ಮಂಡ್ಯ : ರಾಷ್ಟ್ರೀಯ ತನಿಖೆ ಸಂಸ್ಥೆ ದೇಶಾದ್ಯಂತ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ ಸಂಘಟನೆಗಳ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ ಬಳಿಕ ಮಂಡ್ಯದಲ್ಲೂ ಪೊಲೀಸರು ಪಿಎಫ್ ಐ ಸಂಘಟನೆ ಜಿಲ್ಲಾಧ್ಯಕ್ಷನ ಮನೆ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ.
ನಗರದ ಗುತ್ತಲು ಬಡಾವಣೆಯ ಸಪ್ದರಿಯಾ ನಗರದಲ್ಲಿ ವಾಸವಾಗಿರುವ ಇರ್ಫಾನ್ 34 ಎಂಬಾತ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು, ಆತನನ್ನು ವಶಕ್ಕೆ ಪಡೆದರು.
ಬಳಿಕ ಆರೋಪಿಯನ್ನು ತಹಸೀಲ್ದಾರ್ ಮನೆಗೆ ಹಾಜರುಪಡಿಸಿದ ನಂತರ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಎನ್ಐಎ ದೇಶಾದ್ಯಂತ ದಾಳಿ ನಡೆಸಿದ ಕಾರಣ ಅದನ್ನು ವಿರೋಧಿಸಿ ಇರ್ಫಾನ್ ಪಿ ಎಫ್ ಐ ಕಾರ್ಯಕರ್ತರು ಮತ್ತು ಇತರರನ್ನು ಬಳಸಿಕೊಂಡು ಮಂಡ್ಯ ಮತ್ತು ಇತರೆ ಕಡೆಗಳಲ್ಲಿ ಗೊಂದಲ ಸೃಷ್ಟಿ ಮಾಡಲು ಮುನ್ನಾರ ನಡೆಸಿದ ಎನ್ನಲಾಗಿದೆ. ಈ ಬಗ್ಗೆ ಎಚ್ಚೆತ್ತ ಪೊಲೀಸರು ಆತನನ್ನ ಕರೆದು ತಿಳಿ ಹೇಳಿದ್ದರು. ಆದರೂ ಸಹ ನಗರದ ವಿವಿಧಡೆ ಸಭೆಗಳನ್ನು ನಡೆಸಿ ಗೊಂದಲ ಸೃಷ್ಟಿಸುವ ಹುನ್ನಾರ ಮಾಡಿದ್ದ.
ಇದರಿಂದ ಎಚ್ಚತ್ತ ಪೊಲೀಸರು ಇಂದು ಬೆಳಗ್ಗೆ 4 ಗಂಟೆ ವೇಳೆಗೆ ಆತನ ಮೇಲೆ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದರು. ಬಳಿಕ ತಹಸೀಲ್ದಾರ್ ಮಹಮದ್ ಕುಂಞ ಅಹಮದ್ ಅವರ ನಿವಾಸಕ್ಕೆ ಹಾಜರುಪಡಿಸಿ ನಂತರ ಅವರ ಆದೇಶದ ಮೇರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಆರೋಪಿ ಇರ್ಫಾನ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಗುತ್ತಲು ಬಡಾವಣೆಯ ಪಿಎಫ್ಐ ಕಾರ್ಯಕರ್ತರು ನಗರದ ವಿನೋಬ ರಸ್ತೆ ಬಳಿ ಇರುವ ತಹಸೀಲ್ದಾರ್ ನಿವಾಸದ ಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಮನವೊಲಿಸುವ ಯತ್ನ ನಡೆಸಿದರಾದರು ಪೊಲೀಸರ ವಿರುದ್ಧವೇ ಘೋಷಣೆ ಕೂಗಿದ ಕಾರಣ ಪ್ರತಿಭಟನಾಕಾರರ ಪೈಕಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ಅವರ ಸೂಚನೆ ಮೇರೆಗೆ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಪಿಎಸ್ಐ ರಮೇಶ್ ಅವರುಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು.
ಈ ಸಂಬಂಧ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…
ಪಾಲ್ಘಾರ್: ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯ ವಾಡಾ ತಾಲ್ಲೂಕಿನಲ್ಲಿ…
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ ಎಂದು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲಿನ ಝಳಕ್ಕೆ ಮನುಷ್ಯರು ಬಸವಳಿದಂತೆ ವನ್ಯಜೀವಿಗಳು ಕಂಗಲಾಗಿವೆ. ಅದರಂತೆ, ಬಿಸಿಲಿನ…
ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್…
ಬೆಂಗಳೂರು: ಒಂದೆಡೆ ಜೂನ್ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿದೆ. ಇದು ಗಾಯದ ಮೇಲೆ…