ಜಿಲ್ಲೆಗಳು

ಸಾರ್ವಜನಿಕರ ಕೆಲಸ ವಿಳಂಬ; ಅಧಿಕಾರಿಗಳಿಗೆ ತರಾಟೆ

ಪಾಲಿಕೆ ವಲಯ ಕಚೇರಿ ೭, ೯ಕ್ಕೆ ಮಹಾಪೌರರ ಭೇಟಿ, ಪರಿಶೀಲನೆ

ಮೈಸೂರು: ಸಾರ್ವಜನಿಕರು ಕೊಟ್ಟಿರುವ ಅರ್ಜಿಗಳನ್ನು ವಿಲೇವಾರಿ ಮಾಡದೆ, ಎರಡು-ಮೂರು ತಿಂಗಳುಗಳಿಂದ ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿರುವ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಮಹಾಪೌರ ಶಿವಕುಮಾರ್, ಒಂದು ವಾರದೊಳಗೆ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದರು.

ನಗರಪಾಲಿಕೆ ವಲಯ ಕಚೇರಿ ೭ ಮತ್ತು ೯ಕ್ಕೆ ದಿಢೀರ್ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು. ಖಾತೆ ಮಾಡಿಕೊಡಲು ಸಲ್ಲಿಸಿದ್ದ ಅರ್ಜಿಗಳನ್ನು ಎರಡು ತಿಂಗಳಾದರೂ ಕೈಗೆತ್ತಿಕೊಳ್ಳದೆ ಇಟ್ಟುಕೊಂಡಿದ್ದನ್ನು ಗಮನಿಸಿದ ಮಹಾಪೌರರು ಸಂಬಂಧಿಸಿದ ಅಧಿಕಾರಿಗಳಿಂದ ವಿವರಣೆ ಕೇಳಿದರು. ವಿಳಂಬ ಮಾಡಲು ಕಾರಣವೇನು? ನಿಗದಿತ ಅವಧಿಯೊಳಗೆ ಕಾನೂನಿನ ಚೌಕಟ್ಟಿನಲ್ಲಿ ಖಾತೆ ಮಾಡಿಕೊಡಲು ಸಾಧ್ಯವಾಗದಿದ್ದರೆ ಹಿಂಬರಹ ಕೊಡಬೇಕೇ ಹೊರತು ಕಚೇರಿಗೆ ಅಲೆದಾಡಿಸಬಾರದೆಂದು ಹೇಳಿದರು.

ನಿವಾಸಿಗಳು ಮನೆ ಕಂದಾಯ ಪಾವವತಿ ಮಾಡಲು ಪಾಲಿಕೆ ವಲಯ ಕಚೇರಿಗೆ ಆಗಮಿಸಿ ಕಾದು ಕುಳಿತಿದ್ದರೂ ಕಂದಾಯ ನಿರೀಕ್ಷಕರು ಇರಲಿಲ್ಲ. ಈ ವೇಳೆ ದೂರವಾಣಿ ಮೂಲಕ ವಿಚಾರಿಸಿದಾಗ ವಾರ್ಡ್‌ನಲ್ಲಿ ಸಂಗ್ರಹ ಮಾಡುತ್ತೇವೆ ಎಂಬ ಉತ್ತರ ಬಂತು. ಆಗ ಮಹಾಪೌರರು, ಕಂದಾಯ ನಿರೀಕ್ಷಕರು ಕಚೇರಿಯಲ್ಲಿ ಇಲ್ಲದ ಸಂದರ್ಭದಲ್ಲಿ ಕಂದಾಯ ಪಾವತಿ ಮಾಡಿಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ವಲಯ ಸಹಾಯಕ ಆಯುಕ್ತರಿಗೆ ಸೂಚಿಸಿದರು.

ಈ ವೇಳೆ ಸಾರ್ವಜನಿಕರು ಹಲವು ಸಮಸ್ಯೆಗಳ ಬಗ್ಗೆ ದೂರುಗಳನ್ನು ಸಲ್ಲಿಸಿದರು. ಇದನ್ನು ಪರಿಗಣಿಸಿದ ಮಹಾಪೌರರು, ಒಂದೊಂದು ಅರ್ಜಿಗಳನ್ನು ಪರಿಶೀಲಿಸಿ ಅನಗತ್ಯವಾಗಿ ವಿಳಂಬವಾಗಿರುವುದನ್ನು ಇತ್ಯರ್ಥಪಡಿಸಬೇಕು. ವಿಳಂಬ ಮಾಡಿರುವ ಬಗ್ಗೆ ಉತ್ತರ ಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಲಯ ಕಚೇರಿ ೭ರ ಸಹಾಯಕ ಆಯುಕ್ತ ನಂಜುಂಡಯ್ಯ, ವಲಯ ಕಚೇರಿ ೯ರ ಸಹಾಯಕ ಆಯುಕ್ತ ಶಿವಕುಮಾರ್ ಈ ವೇಳೆ ಹಾಜರಿದ್ದರು.

ಪಾದಯಾತ್ರೆ ವೇಳೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಅಧೀಕ್ಷಕ ಅಭಿಯಂತರ ಮಹೇಶ್, ವಾಣಿವಿಲಾಸ ವಾಟರ್ ವರ್ಕ್ಸ್‌ನ ಇಇ ಸುವರ್ಣ ಇನ್ನಿತರರು ಹಾಜರಿದ್ದರು.


ಪಾದಯಾತ್ರೆ

ಮೈಸೂರು: ನಗರಪಾಲಿಕೆ ಸದಸ್ಯೆ ಎಚ್.ಎಂ.ಶಾಂತಕುಮಾರಿ ಅವರ ವಾರ್ಡಿನಲ್ಲಿ ಮಹಾಪೌರರು, ಆಯುಕ್ತರು ಪಾದಯಾತ್ರೆ ನಡೆಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು. ಕುಡಿಯುವ ನೀರು, ಒಳಚರಂಡಿ, ಬೀದಿದೀಪ ಮೊದಲಾದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ದೂರುಗಳನ್ನು ಆಲಿಸಿದರಲ್ಲದೆ, ಒಳಚರಂಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಸೂಚನೆ ನೀಡಿದರು. ಬಡಾವಣೆಯಲ್ಲಿ ಒಳಚರಂಡಿ ಪೈಪ್‌ಲೈನ್ ಅಳವಡಿಸಿದ ಮೇಲೆ ರಸ್ತೆ ದುರಸ್ತಿಪಡಿಸದ ಕಾರಣ ವಾಹನಗಳು ಓಡಾಡಲು ತೊಂದರೆಯಾಗಿರುವ ಕುರಿತು ಸ್ಥಳೀಯರು ಮಹಾಪೌರರ ಗಮನಕ್ಕೆ ತಂದರು.

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

4 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

6 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

6 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

6 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

6 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

6 hours ago