ಜಿಲ್ಲೆಗಳು

ಸಾರ್ವಜನಿಕರ ಕೆಲಸ ವಿಳಂಬ; ಅಧಿಕಾರಿಗಳಿಗೆ ತರಾಟೆ

ಪಾಲಿಕೆ ವಲಯ ಕಚೇರಿ ೭, ೯ಕ್ಕೆ ಮಹಾಪೌರರ ಭೇಟಿ, ಪರಿಶೀಲನೆ

ಮೈಸೂರು: ಸಾರ್ವಜನಿಕರು ಕೊಟ್ಟಿರುವ ಅರ್ಜಿಗಳನ್ನು ವಿಲೇವಾರಿ ಮಾಡದೆ, ಎರಡು-ಮೂರು ತಿಂಗಳುಗಳಿಂದ ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿರುವ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಮಹಾಪೌರ ಶಿವಕುಮಾರ್, ಒಂದು ವಾರದೊಳಗೆ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದರು.

ನಗರಪಾಲಿಕೆ ವಲಯ ಕಚೇರಿ ೭ ಮತ್ತು ೯ಕ್ಕೆ ದಿಢೀರ್ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು. ಖಾತೆ ಮಾಡಿಕೊಡಲು ಸಲ್ಲಿಸಿದ್ದ ಅರ್ಜಿಗಳನ್ನು ಎರಡು ತಿಂಗಳಾದರೂ ಕೈಗೆತ್ತಿಕೊಳ್ಳದೆ ಇಟ್ಟುಕೊಂಡಿದ್ದನ್ನು ಗಮನಿಸಿದ ಮಹಾಪೌರರು ಸಂಬಂಧಿಸಿದ ಅಧಿಕಾರಿಗಳಿಂದ ವಿವರಣೆ ಕೇಳಿದರು. ವಿಳಂಬ ಮಾಡಲು ಕಾರಣವೇನು? ನಿಗದಿತ ಅವಧಿಯೊಳಗೆ ಕಾನೂನಿನ ಚೌಕಟ್ಟಿನಲ್ಲಿ ಖಾತೆ ಮಾಡಿಕೊಡಲು ಸಾಧ್ಯವಾಗದಿದ್ದರೆ ಹಿಂಬರಹ ಕೊಡಬೇಕೇ ಹೊರತು ಕಚೇರಿಗೆ ಅಲೆದಾಡಿಸಬಾರದೆಂದು ಹೇಳಿದರು.

ನಿವಾಸಿಗಳು ಮನೆ ಕಂದಾಯ ಪಾವವತಿ ಮಾಡಲು ಪಾಲಿಕೆ ವಲಯ ಕಚೇರಿಗೆ ಆಗಮಿಸಿ ಕಾದು ಕುಳಿತಿದ್ದರೂ ಕಂದಾಯ ನಿರೀಕ್ಷಕರು ಇರಲಿಲ್ಲ. ಈ ವೇಳೆ ದೂರವಾಣಿ ಮೂಲಕ ವಿಚಾರಿಸಿದಾಗ ವಾರ್ಡ್‌ನಲ್ಲಿ ಸಂಗ್ರಹ ಮಾಡುತ್ತೇವೆ ಎಂಬ ಉತ್ತರ ಬಂತು. ಆಗ ಮಹಾಪೌರರು, ಕಂದಾಯ ನಿರೀಕ್ಷಕರು ಕಚೇರಿಯಲ್ಲಿ ಇಲ್ಲದ ಸಂದರ್ಭದಲ್ಲಿ ಕಂದಾಯ ಪಾವತಿ ಮಾಡಿಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ವಲಯ ಸಹಾಯಕ ಆಯುಕ್ತರಿಗೆ ಸೂಚಿಸಿದರು.

ಈ ವೇಳೆ ಸಾರ್ವಜನಿಕರು ಹಲವು ಸಮಸ್ಯೆಗಳ ಬಗ್ಗೆ ದೂರುಗಳನ್ನು ಸಲ್ಲಿಸಿದರು. ಇದನ್ನು ಪರಿಗಣಿಸಿದ ಮಹಾಪೌರರು, ಒಂದೊಂದು ಅರ್ಜಿಗಳನ್ನು ಪರಿಶೀಲಿಸಿ ಅನಗತ್ಯವಾಗಿ ವಿಳಂಬವಾಗಿರುವುದನ್ನು ಇತ್ಯರ್ಥಪಡಿಸಬೇಕು. ವಿಳಂಬ ಮಾಡಿರುವ ಬಗ್ಗೆ ಉತ್ತರ ಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಲಯ ಕಚೇರಿ ೭ರ ಸಹಾಯಕ ಆಯುಕ್ತ ನಂಜುಂಡಯ್ಯ, ವಲಯ ಕಚೇರಿ ೯ರ ಸಹಾಯಕ ಆಯುಕ್ತ ಶಿವಕುಮಾರ್ ಈ ವೇಳೆ ಹಾಜರಿದ್ದರು.

ಪಾದಯಾತ್ರೆ ವೇಳೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಅಧೀಕ್ಷಕ ಅಭಿಯಂತರ ಮಹೇಶ್, ವಾಣಿವಿಲಾಸ ವಾಟರ್ ವರ್ಕ್ಸ್‌ನ ಇಇ ಸುವರ್ಣ ಇನ್ನಿತರರು ಹಾಜರಿದ್ದರು.


ಪಾದಯಾತ್ರೆ

ಮೈಸೂರು: ನಗರಪಾಲಿಕೆ ಸದಸ್ಯೆ ಎಚ್.ಎಂ.ಶಾಂತಕುಮಾರಿ ಅವರ ವಾರ್ಡಿನಲ್ಲಿ ಮಹಾಪೌರರು, ಆಯುಕ್ತರು ಪಾದಯಾತ್ರೆ ನಡೆಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು. ಕುಡಿಯುವ ನೀರು, ಒಳಚರಂಡಿ, ಬೀದಿದೀಪ ಮೊದಲಾದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ದೂರುಗಳನ್ನು ಆಲಿಸಿದರಲ್ಲದೆ, ಒಳಚರಂಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಸೂಚನೆ ನೀಡಿದರು. ಬಡಾವಣೆಯಲ್ಲಿ ಒಳಚರಂಡಿ ಪೈಪ್‌ಲೈನ್ ಅಳವಡಿಸಿದ ಮೇಲೆ ರಸ್ತೆ ದುರಸ್ತಿಪಡಿಸದ ಕಾರಣ ವಾಹನಗಳು ಓಡಾಡಲು ತೊಂದರೆಯಾಗಿರುವ ಕುರಿತು ಸ್ಥಳೀಯರು ಮಹಾಪೌರರ ಗಮನಕ್ಕೆ ತಂದರು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

51 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

52 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

55 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

4 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

4 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

4 hours ago