ಜಿಲ್ಲೆಗಳು

ಚಿತ್ರ ಚಿತ್ತಾರ; ಬೆಳಕಿನ ಚಮತ್ಕಾರ!

ಪಂಜಿನ ಕವಾಯತು ಮೈದಾನದಲ್ಲಿ ಆಕರ್ಷಿಸಿದ ಡ್ರೋನ್ ಶೋ, ಟೆಂಟ್ ಪೆಗ್ಗಿಂಗ್

ಮೈಸೂರು: ಮೈ ಜುಮ್ಮೆನಿಸುವಂತೆ ಮಾಡಿದ ಆಕರ್ಷಕ ಡ್ರೋನ್ ಶೋ, ದೇಶಪ್ರೇಮ ಉಕ್ಕಿಹರಿಸಿದ ಪಥಸಂಚಲನ, ಮನಸ್ಸಿಗೆ ಮುದ ನೀಡಿದ ನೃತ್ಯ ಪ್ರದರ್ಶನ, ಬೆಂಕಿಯೊಂದಿಗಿನ ಸರಸ, ಸೌಂಡ್ ಅಂಡ್ ಲೈಟ್ ಬೆಳಕಿನ ಚಿತ್ತಾರ…

ನಾಡಹಬ್ಬ ದಸರಾ ಅಂಗವಾಗಿ ಬುಧವಾರ ರಾತ್ರಿ ಬನ್ನಿಮಂಟಪದ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ನೋಡುಗರ ಮನ ಸೂರೆಗೊಳಿಸಿತು. ಕ್ರೀಡಾಂಗಣದಲ್ಲಿ ಕಿಕ್ಕಿರಿದ್ದು ನೆರೆದಿದ್ದ ೩೦ ಸಾವಿರಕ್ಕೂ ಹೆಚ್ಚು ಮಂದಿಯನ್ನು ವಿಸ್ಮಯ ಲೋಕಕ್ಕೆ ಕರೆದೊಯಿತು. ಎರಡೂವರೆ ಗಂಟೆಗಳ ಕಾಲ ನಡೆದ ಸಾಹಸ, ನೃತ್ಯ, ಸಂಗೀತ ಮತ್ತು ಡ್ರೋನ್ ಪ್ರದರ್ಶನ ಜನರನ್ನು ಮೂಕವಿಸ್ಮಿತಗೊಳಿಸಿದವು.

ರಾತ್ರಿ ೮.೦೬ಕ್ಕೆ ಆರಂಭವಾದ ಕಾರ್ಯಕ್ರಮ ರಾತ್ರಿ ೧೦ರವರೆಗೆ ನಡೆಯಿತು. ರಾಷ್ಟ್ರಗೀತೆ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾ ಯಿ ಅವರು ಗೌರವ ವಂದನೆ ಸ್ವೀಕರಿಸಿದರು. ಬಳಿಕ ೧೮ ತುಕಡಿಗಳ ಪರಿವೀಕ್ಷಣೆಯನ್ನು ತೆರೆದ ಜೀಪ್‌ನಲ್ಲಿ ವೀಕ್ಷಣೆ ಮಾಡಿದರು. ಈ ವೇಳೆ ಕುಶಾಲುತೋಪು ಹಾಗೂ ಮೂರು ಬಾರಿ ಒಟ್ಟು ೨೧ ಸಿಡಿಮದ್ದು ಸಿಡಿಸಲಾಯಿತು.

ನಂತರ ನಡೆದ ಆಕರ್ಷಕ ಪಥಸಂಚಲನ ನೆರೆದಿದ್ದವರಲ್ಲಿ ದೇಶಪ್ರೇಮ ಉಕ್ಕಿ ಹರಿಸಿತು. ಅಶ್ವಾರೋಹಿ ಪಡೆ, ನಗರ ಸಶಸ್ತ್ರ ಮೀಸಲು ಪಡೆ, ಕೆಎಸ್‌ಆರ್‌ಪಿ ತುಕಡಿಗಳು, ಗೃಹರಕ್ಷಕ ದಳ, ಎನ್‌ಸಿಸಿ, ಸೇವಾದಳ ಒಳಗೊಂಡಂತೆ ೧೮ ತಂಡಗಳು ಮುಖ್ಯ ದಳಪತಿ ಎಂ.ಜಿ. ನಾಗಾರಜ್ ಅವರ ನೇತೃತ್ವದಲ್ಲಿ ಪಥಸಂಚಲನದಲ್ಲಿ ಪಾಲ್ಗೊಂಡವು.


ಸೌಂಡ್ ಮತ್ತು ಲೈಟ್: ನಾನಾ ಬಣ್ಣದ ಬೆಳಕಿನ ನೃತ್ಯ ನೋಡುಗರ ಕಣ್ಮನ ಸೆಳೆಯಿತು. ಹಿಂದಿಯ ಹಾಡುಗಳು ಮತ್ತು ತಬಲ ವಾದ ಗಳು ಬೆಳಕಿನ ನೃತ್ಯಕ್ಕೆ ಹಿಮ್ಮೇಳವಾಗಿತ್ತು. ಡಿಎನ್‌ಎ ಎಂಟರ್ಟೇನ್ಮೆಂಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ೨೩೫ ಕಲಾವಿದರು ನೃತ್ಯ ಪ್ರದರ್ಶನ ನೀಡಿದರು. ’ಕನ್ನಡ ನಾಡಿನ ಜೀವ ನದಿ, ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ಇವನೇ ರಾಜಕುಮಾರ, ಸರ ಸರ ಬಂತು ದಸರಾ ಎಂಬ ಗೀತೆಗಳಿಗೆ ನೃತ್ಯ ಪ್ರದರ್ಶಿಸಿ ಎಲ್ಲರ ಗಮನಸೆಳೆದರು.

