ಜಿಲ್ಲೆಗಳು

ಮೈಸೂರು: ಸಾಲಗಾರರ ಕಾಟಕ್ಕೆ ಬೇಸತ್ತು ಪಿಜಿ ಓನರ್‌ ಆತ್ಮಹತ್ಯೆ

ಮೈಸೂರು: ನಗರದ ವಿಜಯನಗರದಲ್ಲಿ ಪಿಜಿ ನಡೆಸುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರೈಲ್ವೆ ಬಡಾವಣೆಯಲ್ಲಿ ನಡೆದಿದೆ.

ಜಯಶ್ರೀ ಎಂಬ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಡೆತ್‌ನೋಟ್‌ ಬರೆದಿಟ್ಟು ತನ್ನ ಸಾವಿಗೆ ಸಾಲದ ಬಾಧೆಯೇ ಕಾರಣ ಎಂಬುದನ್ನು ತಿಳಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಪಿಜಿ ಗಂಗಾಧರೇಶ್ವರ ಎಂಬ ಪಿಜಿ ನಡೆಸುತ್ತಿದ್ದ ಜಯಶ್ರೀ ಅವರು ಪಿಜಿ ಸಲುವಾಗಿ ಸಾಲ ಮಾಡಿದ್ದರು.

ಇನ್ನು ಹೆಚ್ಚಿನ ಆದಾಯ ಬಾರದ ಕಾರಣ ಮತ್ತಷ್ಟು ಸಾಲ ಮಾಡಿದ್ದರು ಎನ್ನಲಾಗಿದೆ. ಸಮಯಕ್ಕೆ ಸರಿಯಾಗಿ ಸಾಲ ಹಿಂದಿರುಗಿಸಲು ಜಯಶ್ರೀ ವಿಫಲವಾಗಿದ್ದು, ಸಾಲ ನೀಡಿದವರು ಪಿಜಿ ಬಳಿ ಬಂದು ಗಲಾಟೆ ಮಾಡಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಜಯಶ್ರೀ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೇ ಡೆತ್‌ನೋಟ್‌ನಲ್ಲಿ ಮಕ್ಕಳಿಗೆ ಒಳ್ಳೆ ತಾಯಿ ಆಗಲಿಲ್ಲ, ಸಾಲದ ತಾಯಿ ಆದೆ ಎಂದು ಜಯಶ್ರೀ ಬರೆದುಕೊಂಡಿದ್ದು, ಸಾವಿತ್ರಿ, ಸುಕನ್ಯ, ಪ್ರೇಮಾ, ದೇವಮ್ಮ, ಸಾಕಮ್ಮ, ಪುಷ್ಪಲತಾ, ಪುಷ್ಪ, ಸುಮ, ಶೋಭಾ, ವಿಜಯ, ಫೈನಾನ್ಸ್ ಮಾಲೀಕ ಪ್ರದೀಪ್ ಹಾಗೂ ಕುಮಾರ್ ಎಂಬುವವರು ಕಿರುಕುಳ ನೀಡುತ್ತಿದ್ದರು ಎಂದು ತಿಳಿಸಿದ್ದಾರೆ.

ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821

andolana

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

4 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

5 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

6 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

6 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

6 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

14 hours ago