ಪಿರಿಯಾಪಟ್ಟಣ : ತಂಬಾಕು ಬೆಲೆ ದಿಢೀರ್ ಕುಸಿತದಿಂದ ಆಕ್ರೋಶಗೊಂಡ ರೈತರು ಉತ್ತಮ ಬೆಲೆ ನೀಡುವಂತೆ ಆಗ್ರಹಿಸಿ ತಾಲ್ಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯನ್ನು ಸ್ಥಗಿತಗೊಳಿಸಿ, ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರಿಂದ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ.
ತಾಲ್ಲೂಕಿನ ಕಗ್ಗುಂಡಿ ಹರಾಜು ಮಾರುಕಟ್ಟೆಯಲ್ಲಿ ಬುಧವಾರ ಎಂದಿನಂತೆ ಹರಾಜು ಪ್ರಕ್ರಿಯೇ ಆರಂಭವಾಗುತ್ತಿದ್ದಂತೆ ಉತ್ತಮ ದರ್ಜೆಯ (ಗ್ರೇಡ್ ಒನ್) ತಂಬಾಕಿಗೆ ೨೩೦ ರೂ. ಹಾಗೂ ಮಧ್ಯಮ ದರ್ಜೆ ತಂಬಾಕಿಗೆ (ಮಧ್ಯಮ ದರ್ಜೆ) ೧೮೦ ರೂ.ಗಳಿಗೆ ಮಾರಾಟವಾಯಿತು. ಇದರಿಂದ ಪ್ರತಿ ಕೆಜಿಗೆ ೩೦ ಹಾಗೂ ೭೦ ರೂ. ಕಡಿಮೆಯಾಗುತ್ತಿತ್ತು. ಇದರಿಂದ ಆಕ್ರೋಶಗೊಂಡ ರೈತರು ಏಕಾಏಕಿ ತಂಬಾಕು ಬೆಲೆಯನ್ನು ಕಡಿಮೆ ಮಾಡಲಾಗಿದೆ ಎಂದು ಆರೋಪಿಸಿ ಹರಾಜು ಪ್ರಕ್ರಿಯೆಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಆಕ್ರೋಶಗೊಂಡ ರೈತರನ್ನು ಸಮಾಧಾನಪಡಿಸಲು ಯತ್ನಿಸಿದ ತಂಬಾಕು ಹರಾಜು ಅಧೀಕ್ಷಕರ ಮಾತಿಗೂ ಕ್ಯಾರೆ ಎನ್ನದ ರೈತರು, ರಸ್ತೆ ತಡೆದು ಪ್ರತಿಭಟನೆ ನಡೆಸಲು ಮುಂದಾದರು. ಯಾವುದೇ ಸಬೂಬು ಹೇಳದೆ ಹಿಂದಿನ ದಿನದ ದರವನ್ನು ನೀಡಿ, ಇಲ್ಲದಿದ್ದರೆ ಹರಾಜು ಪ್ರಕ್ರಿಯೆಯನ್ನು ನಿಲ್ಲಿಸಿ ಎಂದು ಆಗ್ರಹಿಸಿದರು.
ಈ ವೇಳೆ ರಸ್ತೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಸಂಚಾರಕ್ಕೆ ಅಡಚಣೆಯಾಗಿದ್ದರಿಂದ ಪ್ರತಿಭಟನಾಕಾರರಿಗೆ ರಸ್ತೆಯ ಬದಿಯಲ್ಲಿ ನಿಂತು ಪ್ರತಿಭಟನೆ ನಡೆಸಲು ಮನವಿ ಮಾಡಿದರು. ಆದರೆ, ಇದಕ್ಕೆ ರೈತರು ಜಗ್ಗದಿದ್ದಾಗ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಸುಮಾರು ೧೦ ಮಂದಿ ರೈತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು. ಗುರುವಾರ ಬೆಳಿಗ್ಗೆ ೯ ಗಂಟೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಸ್ಥಿತಿ ಅವಲೋಕಿಸಲು ಕಗ್ಗುಂಡಿ ಮಾರುಕಟ್ಟೆಗೆ ಭೇಟಿ ನೀಡಲಿದ್ದಾರೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…