ಜಿಲ್ಲೆಗಳು

ಮಂಡ್ಯ : PFi ಜಿಲ್ಲಾಧ್ಯಕ್ಷ ಸಯ್ಯದ್ ಇರ್ಫಾನ್ ಪೊಲೀಸರ ವಶ

ಮಂಡ್ಯ : ರಾಷ್ಟ್ರೀಯ ತನಿಖೆ ಸಂಸ್ಥೆ ದೇಶಾದ್ಯಂತ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ ಸಂಘಟನೆಗಳ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ ಬಳಿಕ ಮಂಡ್ಯದಲ್ಲೂ ಪೊಲೀಸರು ಪಿಎಫ್ ಐ ಸಂಘಟನೆ ಜಿಲ್ಲಾಧ್ಯಕ್ಷನ ಮನೆ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ.
ನಗರದ ಗುತ್ತಲು ಬಡಾವಣೆಯ ಸಪ್ದರಿಯಾ ನಗರದಲ್ಲಿ ವಾಸವಾಗಿರುವ ಇರ್ಫಾನ್ 34 ಎಂಬಾತ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು, ಆತನನ್ನು ವಶಕ್ಕೆ ಪಡೆದರು.
ಬಳಿಕ ಆರೋಪಿಯನ್ನು ತಹಸೀಲ್ದಾರ್ ಮನೆಗೆ ಹಾಜರುಪಡಿಸಿದ ನಂತರ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಎನ್ಐಎ ದೇಶಾದ್ಯಂತ ದಾಳಿ ನಡೆಸಿದ ಕಾರಣ ಅದನ್ನು ವಿರೋಧಿಸಿ ಇರ್ಫಾನ್ ಪಿ ಎಫ್ ಐ ಕಾರ್ಯಕರ್ತರು ಮತ್ತು ಇತರರನ್ನು ಬಳಸಿಕೊಂಡು ಮಂಡ್ಯ ಮತ್ತು ಇತರೆ ಕಡೆಗಳಲ್ಲಿ ಗೊಂದಲ ಸೃಷ್ಟಿ ಮಾಡಲು ಮುನ್ನಾರ ನಡೆಸಿದ ಎನ್ನಲಾಗಿದೆ. ಈ ಬಗ್ಗೆ ಎಚ್ಚೆತ್ತ ಪೊಲೀಸರು ಆತನನ್ನ ಕರೆದು ತಿಳಿ ಹೇಳಿದ್ದರು. ಆದರೂ ಸಹ ನಗರದ ವಿವಿಧಡೆ ಸಭೆಗಳನ್ನು ನಡೆಸಿ ಗೊಂದಲ ಸೃಷ್ಟಿಸುವ ಹುನ್ನಾರ ಮಾಡಿದ್ದ.
ಇದರಿಂದ ಎಚ್ಚತ್ತ ಪೊಲೀಸರು ಇಂದು ಬೆಳಗ್ಗೆ 4 ಗಂಟೆ ವೇಳೆಗೆ ಆತನ ಮೇಲೆ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದರು. ಬಳಿಕ ತಹಸೀಲ್ದಾರ್ ಮಹಮದ್ ಕುಂಞ ಅಹಮದ್ ಅವರ ನಿವಾಸಕ್ಕೆ ಹಾಜರುಪಡಿಸಿ ನಂತರ ಅವರ ಆದೇಶದ ಮೇರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಆರೋಪಿ ಇರ್ಫಾನ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಗುತ್ತಲು ಬಡಾವಣೆಯ ಪಿಎಫ್ಐ ಕಾರ್ಯಕರ್ತರು ನಗರದ ವಿನೋಬ ರಸ್ತೆ ಬಳಿ ಇರುವ ತಹಸೀಲ್ದಾರ್ ನಿವಾಸದ ಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಮನವೊಲಿಸುವ ಯತ್ನ ನಡೆಸಿದರಾದರು ಪೊಲೀಸರ ವಿರುದ್ಧವೇ ಘೋಷಣೆ ಕೂಗಿದ ಕಾರಣ ಪ್ರತಿಭಟನಾಕಾರರ ಪೈಕಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ಅವರ ಸೂಚನೆ ಮೇರೆಗೆ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಪಿಎಸ್ಐ ರಮೇಶ್ ಅವರುಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು.
ಈ ಸಂಬಂಧ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

andolanait

Recent Posts

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

46 mins ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

48 mins ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

50 mins ago

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

53 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎಚ್‌ಐವಿ ಮಕ್ಕಳಿಗಾಗಿ ಉದ್ಯೋಗ ಬಿಟ್ಟ ದತ್ತಾ-ಸಂಧ್ಯಾ ದಂಪತಿ

ಪಂಜುಗಂಗೊಳ್ಳಿ  ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…

55 mins ago

ಕೊಡಗು ಜಿಲ್ಲೆಯತ್ತ ಪ್ರವಾಸಿಗರ ದಂಡು..!

ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…

1 hour ago