ಜಿಲ್ಲೆಗಳು

ಅರಮನೆ ಆವರಣದಲ್ಲಿ ಮನೆಮಾಡಿದ ಸಂಭ್ರಮ : ಗಮನ ಸೆಳೆದ ಲಕ್ಮೀ ಆನೆ

ಮೈಸೂರು: ದಸರಾ ಉತ್ಸವಕ್ಕೆ ಬಂದಿದ್ದ ಆನೆಗಳ ತಂಡದಲ್ಲಿ ಲಕ್ಷ್ಮೀ ಎಂಬ ಆನೆಯು ಮಂಗಳವಾರ ರಾತ್ರಿ ಗಂಡು ಮರಿಗೆ ಜನ್ಮ ನೀಡಿದ್ದು, ಅರಮನೆ ಆವರಣದಲ್ಲಿ ಸಂಭ್ರಮ ಮನೆಮಾಡಿದೆ.

ಧರ್ಮಸ್ಥಳದ ದೇವಸ್ಥಾನದಲ್ಲಿ ಇದ್ದ ಈ ಆನೆಯನ್ನು ಅರಣ್ಯ ಇಲಾಖೆ ಆದೇಶ ಮೇರೆಗೆ ನಾಗರಹೊಳೆಯ ಅರಣ್ಯಕ್ಕೆ ಕರೆತರಲಾಗಿತ್ತು. ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುವ ಗಜಪಡೆಯೊಂದಿಗೆ ಲಕ್ಷ್ಮೀಯನ್ನೂ ನಗರಕ್ಕೆ ಕರೆತರಲಾಗಿತ್ತು. ಮಂಗಳವಾರ ರಾತ್ರಿ 11 ಗಂಟೆಗೆ ಸಮಯದಲ್ಲಿ ಗಂಡು ಮರಿಗೆ ಜನ್ಮ ನೀಡಿದೆ. ದಸರಾ ಉತ್ಸವಕ್ಕೆ ಬಂದ ಆನೆಗಳ ಪೈಕಿ ಕಳೆದ 12 ವರ್ಷಗಳ ನಂತರ ಅರಮನೆಯಲ್ಲಿ ಆನೆಯೊಂದು ಮರಿಗೆ ಜನ್ಮ ನೀಡಿದ್ದು ಸಂತಸ ತಂದಿದೆ. ತಾಯಿ ಹಾಗೂ ಮರಿ ಆರೋಗ್ಯವಾಗಿದ್ದು, ಇನ್ನೂ ಕೆಲವು ದಿನಗಳ ಕಾಲ ದಸರಾ ತಯಾರಿಯಲ್ಲಿ ಪಾಲ್ಗೊಳ್ಳುವುದಿಲ್ಲ ಹಾಗೂ ಜನರ ವೀಕ್ಷಣೆಯನ್ನು ಸಹ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

12 mins ago

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…

36 mins ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಂಕಷ್ಟ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…

40 mins ago

ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…

1 hour ago

ನಿಜ್ಜರ್ ಹತ್ಯೆ ಪ್ರತಿಧ್ವನಿ-ಕೆನಡಾ ಭಾರತೀಯರಲ್ಲಿ ಆತಂಕ

ಅಮಿತ್ ಶಾ, ಅಜಿತ್‌ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್‌ ಸಿಂಗ್ ನಿಜ್ಜರ್ ಹತ್ಯೆಯ ನಂತರದ…

1 hour ago

ಸೈಕಲ್ ಎಂಬ ಮಾಯಾಂಗನೆಯನೇರಿ..!

ಮೂಲ : ಪೂಜ ಹರೀಶ್‌, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ…

1 hour ago