ಮೈಸೂರು: ನಗರದ ವಿಜಯನಗರದಲ್ಲಿ ಪಿಜಿ ನಡೆಸುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರೈಲ್ವೆ ಬಡಾವಣೆಯಲ್ಲಿ ನಡೆದಿದೆ.
ಜಯಶ್ರೀ ಎಂಬ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಡೆತ್ನೋಟ್ ಬರೆದಿಟ್ಟು ತನ್ನ ಸಾವಿಗೆ ಸಾಲದ ಬಾಧೆಯೇ ಕಾರಣ ಎಂಬುದನ್ನು ತಿಳಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಪಿಜಿ ಗಂಗಾಧರೇಶ್ವರ ಎಂಬ ಪಿಜಿ ನಡೆಸುತ್ತಿದ್ದ ಜಯಶ್ರೀ ಅವರು ಪಿಜಿ ಸಲುವಾಗಿ ಸಾಲ ಮಾಡಿದ್ದರು.
ಇನ್ನು ಹೆಚ್ಚಿನ ಆದಾಯ ಬಾರದ ಕಾರಣ ಮತ್ತಷ್ಟು ಸಾಲ ಮಾಡಿದ್ದರು ಎನ್ನಲಾಗಿದೆ. ಸಮಯಕ್ಕೆ ಸರಿಯಾಗಿ ಸಾಲ ಹಿಂದಿರುಗಿಸಲು ಜಯಶ್ರೀ ವಿಫಲವಾಗಿದ್ದು, ಸಾಲ ನೀಡಿದವರು ಪಿಜಿ ಬಳಿ ಬಂದು ಗಲಾಟೆ ಮಾಡಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಜಯಶ್ರೀ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ.
ಅಲ್ಲದೇ ಡೆತ್ನೋಟ್ನಲ್ಲಿ ಮಕ್ಕಳಿಗೆ ಒಳ್ಳೆ ತಾಯಿ ಆಗಲಿಲ್ಲ, ಸಾಲದ ತಾಯಿ ಆದೆ ಎಂದು ಜಯಶ್ರೀ ಬರೆದುಕೊಂಡಿದ್ದು, ಸಾವಿತ್ರಿ, ಸುಕನ್ಯ, ಪ್ರೇಮಾ, ದೇವಮ್ಮ, ಸಾಕಮ್ಮ, ಪುಷ್ಪಲತಾ, ಪುಷ್ಪ, ಸುಮ, ಶೋಭಾ, ವಿಜಯ, ಫೈನಾನ್ಸ್ ಮಾಲೀಕ ಪ್ರದೀಪ್ ಹಾಗೂ ಕುಮಾರ್ ಎಂಬುವವರು ಕಿರುಕುಳ ನೀಡುತ್ತಿದ್ದರು ಎಂದು ತಿಳಿಸಿದ್ದಾರೆ.
ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…