ಜಿಲ್ಲೆಗಳು

ಚಿತ್ರ ಚಿತ್ತಾರ; ಬೆಳಕಿನ ಚಮತ್ಕಾರ!

ಪಂಜಿನ ಕವಾಯತು ಮೈದಾನದಲ್ಲಿ ಆಕರ್ಷಿಸಿದ ಡ್ರೋನ್ ಶೋ, ಟೆಂಟ್ ಪೆಗ್ಗಿಂಗ್

ಮೈಸೂರು: ಮೈ ಜುಮ್ಮೆನಿಸುವಂತೆ ಮಾಡಿದ ಆಕರ್ಷಕ ಡ್ರೋನ್ ಶೋ, ದೇಶಪ್ರೇಮ ಉಕ್ಕಿಹರಿಸಿದ ಪಥಸಂಚಲನ, ಮನಸ್ಸಿಗೆ ಮುದ ನೀಡಿದ ನೃತ್ಯ ಪ್ರದರ್ಶನ, ಬೆಂಕಿಯೊಂದಿಗಿನ ಸರಸ, ಸೌಂಡ್ ಅಂಡ್ ಲೈಟ್ ಬೆಳಕಿನ ಚಿತ್ತಾರ…

ನಾಡಹಬ್ಬ ದಸರಾ ಅಂಗವಾಗಿ ಬುಧವಾರ ರಾತ್ರಿ ಬನ್ನಿಮಂಟಪದ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ನೋಡುಗರ ಮನ ಸೂರೆಗೊಳಿಸಿತು. ಕ್ರೀಡಾಂಗಣದಲ್ಲಿ ಕಿಕ್ಕಿರಿದ್ದು ನೆರೆದಿದ್ದ ೩೦ ಸಾವಿರಕ್ಕೂ ಹೆಚ್ಚು ಮಂದಿಯನ್ನು ವಿಸ್ಮಯ ಲೋಕಕ್ಕೆ ಕರೆದೊಯಿತು. ಎರಡೂವರೆ ಗಂಟೆಗಳ ಕಾಲ ನಡೆದ ಸಾಹಸ, ನೃತ್ಯ, ಸಂಗೀತ ಮತ್ತು ಡ್ರೋನ್ ಪ್ರದರ್ಶನ ಜನರನ್ನು ಮೂಕವಿಸ್ಮಿತಗೊಳಿಸಿದವು.

ರಾತ್ರಿ ೮.೦೬ಕ್ಕೆ ಆರಂಭವಾದ ಕಾರ್ಯಕ್ರಮ ರಾತ್ರಿ ೧೦ರವರೆಗೆ ನಡೆಯಿತು. ರಾಷ್ಟ್ರಗೀತೆ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾ ಯಿ ಅವರು ಗೌರವ ವಂದನೆ ಸ್ವೀಕರಿಸಿದರು. ಬಳಿಕ ೧೮ ತುಕಡಿಗಳ ಪರಿವೀಕ್ಷಣೆಯನ್ನು ತೆರೆದ ಜೀಪ್‌ನಲ್ಲಿ ವೀಕ್ಷಣೆ ಮಾಡಿದರು. ಈ ವೇಳೆ ಕುಶಾಲುತೋಪು ಹಾಗೂ ಮೂರು ಬಾರಿ ಒಟ್ಟು ೨೧ ಸಿಡಿಮದ್ದು ಸಿಡಿಸಲಾಯಿತು.

