ಜಿಲ್ಲೆಗಳು

ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ಕ್ರೀಡೆ ಸಹಕಾರಿ : ಫಾ.ಮದಲೈ

ಹನೂರು : ವಿದ್ಯಾರ್ಥಿಗಳು ಪಠ್ಯದ ಜೊತೆಗೆ  ಸಹ ಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ  ಎಂದು ಫಾ.ಮದಲೈ  ಮುತ್ತು ತಿಳಿಸಿದರು.

ಪಟ್ಟಣದ ಕ್ರಿಸ್ತರಾಜ ಶಾಲೆಯಲ್ಲಿ ಹಮ್ಮಿಕೊಂಡಿದ್ದ  ಮೈಸೂರು  ಧರ್ಮ ಕ್ಷೇತ್ರದ  ಶಿಕ್ಷಣ ಸಂಸ್ಥೆಗಳ ಜಿಲ್ಲಾ ಮಟ್ಟದ ಶಾಲಾ ಹಾಗೂ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಕ್ರೀಡೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ತುಂಬಾ ಅನುಕೂಲ ಆಗಲಿದೆ. ಎಲ್ಲರೂ ಭಾಗವಹಿಸಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದರು.

ಕ್ರಿಸ್ತರಾಜ ಶಾಲೆಯ ವ್ಯವಸ್ಥಾಪಕರಾದ ಫಾ. ರೋಷನ್ ಬಾಬು ಮಾತನಾಡಿ ಇಂದು ಮಕ್ಕಳು ಎಲ್ಲರೂ ಬಹಳ ಆಸಕ್ತಿಯಿಂದ ಭಾಗವಹಿಸಿದ್ದು ಗೆಲ್ಲುವ ಕಾತುರ ಎಲ್ಲರಲ್ಲೂ ಕಾಣುತ್ತಿದೆ ಎಲ್ಲರಿಗೂ ಶುಭವಾಗಲಿ ಎಂದು ಆಶಿಸಿದರು.

ನಾಗವಳ್ಳಿ ,ಮಾದಪುರ,ಜಾಗೇರಿ, ಕೊಳ್ಳೇಗಾಲ ,ಕಾಮಗೆರೆ ,
ತೋಮಿಯರಪಾಳ್ಯ,ಮಾರ್ಟಳ್ಳಿಕೌದಳ್ಳಿ,ಸಂದನಪಾಳ್ಯ ,ಹನೂರು ಸೇರಿದಂತೆ ಇನ್ನಿತರ
ಎಮ್ ಡಿ ಇಎಸ್  ವಿದ್ಯಾಸಂಸ್ಥೆಗಳ ಬಾಲಕರ ಹಾಗೂ ಬಾಲಕೀಯರ  32 ತಂಡಗಳ ಭಾಗವಹಿಸಿದ್ದವು.

ಇದೇ  ಸಂದರ್ಭದಲ್ಲಿ  ಫಾ. ಸಬಸ್ಟೀಯನ್ , ಫಾ. ಟೆನ್ನಿಕುರಿಯನ್,ಫಾ. ಸೂಸೈ,ಹಾಗೂ ಶಿಕ್ಷಕರು ಮಕ್ಕಳು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

2 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

2 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago