ಪಿರಿಯಾಪಟ್ಟಣ : ತಂಬಾಕು ಬೆಲೆ ದಿಢೀರ್ ಕುಸಿತದಿಂದ ಆಕ್ರೋಶಗೊಂಡ ರೈತರು ಉತ್ತಮ ಬೆಲೆ ನೀಡುವಂತೆ ಆಗ್ರಹಿಸಿ ತಾಲ್ಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯನ್ನು ಸ್ಥಗಿತಗೊಳಿಸಿ, ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರಿಂದ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ.
ತಾಲ್ಲೂಕಿನ ಕಗ್ಗುಂಡಿ ಹರಾಜು ಮಾರುಕಟ್ಟೆಯಲ್ಲಿ ಬುಧವಾರ ಎಂದಿನಂತೆ ಹರಾಜು ಪ್ರಕ್ರಿಯೇ ಆರಂಭವಾಗುತ್ತಿದ್ದಂತೆ ಉತ್ತಮ ದರ್ಜೆಯ (ಗ್ರೇಡ್ ಒನ್) ತಂಬಾಕಿಗೆ ೨೩೦ ರೂ. ಹಾಗೂ ಮಧ್ಯಮ ದರ್ಜೆ ತಂಬಾಕಿಗೆ (ಮಧ್ಯಮ ದರ್ಜೆ) ೧೮೦ ರೂ.ಗಳಿಗೆ ಮಾರಾಟವಾಯಿತು. ಇದರಿಂದ ಪ್ರತಿ ಕೆಜಿಗೆ ೩೦ ಹಾಗೂ ೭೦ ರೂ. ಕಡಿಮೆಯಾಗುತ್ತಿತ್ತು. ಇದರಿಂದ ಆಕ್ರೋಶಗೊಂಡ ರೈತರು ಏಕಾಏಕಿ ತಂಬಾಕು ಬೆಲೆಯನ್ನು ಕಡಿಮೆ ಮಾಡಲಾಗಿದೆ ಎಂದು ಆರೋಪಿಸಿ ಹರಾಜು ಪ್ರಕ್ರಿಯೆಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಆಕ್ರೋಶಗೊಂಡ ರೈತರನ್ನು ಸಮಾಧಾನಪಡಿಸಲು ಯತ್ನಿಸಿದ ತಂಬಾಕು ಹರಾಜು ಅಧೀಕ್ಷಕರ ಮಾತಿಗೂ ಕ್ಯಾರೆ ಎನ್ನದ ರೈತರು, ರಸ್ತೆ ತಡೆದು ಪ್ರತಿಭಟನೆ ನಡೆಸಲು ಮುಂದಾದರು. ಯಾವುದೇ ಸಬೂಬು ಹೇಳದೆ ಹಿಂದಿನ ದಿನದ ದರವನ್ನು ನೀಡಿ, ಇಲ್ಲದಿದ್ದರೆ ಹರಾಜು ಪ್ರಕ್ರಿಯೆಯನ್ನು ನಿಲ್ಲಿಸಿ ಎಂದು ಆಗ್ರಹಿಸಿದರು.
ಈ ವೇಳೆ ರಸ್ತೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಸಂಚಾರಕ್ಕೆ ಅಡಚಣೆಯಾಗಿದ್ದರಿಂದ ಪ್ರತಿಭಟನಾಕಾರರಿಗೆ ರಸ್ತೆಯ ಬದಿಯಲ್ಲಿ ನಿಂತು ಪ್ರತಿಭಟನೆ ನಡೆಸಲು ಮನವಿ ಮಾಡಿದರು. ಆದರೆ, ಇದಕ್ಕೆ ರೈತರು ಜಗ್ಗದಿದ್ದಾಗ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಸುಮಾರು ೧೦ ಮಂದಿ ರೈತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು. ಗುರುವಾರ ಬೆಳಿಗ್ಗೆ ೯ ಗಂಟೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಸ್ಥಿತಿ ಅವಲೋಕಿಸಲು ಕಗ್ಗುಂಡಿ ಮಾರುಕಟ್ಟೆಗೆ ಭೇಟಿ ನೀಡಲಿದ್ದಾರೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…