ಜಿಲ್ಲೆಗಳು

ಮಂಡ್ಯ : PFi ಜಿಲ್ಲಾಧ್ಯಕ್ಷ ಸಯ್ಯದ್ ಇರ್ಫಾನ್ ಪೊಲೀಸರ ವಶ

ಮಂಡ್ಯ : ರಾಷ್ಟ್ರೀಯ ತನಿಖೆ ಸಂಸ್ಥೆ ದೇಶಾದ್ಯಂತ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ ಸಂಘಟನೆಗಳ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ ಬಳಿಕ ಮಂಡ್ಯದಲ್ಲೂ ಪೊಲೀಸರು ಪಿಎಫ್ ಐ ಸಂಘಟನೆ ಜಿಲ್ಲಾಧ್ಯಕ್ಷನ ಮನೆ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ.
ನಗರದ ಗುತ್ತಲು ಬಡಾವಣೆಯ ಸಪ್ದರಿಯಾ ನಗರದಲ್ಲಿ ವಾಸವಾಗಿರುವ ಇರ್ಫಾನ್ 34 ಎಂಬಾತ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು, ಆತನನ್ನು ವಶಕ್ಕೆ ಪಡೆದರು.
ಬಳಿಕ ಆರೋಪಿಯನ್ನು ತಹಸೀಲ್ದಾರ್ ಮನೆಗೆ ಹಾಜರುಪಡಿಸಿದ ನಂತರ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಎನ್ಐಎ ದೇಶಾದ್ಯಂತ ದಾಳಿ ನಡೆಸಿದ ಕಾರಣ ಅದನ್ನು ವಿರೋಧಿಸಿ ಇರ್ಫಾನ್ ಪಿ ಎಫ್ ಐ ಕಾರ್ಯಕರ್ತರು ಮತ್ತು ಇತರರನ್ನು ಬಳಸಿಕೊಂಡು ಮಂಡ್ಯ ಮತ್ತು ಇತರೆ ಕಡೆಗಳಲ್ಲಿ ಗೊಂದಲ ಸೃಷ್ಟಿ ಮಾಡಲು ಮುನ್ನಾರ ನಡೆಸಿದ ಎನ್ನಲಾಗಿದೆ. ಈ ಬಗ್ಗೆ ಎಚ್ಚೆತ್ತ ಪೊಲೀಸರು ಆತನನ್ನ ಕರೆದು ತಿಳಿ ಹೇಳಿದ್ದರು. ಆದರೂ ಸಹ ನಗರದ ವಿವಿಧಡೆ ಸಭೆಗಳನ್ನು ನಡೆಸಿ ಗೊಂದಲ ಸೃಷ್ಟಿಸುವ ಹುನ್ನಾರ ಮಾಡಿದ್ದ.
ಇದರಿಂದ ಎಚ್ಚತ್ತ ಪೊಲೀಸರು ಇಂದು ಬೆಳಗ್ಗೆ 4 ಗಂಟೆ ವೇಳೆಗೆ ಆತನ ಮೇಲೆ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದರು. ಬಳಿಕ ತಹಸೀಲ್ದಾರ್ ಮಹಮದ್ ಕುಂಞ ಅಹಮದ್ ಅವರ ನಿವಾಸಕ್ಕೆ ಹಾಜರುಪಡಿಸಿ ನಂತರ ಅವರ ಆದೇಶದ ಮೇರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಆರೋಪಿ ಇರ್ಫಾನ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಗುತ್ತಲು ಬಡಾವಣೆಯ ಪಿಎಫ್ಐ ಕಾರ್ಯಕರ್ತರು ನಗರದ ವಿನೋಬ ರಸ್ತೆ ಬಳಿ ಇರುವ ತಹಸೀಲ್ದಾರ್ ನಿವಾಸದ ಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಮನವೊಲಿಸುವ ಯತ್ನ ನಡೆಸಿದರಾದರು ಪೊಲೀಸರ ವಿರುದ್ಧವೇ ಘೋಷಣೆ ಕೂಗಿದ ಕಾರಣ ಪ್ರತಿಭಟನಾಕಾರರ ಪೈಕಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ಅವರ ಸೂಚನೆ ಮೇರೆಗೆ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಪಿಎಸ್ಐ ರಮೇಶ್ ಅವರುಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು.
ಈ ಸಂಬಂಧ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago