ಜಿಲ್ಲೆಗಳು

ಮಂಡ್ಯ : PFi ಜಿಲ್ಲಾಧ್ಯಕ್ಷ ಸಯ್ಯದ್ ಇರ್ಫಾನ್ ಪೊಲೀಸರ ವಶ

ಮಂಡ್ಯ : ರಾಷ್ಟ್ರೀಯ ತನಿಖೆ ಸಂಸ್ಥೆ ದೇಶಾದ್ಯಂತ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ ಸಂಘಟನೆಗಳ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ ಬಳಿಕ ಮಂಡ್ಯದಲ್ಲೂ ಪೊಲೀಸರು ಪಿಎಫ್ ಐ ಸಂಘಟನೆ ಜಿಲ್ಲಾಧ್ಯಕ್ಷನ ಮನೆ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ.
ನಗರದ ಗುತ್ತಲು ಬಡಾವಣೆಯ ಸಪ್ದರಿಯಾ ನಗರದಲ್ಲಿ ವಾಸವಾಗಿರುವ ಇರ್ಫಾನ್ 34 ಎಂಬಾತ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು, ಆತನನ್ನು ವಶಕ್ಕೆ ಪಡೆದರು.
ಬಳಿಕ ಆರೋಪಿಯನ್ನು ತಹಸೀಲ್ದಾರ್ ಮನೆಗೆ ಹಾಜರುಪಡಿಸಿದ ನಂತರ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಎನ್ಐಎ ದೇಶಾದ್ಯಂತ ದಾಳಿ ನಡೆಸಿದ ಕಾರಣ ಅದನ್ನು ವಿರೋಧಿಸಿ ಇರ್ಫಾನ್ ಪಿ ಎಫ್ ಐ ಕಾರ್ಯಕರ್ತರು ಮತ್ತು ಇತರರನ್ನು ಬಳಸಿಕೊಂಡು ಮಂಡ್ಯ ಮತ್ತು ಇತರೆ ಕಡೆಗಳಲ್ಲಿ ಗೊಂದಲ ಸೃಷ್ಟಿ ಮಾಡಲು ಮುನ್ನಾರ ನಡೆಸಿದ ಎನ್ನಲಾಗಿದೆ. ಈ ಬಗ್ಗೆ ಎಚ್ಚೆತ್ತ ಪೊಲೀಸರು ಆತನನ್ನ ಕರೆದು ತಿಳಿ ಹೇಳಿದ್ದರು. ಆದರೂ ಸಹ ನಗರದ ವಿವಿಧಡೆ ಸಭೆಗಳನ್ನು ನಡೆಸಿ ಗೊಂದಲ ಸೃಷ್ಟಿಸುವ ಹುನ್ನಾರ ಮಾಡಿದ್ದ.
ಇದರಿಂದ ಎಚ್ಚತ್ತ ಪೊಲೀಸರು ಇಂದು ಬೆಳಗ್ಗೆ 4 ಗಂಟೆ ವೇಳೆಗೆ ಆತನ ಮೇಲೆ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದರು. ಬಳಿಕ ತಹಸೀಲ್ದಾರ್ ಮಹಮದ್ ಕುಂಞ ಅಹಮದ್ ಅವರ ನಿವಾಸಕ್ಕೆ ಹಾಜರುಪಡಿಸಿ ನಂತರ ಅವರ ಆದೇಶದ ಮೇರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಆರೋಪಿ ಇರ್ಫಾನ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಗುತ್ತಲು ಬಡಾವಣೆಯ ಪಿಎಫ್ಐ ಕಾರ್ಯಕರ್ತರು ನಗರದ ವಿನೋಬ ರಸ್ತೆ ಬಳಿ ಇರುವ ತಹಸೀಲ್ದಾರ್ ನಿವಾಸದ ಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಮನವೊಲಿಸುವ ಯತ್ನ ನಡೆಸಿದರಾದರು ಪೊಲೀಸರ ವಿರುದ್ಧವೇ ಘೋಷಣೆ ಕೂಗಿದ ಕಾರಣ ಪ್ರತಿಭಟನಾಕಾರರ ಪೈಕಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ಅವರ ಸೂಚನೆ ಮೇರೆಗೆ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಪಿಎಸ್ಐ ರಮೇಶ್ ಅವರುಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು.
ಈ ಸಂಬಂಧ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

andolanait

Recent Posts

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

7 mins ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

3 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

3 hours ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

4 hours ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

4 hours ago