Mysore
20
overcast clouds

Social Media

ಭಾನುವಾರ, 19 ಜನವರಿ 2025
Light
Dark

ಮುರುಘಾ ಶರಣರ ಪ್ರಕರಣಕ್ಕೆ ಸಂಸದ ವಿ ಶ್ರೀನಿವಾಸ ಪ್ರಸಾದ್ ಪ್ರತಿಕ್ರಿಯೆ

ಮೈಸೂರು:ಚಿತ್ರದುರ್ಗ ಮುರುಘಾ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಕುರಿತು ಚಾಮರಾಜನಗರ ಸಂಸದ ವಿ ಶ್ರೀನಿವಾಸ ಪ್ರಸಾದ್ ಇಂದು ತಮ್ಮ ಪ್ರತಿಕ್ರಿಯೆ ಹೊರಹಾಕಿದ್ದಾರೆ.

”ಪೋಕ್ಸೋ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಇಲ್ಲಿ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಮತ್ತು ನ್ಯಾಯಯುತ ತನಿಖೆಯಿಂದ ಮಾತ್ರ ಸತ್ಯವನ್ನು ಬಹಿರಂಗಪಡಿಸಬಹುದು. ಪೊಲೀಸ್ ಇಲಾಖೆ ಮತ್ತು ಎಡಿಜಿಪಿ ಅಲೋಕಕುಮಾರ್ ಅವರು ನ್ಯಾಯಯುತ ತನಿಖೆ ನಡೆಸುತ್ತಾರೆ ಎಂದು ನಾನು ಭಾವಿಸುತ್ತೇನೆ  ಎಂದಿದ್ದಾರೆ. ಮುಂದುವರಿದು,

‘ಸುಪ್ರೀಂ ಕೋರ್ಟ್‌ನ ಪ್ರಕಾರ ಪೋಕ್ಸೋ ಪ್ರಕರಣಗಳಲ್ಲಿ ದಲಿತ ಅಥವಾ ಇತರ ಜಾತಿಗಳ ಬೇಧವಿಲ್ಲದೆ ವಿಸ್ತೃತ ತನಿಖೆ ಮುಖ್ಯವಾಗಿದೆ’ ಎಂದರು.

ಈಗಾಗಲೇ ಸಂತ್ರಸ್ತರು ಸಿಆರ್‌ಪಿಸಿ ಸೆಕ್ಷನ್ 164 ರ ಅಡಿಯಲ್ಲಿ ತಮ್ಮ ಹೇಳಿಕೆಯನ್ನು ನೀಡಿದ್ದಾರೆ, ಅದನ್ನು ನ್ಯಾಯಾಧೀಶರ ಕೋಟೆಯಲ್ಲಿ ಸಂಪೂರ್ಣವಾಗಿ ವಿಡಿಯೋ ರೆಕಾರ್ಡ್ ಮಾಡಲಾಗಿದೆ. ಇಲ್ಲಿ ತನಿಖೆಗೆ ಒತ್ತಡ ಹೇರುವ ಪ್ರಶ್ನೆಯೇ ಇಲ್ಲ ಎಂದು ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