ನಂತರ ನಡೆದ ಆಕರ್ಷಕ ಪಥಸಂಚಲನ ನೆರೆದಿದ್ದವರಲ್ಲಿ ದೇಶಪ್ರೇಮ ಉಕ್ಕಿ ಹರಿಸಿತು. ಅಶ್ವಾರೋಹಿ ಪಡೆ, ನಗರ ಸಶಸ್ತ್ರ ಮೀಸಲು ಪಡೆ, ಕೆಎಸ್‌ಆರ್‌ಪಿ ತುಕಡಿಗಳು, ಗೃಹರಕ್ಷಕ ದಳ, ಎನ್‌ಸಿಸಿ, ಸೇವಾದಳ ಒಳಗೊಂಡಂತೆ ೧೮ ತಂಡಗಳು ಮುಖ್ಯ ದಳಪತಿ ಎಂ.ಜಿ. ನಾಗಾರಜ್ ಅವರ ನೇತೃತ್ವದಲ್ಲಿ ಪಥಸಂಚಲನದಲ್ಲಿ ಪಾಲ್ಗೊಂಡವು.


ಸೌಂಡ್ ಮತ್ತು ಲೈಟ್: ನಾನಾ ಬಣ್ಣದ ಬೆಳಕಿನ ನೃತ್ಯ ನೋಡುಗರ ಕಣ್ಮನ ಸೆಳೆಯಿತು. ಹಿಂದಿಯ ಹಾಡುಗಳು ಮತ್ತು ತಬಲ ವಾದ ಗಳು ಬೆಳಕಿನ ನೃತ್ಯಕ್ಕೆ ಹಿಮ್ಮೇಳವಾಗಿತ್ತು. ಡಿಎನ್‌ಎ ಎಂಟರ್ಟೇನ್ಮೆಂಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ೨೩೫ ಕಲಾವಿದರು ನೃತ್ಯ ಪ್ರದರ್ಶನ ನೀಡಿದರು. ’ಕನ್ನಡ ನಾಡಿನ ಜೀವ ನದಿ, ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ಇವನೇ ರಾಜಕುಮಾರ, ಸರ ಸರ ಬಂತು ದಸರಾ ಎಂಬ ಗೀತೆಗಳಿಗೆ ನೃತ್ಯ ಪ್ರದರ್ಶಿಸಿ ಎಲ್ಲರ ಗಮನಸೆಳೆದರು.

ಕೊನೆಯಲ್ಲಿ ಆಕರ್ಷಕ ಪಂಜಿನ ಕವಾಯತು ನಡೆಯಿತು. ಬೆಂಗಳೂರಿನ ತರಬೇತಿಯಲ್ಲಿ ನಿರತರಾಗಿರುವ ೩೦೦ ಪೊಲೀಸ್ ಪ್ರಶಿಕ್ಷಣಾರ್ಥಿಗಳು ಸಂಗೀತದ ತಾಳಕ್ಕೆ ತಕ್ಕಂತೆ ಬೆಂಕಿಯೊಂದಿಗೆ ಸರಸವಾಡಿದರು. ಸುಸ್ವಾಗತ’, ಕರ್ನಾಟಕ ಪೊಲೀಸ್’, ವೆಲ್ಕಂ ಟು ಆಲ್’, ‘ನಮ್ಮ ಮೈಸೂರು, ನಮ್ಮ ಹೆಮ್ಮೆ’, ‘ಜೈ ಚಾಮುಂಡಿ’, ‘೭೫ ಇಂಡಿಪೆಂಡೆನ್ಸ್ ಡೇ’ ಬರಹಗಳನ್ನು ಪಂಜಿನ ಮೂಲಕ ಮೂಡಿಸಿದರು. ೮ ಬಗೆಯ ವ್ಯಾಯಾಮವನ್ನು ಪ್ರದರ್ಶಿಸಲಾಯಿತು. ಅಂತಿಮವಾಗಿ ಆಕರ್ಷಕ ಬಾಣ ಬಿರುಸಿನೊಂದಿಗೆ ಪ್ರದರ್ಶನದೊಂದಿಗೆ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು.

