯ ನಿವಾಸಿಗಳ ಮೇಲೆ ಮುಳ್ಳುಹಂದಿಗಳು ದಾಳಿ ಮಾಡುತ್ತಿದ್ದು ಚಿರತೆ ಜತೆ ಈಗ ಮುಳ್ಳು ಹಂದಿಗಳಿಗೂ ಹೆದರಬೇಕಾಗಿದೆ.

andolana

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

2 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

3 hours ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

3 hours ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

3 hours ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

3 hours ago