ಜಿಲ್ಲೆಗಳು

ಮೈಸೂರು: ಸಾಲಗಾರರ ಕಾಟಕ್ಕೆ ಬೇಸತ್ತು ಪಿಜಿ ಓನರ್‌ ಆತ್ಮಹತ್ಯೆ

ಮೈಸೂರು: ನಗರದ ವಿಜಯನಗರದಲ್ಲಿ ಪಿಜಿ ನಡೆಸುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರೈಲ್ವೆ ಬಡಾವಣೆಯಲ್ಲಿ ನಡೆದಿದೆ.

ಜಯಶ್ರೀ ಎಂಬ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಡೆತ್‌ನೋಟ್‌ ಬರೆದಿಟ್ಟು ತನ್ನ ಸಾವಿಗೆ ಸಾಲದ ಬಾಧೆಯೇ ಕಾರಣ ಎಂಬುದನ್ನು ತಿಳಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಪಿಜಿ ಗಂಗಾಧರೇಶ್ವರ ಎಂಬ ಪಿಜಿ ನಡೆಸುತ್ತಿದ್ದ ಜಯಶ್ರೀ ಅವರು ಪಿಜಿ ಸಲುವಾಗಿ ಸಾಲ ಮಾಡಿದ್ದರು.

ಇನ್ನು ಹೆಚ್ಚಿನ ಆದಾಯ ಬಾರದ ಕಾರಣ ಮತ್ತಷ್ಟು ಸಾಲ ಮಾಡಿದ್ದರು ಎನ್ನಲಾಗಿದೆ. ಸಮಯಕ್ಕೆ ಸರಿಯಾಗಿ ಸಾಲ ಹಿಂದಿರುಗಿಸಲು ಜಯಶ್ರೀ ವಿಫಲವಾಗಿದ್ದು, ಸಾಲ ನೀಡಿದವರು ಪಿಜಿ ಬಳಿ ಬಂದು ಗಲಾಟೆ ಮಾಡಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಜಯಶ್ರೀ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೇ ಡೆತ್‌ನೋಟ್‌ನಲ್ಲಿ ಮಕ್ಕಳಿಗೆ ಒಳ್ಳೆ ತಾಯಿ ಆಗಲಿಲ್ಲ, ಸಾಲದ ತಾಯಿ ಆದೆ ಎಂದು ಜಯಶ್ರೀ ಬರೆದುಕೊಂಡಿದ್ದು, ಸಾವಿತ್ರಿ, ಸುಕನ್ಯ, ಪ್ರೇಮಾ, ದೇವಮ್ಮ, ಸಾಕಮ್ಮ, ಪುಷ್ಪಲತಾ, ಪುಷ್ಪ, ಸುಮ, ಶೋಭಾ, ವಿಜಯ, ಫೈನಾನ್ಸ್ ಮಾಲೀಕ ಪ್ರದೀಪ್ ಹಾಗೂ ಕುಮಾರ್ ಎಂಬುವವರು ಕಿರುಕುಳ ನೀಡುತ್ತಿದ್ದರು ಎಂದು ತಿಳಿಸಿದ್ದಾರೆ.

ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821

andolana

Recent Posts

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

1 hour ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

2 hours ago

ಶಿಕ್ಷಕರ ನೇಮಕಾತಿ ಶೀಘ್ರ : ಸಿಎಂ ಭರವಸೆ

ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…

2 hours ago

ಒಕ್ಕಲಿಗರ ಮೇಲೆ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ ಎಂದು ಸಿದ್ದರಾಮಯ್ಯ ಕಾಲೆಳೆದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…

2 hours ago

ಗಾಂಜಾ ಮಾರಾಟಕ್ಕೆ ಯತ್ನ : ಬಂಧನ

ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…

2 hours ago

ʻಮನ್‌ ಕಿ ಬಾತ್‌ʼನಲ್ಲಿ ಕರ್ನಾಟಕದ ರೈತರನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…

3 hours ago