ಹೊಸ ಅನುಭವ ನೀಡಿದ ಚಂಡೆ, ವಾದ್ಯಗಳ ನರ್ತನ!
ವಾದ್ಯ ಕಲಾವಿದರ ಚಂಡೆ ಹಾಗೂ ವಾದ್ಯಗಳ ನರ್ತನ ಕಾರ್ಯಕ್ರಮ ಪ್ರೇಕ್ಷಕರಿಗೆ ಹೊಸ ಅನುಭವ ನೀಡಿತು. ೬೦ ಕ್ಕೂ ಹೆಚ್ಚು ಕಲಾವಿದರು ತಾಳ, ಮದ್ದಳೆ, ಚಂಡೆ ಸೇರಿದಂತೆ ಅನೇಕ ವಾದ್ಯಗಳನ್ನು ಏಕಕಾಲದಲ್ಲಿ ಮೊಳಗಿಸುವ ಮೂಲಕ ಪ್ರೇಕ್ಷಕರನ್ನು ಬೇರೊಂದು ಲೋಕಕ್ಕೆ ಕರೆದೊಯ್ಯದ್ದರು.

ಟೆಂಟ್ ಪೆಗ್ಗಿಂಗ್
ಮೈಸೂರಿನ ಅಶ್ವಾರೋಹಿ ಪಡೆಯ ಸಿಬ್ಬಂದಿ ೧೨ ಕುದುರೆಗಳ ಜತೆ ನಡೆಸಿಕೊಟ್ಟ ಟೆಂಟ್ ಪೆಗ್ಗಿಂಗ್ ಸಾಹಸ ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿಕೊಂಡಿತು. ನೆಲದಲ್ಲಿ ನೆಟ್ಟಿದ್ದ ಉರಿಯುವ ಗೂಟಗಳನ್ನು ನಾಗಾಲೋಟದಿಂದ ಕುದುರೆ ಸವಾರಿ ಮಾಡುತ್ತಾ ಬಂದು ಭರ್ಜಿಯಿಂದ ಮೇಲಕ್ಕೆತ್ತುವ ಸಾಹಸ ಎಲ್ಲರನ್ನು ರೋಮಾಂಚಗೊಳಿಸಿತು.

ಆಕರ್ಷಕ ಡ್ರೋನ್ ಶೋ
ಆಕಾಶದಲ್ಲಿ ಮೂಡಿದ ಬಣ್ಣ ಬಣ್ಣದ ಡ್ರೋಣ್ ಚಿತ್ತಾರಗಳು ನೋಡುಗರ ಮೈ ಜುಮ್ಮೆನಿಸಿತು. ಡಿಎನ್‌ಎ ಎಂಟರ್ಟೈನ್‌ಮೆಂಟ್ ವತಿಯಿಂದ ಹಮ್ಮಿಕೊಂಡಿದ್ದ ‘ಡ್ರೋನ್ ಶೋ’ ಸುಮಾರು ೧೦ ನಿಮಿಷಗಳ ನಡೆಯಿತು. ೨೫೦ಕ್ಕೂ ಹೆಚ್ಚು ಡ್ರೋನ್‌ಗಳು ಹಾರಾಡಿ ‘ಹ್ಯಾಪಿ ದಸರಾ, ಗಣೇಶನ ಮುಖ, ಅರಮನೆಯ ಚಿತ್ರ, ಮೈಸೂರು ಸಿಂಹಾಸನ, ವಾಲಗ, ಗಂಡಭೇರುಂಡ’ ಚಿತ್ರಗಳನ್ನು ಡ್ರೋನ್ ಮೂಲಕ ಬಾನಿನ ಅಂಗಳದಲ್ಲಿ ಮೂಡಿಸಿ ನೆರೆದಿದ್ದವರನ್ನು ಆಶ್ಚರ್ಯಚಕಿತರನ್ನಾಗಿಸಿತು.

andolana

Recent Posts

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…

23 mins ago

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

1 hour ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

1 hour ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

1 hour ago

ಖ್ಯಾತ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನ

ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…

1 hour ago

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

3 hours ago