ಮೈಸೂರು: ಗುಪ್ತಚರ ವರದಿ ಹಿನ್ನೆಲೆಯಲ್ಲಿ ಮೈಸೂರಿನ ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.
ಕಳೆದ ವಾರ ದೇಶಾದ್ಯಂತ ಪಿಎಫ್ಐ ಸಂಘಟನೆಯ ಕಚೇರಿ ಮೇಲೆ ಹಾಗೂ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿ ಪಿಎಫ್ಐ ಕಾರ್ಯಕರ್ತರು ಹಾಗೂ ಮುಖಂಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಆ ವಿಚಾರಣೆ ಸಂದರ್ಭದಲ್ಲಿ ಕೆಲವು ಮಾಹಿತಿಗಳು ಹೊರಬಿದ್ದಿವೆ. ಎನ್ಐಎ ಅಧಿಕಾರಿಗಳು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿಗೆ ಮಾಹಿತಿ ನೀಡಿದ್ದು, ಆ ಮಾಹಿತಿಯ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಪಿಎಫ್ಐ ಜಿಲ್ಲಾಧ್ಯಕ್ಷ ಬಿಲಾಲ್ ಷರೀಫ್ ಅವರನ್ನು ಕಲ್ಯಾಣಗಿರಿ ನಿವಾಸದಲ್ಲಿ ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.
ಮತ್ತೊಬ್ಬ ಮೈಸೂರು ಜಿಲ್ಲಾ ಪಿಎಫ್ಐ ಮಾಜಿ ಕಾರ್ಯದರ್ಶಿ ಜಾಫರ್ ಷರೀಫ್ ಹಾಗೂ ಪಿಎಫ್ಐ ಸಕ್ರಿಯ ಕಾರ್ಯಕರ್ತ ಫೈರೋಜುಲ್ಲಾ ಷರೀಫ್ ಅವರನ್ನು ಮನೆಗಳಲ್ಲಿ ಬೆಳ್ಳಂಬೆಳಗ್ಗೆ ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…