ಜಿಲ್ಲೆಗಳು

ಸಾರ್ವಜನಿಕರ ಕೆಲಸ ವಿಳಂಬ; ಅಧಿಕಾರಿಗಳಿಗೆ ತರಾಟೆ

ಪಾಲಿಕೆ ವಲಯ ಕಚೇರಿ ೭, ೯ಕ್ಕೆ ಮಹಾಪೌರರ ಭೇಟಿ, ಪರಿಶೀಲನೆ

ಮೈಸೂರು: ಸಾರ್ವಜನಿಕರು ಕೊಟ್ಟಿರುವ ಅರ್ಜಿಗಳನ್ನು ವಿಲೇವಾರಿ ಮಾಡದೆ, ಎರಡು-ಮೂರು ತಿಂಗಳುಗಳಿಂದ ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿರುವ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಮಹಾಪೌರ ಶಿವಕುಮಾರ್, ಒಂದು ವಾರದೊಳಗೆ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದರು.

ನಗರಪಾಲಿಕೆ ವಲಯ ಕಚೇರಿ ೭ ಮತ್ತು ೯ಕ್ಕೆ ದಿಢೀರ್ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು. ಖಾತೆ ಮಾಡಿಕೊಡಲು ಸಲ್ಲಿಸಿದ್ದ ಅರ್ಜಿಗಳನ್ನು ಎರಡು ತಿಂಗಳಾದರೂ ಕೈಗೆತ್ತಿಕೊಳ್ಳದೆ ಇಟ್ಟುಕೊಂಡಿದ್ದನ್ನು ಗಮನಿಸಿದ ಮಹಾಪೌರರು ಸಂಬಂಧಿಸಿದ ಅಧಿಕಾರಿಗಳಿಂದ ವಿವರಣೆ ಕೇಳಿದರು. ವಿಳಂಬ ಮಾಡಲು ಕಾರಣವೇನು? ನಿಗದಿತ ಅವಧಿಯೊಳಗೆ ಕಾನೂನಿನ ಚೌಕಟ್ಟಿನಲ್ಲಿ ಖಾತೆ ಮಾಡಿಕೊಡಲು ಸಾಧ್ಯವಾಗದಿದ್ದರೆ ಹಿಂಬರಹ ಕೊಡಬೇಕೇ ಹೊರತು ಕಚೇರಿಗೆ ಅಲೆದಾಡಿಸಬಾರದೆಂದು ಹೇಳಿದರು.

ನಿವಾಸಿಗಳು ಮನೆ ಕಂದಾಯ ಪಾವವತಿ ಮಾಡಲು ಪಾಲಿಕೆ ವಲಯ ಕಚೇರಿಗೆ ಆಗಮಿಸಿ ಕಾದು ಕುಳಿತಿದ್ದರೂ ಕಂದಾಯ ನಿರೀಕ್ಷಕರು ಇರಲಿಲ್ಲ. ಈ ವೇಳೆ ದೂರವಾಣಿ ಮೂಲಕ ವಿಚಾರಿಸಿದಾಗ ವಾರ್ಡ್‌ನಲ್ಲಿ ಸಂಗ್ರಹ ಮಾಡುತ್ತೇವೆ ಎಂಬ ಉತ್ತರ ಬಂತು. ಆಗ ಮಹಾಪೌರರು, ಕಂದಾಯ ನಿರೀಕ್ಷಕರು ಕಚೇರಿಯಲ್ಲಿ ಇಲ್ಲದ ಸಂದರ್ಭದಲ್ಲಿ ಕಂದಾಯ ಪಾವತಿ ಮಾಡಿಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ವಲಯ ಸಹಾಯಕ ಆಯುಕ್ತರಿಗೆ ಸೂಚಿಸಿದರು.

ಈ ವೇಳೆ ಸಾರ್ವಜನಿಕರು ಹಲವು ಸಮಸ್ಯೆಗಳ ಬಗ್ಗೆ ದೂರುಗಳನ್ನು ಸಲ್ಲಿಸಿದರು. ಇದನ್ನು ಪರಿಗಣಿಸಿದ ಮಹಾಪೌರರು, ಒಂದೊಂದು ಅರ್ಜಿಗಳನ್ನು ಪರಿಶೀಲಿಸಿ ಅನಗತ್ಯವಾಗಿ ವಿಳಂಬವಾಗಿರುವುದನ್ನು ಇತ್ಯರ್ಥಪಡಿಸಬೇಕು. ವಿಳಂಬ ಮಾಡಿರುವ ಬಗ್ಗೆ ಉತ್ತರ ಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಲಯ ಕಚೇರಿ ೭ರ ಸಹಾಯಕ ಆಯುಕ್ತ ನಂಜುಂಡಯ್ಯ, ವಲಯ ಕಚೇರಿ ೯ರ ಸಹಾಯಕ ಆಯುಕ್ತ ಶಿವಕುಮಾರ್ ಈ ವೇಳೆ ಹಾಜರಿದ್ದರು.

ಪಾದಯಾತ್ರೆ ವೇಳೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಅಧೀಕ್ಷಕ ಅಭಿಯಂತರ ಮಹೇಶ್, ವಾಣಿವಿಲಾಸ ವಾಟರ್ ವರ್ಕ್ಸ್‌ನ ಇಇ ಸುವರ್ಣ ಇನ್ನಿತರರು ಹಾಜರಿದ್ದರು.


ಪಾದಯಾತ್ರೆ

ಮೈಸೂರು: ನಗರಪಾಲಿಕೆ ಸದಸ್ಯೆ ಎಚ್.ಎಂ.ಶಾಂತಕುಮಾರಿ ಅವರ ವಾರ್ಡಿನಲ್ಲಿ ಮಹಾಪೌರರು, ಆಯುಕ್ತರು ಪಾದಯಾತ್ರೆ ನಡೆಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು. ಕುಡಿಯುವ ನೀರು, ಒಳಚರಂಡಿ, ಬೀದಿದೀಪ ಮೊದಲಾದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ದೂರುಗಳನ್ನು ಆಲಿಸಿದರಲ್ಲದೆ, ಒಳಚರಂಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಸೂಚನೆ ನೀಡಿದರು. ಬಡಾವಣೆಯಲ್ಲಿ ಒಳಚರಂಡಿ ಪೈಪ್‌ಲೈನ್ ಅಳವಡಿಸಿದ ಮೇಲೆ ರಸ್ತೆ ದುರಸ್ತಿಪಡಿಸದ ಕಾರಣ ವಾಹನಗಳು ಓಡಾಡಲು ತೊಂದರೆಯಾಗಿರುವ ಕುರಿತು ಸ್ಥಳೀಯರು ಮಹಾಪೌರರ ಗಮನಕ್ಕೆ ತಂದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago