ಜಿಲ್ಲೆಗಳು

ಮಂಡ್ಯ : PFi ಜಿಲ್ಲಾಧ್ಯಕ್ಷ ಸಯ್ಯದ್ ಇರ್ಫಾನ್ ಪೊಲೀಸರ ವಶ

ಮಂಡ್ಯ : ರಾಷ್ಟ್ರೀಯ ತನಿಖೆ ಸಂಸ್ಥೆ ದೇಶಾದ್ಯಂತ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ ಸಂಘಟನೆಗಳ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ ಬಳಿಕ ಮಂಡ್ಯದಲ್ಲೂ ಪೊಲೀಸರು ಪಿಎಫ್ ಐ ಸಂಘಟನೆ ಜಿಲ್ಲಾಧ್ಯಕ್ಷನ ಮನೆ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ.
ನಗರದ ಗುತ್ತಲು ಬಡಾವಣೆಯ ಸಪ್ದರಿಯಾ ನಗರದಲ್ಲಿ ವಾಸವಾಗಿರುವ ಇರ್ಫಾನ್ 34 ಎಂಬಾತ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು, ಆತನನ್ನು ವಶಕ್ಕೆ ಪಡೆದರು.
ಬಳಿಕ ಆರೋಪಿಯನ್ನು ತಹಸೀಲ್ದಾರ್ ಮನೆಗೆ ಹಾಜರುಪಡಿಸಿದ ನಂತರ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಎನ್ಐಎ ದೇಶಾದ್ಯಂತ ದಾಳಿ ನಡೆಸಿದ ಕಾರಣ ಅದನ್ನು ವಿರೋಧಿಸಿ ಇರ್ಫಾನ್ ಪಿ ಎಫ್ ಐ ಕಾರ್ಯಕರ್ತರು ಮತ್ತು ಇತರರನ್ನು ಬಳಸಿಕೊಂಡು ಮಂಡ್ಯ ಮತ್ತು ಇತರೆ ಕಡೆಗಳಲ್ಲಿ ಗೊಂದಲ ಸೃಷ್ಟಿ ಮಾಡಲು ಮುನ್ನಾರ ನಡೆಸಿದ ಎನ್ನಲಾಗಿದೆ. ಈ ಬಗ್ಗೆ ಎಚ್ಚೆತ್ತ ಪೊಲೀಸರು ಆತನನ್ನ ಕರೆದು ತಿಳಿ ಹೇಳಿದ್ದರು. ಆದರೂ ಸಹ ನಗರದ ವಿವಿಧಡೆ ಸಭೆಗಳನ್ನು ನಡೆಸಿ ಗೊಂದಲ ಸೃಷ್ಟಿಸುವ ಹುನ್ನಾರ ಮಾಡಿದ್ದ.
ಇದರಿಂದ ಎಚ್ಚತ್ತ ಪೊಲೀಸರು ಇಂದು ಬೆಳಗ್ಗೆ 4 ಗಂಟೆ ವೇಳೆಗೆ ಆತನ ಮೇಲೆ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದರು. ಬಳಿಕ ತಹಸೀಲ್ದಾರ್ ಮಹಮದ್ ಕುಂಞ ಅಹಮದ್ ಅವರ ನಿವಾಸಕ್ಕೆ ಹಾಜರುಪಡಿಸಿ ನಂತರ ಅವರ ಆದೇಶದ ಮೇರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಆರೋಪಿ ಇರ್ಫಾನ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಗುತ್ತಲು ಬಡಾವಣೆಯ ಪಿಎಫ್ಐ ಕಾರ್ಯಕರ್ತರು ನಗರದ ವಿನೋಬ ರಸ್ತೆ ಬಳಿ ಇರುವ ತಹಸೀಲ್ದಾರ್ ನಿವಾಸದ ಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಮನವೊಲಿಸುವ ಯತ್ನ ನಡೆಸಿದರಾದರು ಪೊಲೀಸರ ವಿರುದ್ಧವೇ ಘೋಷಣೆ ಕೂಗಿದ ಕಾರಣ ಪ್ರತಿಭಟನಾಕಾರರ ಪೈಕಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ಅವರ ಸೂಚನೆ ಮೇರೆಗೆ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಪಿಎಸ್ಐ ರಮೇಶ್ ಅವರುಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು.
ಈ ಸಂಬಂಧ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

andolanait

Recent Posts

ಜಾತಿಬೇಲಿಯ ಕಳಚಿಬಿಡುವ ಮಾರಿಹಬ್ಬಗಳು

ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ…

5 mins ago

‘ಗಾಡ್ ಫಾದರ್’ ಇಲ್ಲದೇ ಬರೆಯಲಾಗುವುದಿಲ್ಲವೇ?

ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು!…

8 mins ago

ಅವಕಾಶ ವಂಚಿತ ಚೆನ್ನೈ ಮಕ್ಕಳಿಗೆ ಪ್ರವಾಸ ಭಾಗ್ಯ

ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ಪ್ರತಿಯೊಂದು ಮಗುವಿಗೂ ಎಲ್ಲಾ ರೀತಿಯ ಅನುಭವ ಬೇಕು. ಆದರೆ ಎಲ್ಲ ಮಕ್ಕಳಿಗೂ ಅಂತಹ ಅವಕಾಶ ಒದಗಿ…

20 mins ago

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

10 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

11 hours ago