ಜಿಲ್ಲೆಗಳು

ಅರಮನೆ ಆವರಣದಲ್ಲಿ ಮನೆಮಾಡಿದ ಸಂಭ್ರಮ : ಗಮನ ಸೆಳೆದ ಲಕ್ಮೀ ಆನೆ

ಮೈಸೂರು: ದಸರಾ ಉತ್ಸವಕ್ಕೆ ಬಂದಿದ್ದ ಆನೆಗಳ ತಂಡದಲ್ಲಿ ಲಕ್ಷ್ಮೀ ಎಂಬ ಆನೆಯು ಮಂಗಳವಾರ ರಾತ್ರಿ ಗಂಡು ಮರಿಗೆ ಜನ್ಮ ನೀಡಿದ್ದು, ಅರಮನೆ ಆವರಣದಲ್ಲಿ ಸಂಭ್ರಮ ಮನೆಮಾಡಿದೆ.

ಧರ್ಮಸ್ಥಳದ ದೇವಸ್ಥಾನದಲ್ಲಿ ಇದ್ದ ಈ ಆನೆಯನ್ನು ಅರಣ್ಯ ಇಲಾಖೆ ಆದೇಶ ಮೇರೆಗೆ ನಾಗರಹೊಳೆಯ ಅರಣ್ಯಕ್ಕೆ ಕರೆತರಲಾಗಿತ್ತು. ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುವ ಗಜಪಡೆಯೊಂದಿಗೆ ಲಕ್ಷ್ಮೀಯನ್ನೂ ನಗರಕ್ಕೆ ಕರೆತರಲಾಗಿತ್ತು. ಮಂಗಳವಾರ ರಾತ್ರಿ 11 ಗಂಟೆಗೆ ಸಮಯದಲ್ಲಿ ಗಂಡು ಮರಿಗೆ ಜನ್ಮ ನೀಡಿದೆ. ದಸರಾ ಉತ್ಸವಕ್ಕೆ ಬಂದ ಆನೆಗಳ ಪೈಕಿ ಕಳೆದ 12 ವರ್ಷಗಳ ನಂತರ ಅರಮನೆಯಲ್ಲಿ ಆನೆಯೊಂದು ಮರಿಗೆ ಜನ್ಮ ನೀಡಿದ್ದು ಸಂತಸ ತಂದಿದೆ. ತಾಯಿ ಹಾಗೂ ಮರಿ ಆರೋಗ್ಯವಾಗಿದ್ದು, ಇನ್ನೂ ಕೆಲವು ದಿನಗಳ ಕಾಲ ದಸರಾ ತಯಾರಿಯಲ್ಲಿ ಪಾಲ್ಗೊಳ್ಳುವುದಿಲ್ಲ ಹಾಗೂ ಜನರ ವೀಕ್ಷಣೆಯನ್ನು ಸಹ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

ಹುಣಸೂರು: ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಾಹಿತಿ ಪ್ರಕಾರ…

12 mins ago

ಟಿ.ನರಸೀಪುರ: ಗುಂಜಾನರಸಿಂಹಸ್ವಾಮಿ ದರ್ಶನಕ್ಕೆ ಹರಿದುಬಂದ ಜನಸಾಗರ

ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…

27 mins ago

ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ: ಸಚಿವ ಪರಮೇಶ್ವರ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…

1 hour ago

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ

ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್‌…

2 hours ago

ಮೈಸೂರಿನಲ್ಲಿ ವೈಕುಂಠ ಏಕಾದಶಿ ಸಂಭ್ರಮ: ದೇಗುಲಗಳಲ್ಲಿ ಭಕ್ತಸಾಗರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…

2 hours ago

ಹೊಸ ವರ್ಷಾಚರಣೆ: ರಾಜ್ಯದೆಲ್ಲೆಡೆ ತುರ್ತು ಚಿಕಿತ್ಸಾ ಸೇವೆಗೆ ಸಿದ್ಧತೆ

ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ…

3 hours ago