ಕೊನೆಯಲ್ಲಿ ಆಕರ್ಷಕ ಪಂಜಿನ ಕವಾಯತು ನಡೆಯಿತು. ಬೆಂಗಳೂರಿನ ತರಬೇತಿಯಲ್ಲಿ ನಿರತರಾಗಿರುವ ೩೦೦ ಪೊಲೀಸ್ ಪ್ರಶಿಕ್ಷಣಾರ್ಥಿಗಳು ಸಂಗೀತದ ತಾಳಕ್ಕೆ ತಕ್ಕಂತೆ ಬೆಂಕಿಯೊಂದಿಗೆ ಸರಸವಾಡಿದರು. ಸುಸ್ವಾಗತ’, ಕರ್ನಾಟಕ ಪೊಲೀಸ್’, ವೆಲ್ಕಂ ಟು ಆಲ್’, ‘ನಮ್ಮ ಮೈಸೂರು, ನಮ್ಮ ಹೆಮ್ಮೆ’, ‘ಜೈ ಚಾಮುಂಡಿ’, ‘೭೫ ಇಂಡಿಪೆಂಡೆನ್ಸ್ ಡೇ’ ಬರಹಗಳನ್ನು ಪಂಜಿನ ಮೂಲಕ ಮೂಡಿಸಿದರು. ೮ ಬಗೆಯ ವ್ಯಾಯಾಮವನ್ನು ಪ್ರದರ್ಶಿಸಲಾಯಿತು. ಅಂತಿಮವಾಗಿ ಆಕರ್ಷಕ ಬಾಣ ಬಿರುಸಿನೊಂದಿಗೆ ಪ್ರದರ್ಶನದೊಂದಿಗೆ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು.

ಹೊಸ ಅನುಭವ ನೀಡಿದ ಚಂಡೆ, ವಾದ್ಯಗಳ ನರ್ತನ!
ವಾದ್ಯ ಕಲಾವಿದರ ಚಂಡೆ ಹಾಗೂ ವಾದ್ಯಗಳ ನರ್ತನ ಕಾರ್ಯಕ್ರಮ ಪ್ರೇಕ್ಷಕರಿಗೆ ಹೊಸ ಅನುಭವ ನೀಡಿತು. ೬೦ ಕ್ಕೂ ಹೆಚ್ಚು ಕಲಾವಿದರು ತಾಳ, ಮದ್ದಳೆ, ಚಂಡೆ ಸೇರಿದಂತೆ ಅನೇಕ ವಾದ್ಯಗಳನ್ನು ಏಕಕಾಲದಲ್ಲಿ ಮೊಳಗಿಸುವ ಮೂಲಕ ಪ್ರೇಕ್ಷಕರನ್ನು ಬೇರೊಂದು ಲೋಕಕ್ಕೆ ಕರೆದೊಯ್ಯದ್ದರು.

ಟೆಂಟ್ ಪೆಗ್ಗಿಂಗ್
ಮೈಸೂರಿನ ಅಶ್ವಾರೋಹಿ ಪಡೆಯ ಸಿಬ್ಬಂದಿ ೧೨ ಕುದುರೆಗಳ ಜತೆ ನಡೆಸಿಕೊಟ್ಟ ಟೆಂಟ್ ಪೆಗ್ಗಿಂಗ್ ಸಾಹಸ ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿಕೊಂಡಿತು. ನೆಲದಲ್ಲಿ ನೆಟ್ಟಿದ್ದ ಉರಿಯುವ ಗೂಟಗಳನ್ನು ನಾಗಾಲೋಟದಿಂದ ಕುದುರೆ ಸವಾರಿ ಮಾಡುತ್ತಾ ಬಂದು ಭರ್ಜಿಯಿಂದ ಮೇಲಕ್ಕೆತ್ತುವ ಸಾಹಸ ಎಲ್ಲರನ್ನು ರೋಮಾಂಚಗೊಳಿಸಿತು.

ಆಕರ್ಷಕ ಡ್ರೋನ್ ಶೋ
ಆಕಾಶದಲ್ಲಿ ಮೂಡಿದ ಬಣ್ಣ ಬಣ್ಣದ ಡ್ರೋಣ್ ಚಿತ್ತಾರಗಳು ನೋಡುಗರ ಮೈ ಜುಮ್ಮೆನಿಸಿತು. ಡಿಎನ್‌ಎ ಎಂಟರ್ಟೈನ್‌ಮೆಂಟ್ ವತಿಯಿಂದ ಹಮ್ಮಿಕೊಂಡಿದ್ದ ‘ಡ್ರೋನ್ ಶೋ’ ಸುಮಾರು ೧೦ ನಿಮಿಷಗಳ ನಡೆಯಿತು. ೨೫೦ಕ್ಕೂ ಹೆಚ್ಚು ಡ್ರೋನ್‌ಗಳು ಹಾರಾಡಿ ‘ಹ್ಯಾಪಿ ದಸರಾ, ಗಣೇಶನ ಮುಖ, ಅರಮನೆಯ ಚಿತ್ರ, ಮೈಸೂರು ಸಿಂಹಾಸನ, ವಾಲಗ, ಗಂಡಭೇರುಂಡ’ ಚಿತ್ರಗಳನ್ನು ಡ್ರೋನ್ ಮೂಲಕ ಬಾನಿನ ಅಂಗಳದಲ್ಲಿ ಮೂಡಿಸಿ ನೆರೆದಿದ್ದವರನ್ನು ಆಶ್ಚರ್ಯಚಕಿತರನ್ನಾಗಿಸಿತು.

andolana

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

13 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

13 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

15 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

15 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

15 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

15 hours ago