ಜಿಲ್ಲೆಗಳು

ಅರಮನೆ ಆವರಣದಲ್ಲಿ ಮನೆಮಾಡಿದ ಸಂಭ್ರಮ : ಗಮನ ಸೆಳೆದ ಲಕ್ಮೀ ಆನೆ

ಮೈಸೂರು: ದಸರಾ ಉತ್ಸವಕ್ಕೆ ಬಂದಿದ್ದ ಆನೆಗಳ ತಂಡದಲ್ಲಿ ಲಕ್ಷ್ಮೀ ಎಂಬ ಆನೆಯು ಮಂಗಳವಾರ ರಾತ್ರಿ ಗಂಡು ಮರಿಗೆ ಜನ್ಮ ನೀಡಿದ್ದು, ಅರಮನೆ ಆವರಣದಲ್ಲಿ ಸಂಭ್ರಮ ಮನೆಮಾಡಿದೆ.

ಧರ್ಮಸ್ಥಳದ ದೇವಸ್ಥಾನದಲ್ಲಿ ಇದ್ದ ಈ ಆನೆಯನ್ನು ಅರಣ್ಯ ಇಲಾಖೆ ಆದೇಶ ಮೇರೆಗೆ ನಾಗರಹೊಳೆಯ ಅರಣ್ಯಕ್ಕೆ ಕರೆತರಲಾಗಿತ್ತು. ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುವ ಗಜಪಡೆಯೊಂದಿಗೆ ಲಕ್ಷ್ಮೀಯನ್ನೂ ನಗರಕ್ಕೆ ಕರೆತರಲಾಗಿತ್ತು. ಮಂಗಳವಾರ ರಾತ್ರಿ 11 ಗಂಟೆಗೆ ಸಮಯದಲ್ಲಿ ಗಂಡು ಮರಿಗೆ ಜನ್ಮ ನೀಡಿದೆ. ದಸರಾ ಉತ್ಸವಕ್ಕೆ ಬಂದ ಆನೆಗಳ ಪೈಕಿ ಕಳೆದ 12 ವರ್ಷಗಳ ನಂತರ ಅರಮನೆಯಲ್ಲಿ ಆನೆಯೊಂದು ಮರಿಗೆ ಜನ್ಮ ನೀಡಿದ್ದು ಸಂತಸ ತಂದಿದೆ. ತಾಯಿ ಹಾಗೂ ಮರಿ ಆರೋಗ್ಯವಾಗಿದ್ದು, ಇನ್ನೂ ಕೆಲವು ದಿನಗಳ ಕಾಲ ದಸರಾ ತಯಾರಿಯಲ್ಲಿ ಪಾಲ್ಗೊಳ್ಳುವುದಿಲ್ಲ ಹಾಗೂ ಜನರ ವೀಕ್ಷಣೆಯನ್ನು ಸಹ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago