ಮೈಸೂರು: ನಗರದ ವಿಜಯನಗರದಲ್ಲಿ ಪಿಜಿ ನಡೆಸುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರೈಲ್ವೆ ಬಡಾವಣೆಯಲ್ಲಿ ನಡೆದಿದೆ.
ಜಯಶ್ರೀ ಎಂಬ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಡೆತ್ನೋಟ್ ಬರೆದಿಟ್ಟು ತನ್ನ ಸಾವಿಗೆ ಸಾಲದ ಬಾಧೆಯೇ ಕಾರಣ ಎಂಬುದನ್ನು ತಿಳಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಪಿಜಿ ಗಂಗಾಧರೇಶ್ವರ ಎಂಬ ಪಿಜಿ ನಡೆಸುತ್ತಿದ್ದ ಜಯಶ್ರೀ ಅವರು ಪಿಜಿ ಸಲುವಾಗಿ ಸಾಲ ಮಾಡಿದ್ದರು.
ಇನ್ನು ಹೆಚ್ಚಿನ ಆದಾಯ ಬಾರದ ಕಾರಣ ಮತ್ತಷ್ಟು ಸಾಲ ಮಾಡಿದ್ದರು ಎನ್ನಲಾಗಿದೆ. ಸಮಯಕ್ಕೆ ಸರಿಯಾಗಿ ಸಾಲ ಹಿಂದಿರುಗಿಸಲು ಜಯಶ್ರೀ ವಿಫಲವಾಗಿದ್ದು, ಸಾಲ ನೀಡಿದವರು ಪಿಜಿ ಬಳಿ ಬಂದು ಗಲಾಟೆ ಮಾಡಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಜಯಶ್ರೀ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ.
ಅಲ್ಲದೇ ಡೆತ್ನೋಟ್ನಲ್ಲಿ ಮಕ್ಕಳಿಗೆ ಒಳ್ಳೆ ತಾಯಿ ಆಗಲಿಲ್ಲ, ಸಾಲದ ತಾಯಿ ಆದೆ ಎಂದು ಜಯಶ್ರೀ ಬರೆದುಕೊಂಡಿದ್ದು, ಸಾವಿತ್ರಿ, ಸುಕನ್ಯ, ಪ್ರೇಮಾ, ದೇವಮ್ಮ, ಸಾಕಮ್ಮ, ಪುಷ್ಪಲತಾ, ಪುಷ್ಪ, ಸುಮ, ಶೋಭಾ, ವಿಜಯ, ಫೈನಾನ್ಸ್ ಮಾಲೀಕ ಪ್ರದೀಪ್ ಹಾಗೂ ಕುಮಾರ್ ಎಂಬುವವರು ಕಿರುಕುಳ ನೀಡುತ್ತಿದ್ದರು ಎಂದು ತಿಳಿಸಿದ್ದಾರೆ.
ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…