ಜಿಲ್ಲೆಗಳು

ಮಂಡ್ಯ : PFi ಜಿಲ್ಲಾಧ್ಯಕ್ಷ ಸಯ್ಯದ್ ಇರ್ಫಾನ್ ಪೊಲೀಸರ ವಶ

ಮಂಡ್ಯ : ರಾಷ್ಟ್ರೀಯ ತನಿಖೆ ಸಂಸ್ಥೆ ದೇಶಾದ್ಯಂತ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ ಸಂಘಟನೆಗಳ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ ಬಳಿಕ ಮಂಡ್ಯದಲ್ಲೂ ಪೊಲೀಸರು ಪಿಎಫ್ ಐ ಸಂಘಟನೆ ಜಿಲ್ಲಾಧ್ಯಕ್ಷನ ಮನೆ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ.
ನಗರದ ಗುತ್ತಲು ಬಡಾವಣೆಯ ಸಪ್ದರಿಯಾ ನಗರದಲ್ಲಿ ವಾಸವಾಗಿರುವ ಇರ್ಫಾನ್ 34 ಎಂಬಾತ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು, ಆತನನ್ನು ವಶಕ್ಕೆ ಪಡೆದರು.
ಬಳಿಕ ಆರೋಪಿಯನ್ನು ತಹಸೀಲ್ದಾರ್ ಮನೆಗೆ ಹಾಜರುಪಡಿಸಿದ ನಂತರ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಎನ್ಐಎ ದೇಶಾದ್ಯಂತ ದಾಳಿ ನಡೆಸಿದ ಕಾರಣ ಅದನ್ನು ವಿರೋಧಿಸಿ ಇರ್ಫಾನ್ ಪಿ ಎಫ್ ಐ ಕಾರ್ಯಕರ್ತರು ಮತ್ತು ಇತರರನ್ನು ಬಳಸಿಕೊಂಡು ಮಂಡ್ಯ ಮತ್ತು ಇತರೆ ಕಡೆಗಳಲ್ಲಿ ಗೊಂದಲ ಸೃಷ್ಟಿ ಮಾಡಲು ಮುನ್ನಾರ ನಡೆಸಿದ ಎನ್ನಲಾಗಿದೆ. ಈ ಬಗ್ಗೆ ಎಚ್ಚೆತ್ತ ಪೊಲೀಸರು ಆತನನ್ನ ಕರೆದು ತಿಳಿ ಹೇಳಿದ್ದರು. ಆದರೂ ಸಹ ನಗರದ ವಿವಿಧಡೆ ಸಭೆಗಳನ್ನು ನಡೆಸಿ ಗೊಂದಲ ಸೃಷ್ಟಿಸುವ ಹುನ್ನಾರ ಮಾಡಿದ್ದ.
ಇದರಿಂದ ಎಚ್ಚತ್ತ ಪೊಲೀಸರು ಇಂದು ಬೆಳಗ್ಗೆ 4 ಗಂಟೆ ವೇಳೆಗೆ ಆತನ ಮೇಲೆ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದರು. ಬಳಿಕ ತಹಸೀಲ್ದಾರ್ ಮಹಮದ್ ಕುಂಞ ಅಹಮದ್ ಅವರ ನಿವಾಸಕ್ಕೆ ಹಾಜರುಪಡಿಸಿ ನಂತರ ಅವರ ಆದೇಶದ ಮೇರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಆರೋಪಿ ಇರ್ಫಾನ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಗುತ್ತಲು ಬಡಾವಣೆಯ ಪಿಎಫ್ಐ ಕಾರ್ಯಕರ್ತರು ನಗರದ ವಿನೋಬ ರಸ್ತೆ ಬಳಿ ಇರುವ ತಹಸೀಲ್ದಾರ್ ನಿವಾಸದ ಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಮನವೊಲಿಸುವ ಯತ್ನ ನಡೆಸಿದರಾದರು ಪೊಲೀಸರ ವಿರುದ್ಧವೇ ಘೋಷಣೆ ಕೂಗಿದ ಕಾರಣ ಪ್ರತಿಭಟನಾಕಾರರ ಪೈಕಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ಅವರ ಸೂಚನೆ ಮೇರೆಗೆ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಪಿಎಸ್ಐ ರಮೇಶ್ ಅವರುಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು.
ಈ ಸಂಬಂಧ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

11 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

12 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

12 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

12 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

13 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

22 hours ago