ಜಿಲ್ಲೆಗಳು

ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣದ ಆರೋಪಿ ಬಂಧನ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಈ ವಿಚಾರವಾಗಿ ದೀಪಿಕಾ ಕುಟುಂಬಸ್ಥರು ದೀಪಿಕಾ ಸಾಯುವ ಮುನ್ನೆ ಕೊನೆಯದಾಗಿ ಕರೆ ಮಾಡಿರುವ ಅದೇ ಗ್ರಾಮದ ನಿತೀಶ್‌ ಎಂಬುವವನ ವಿರುದ್ಧ ಕೊಲೆ ಮಾಡಿರುವ ಆರೋಪ ಮಾಡಿ ದೂರು ನೀಡಿದ್ದರು. ಅತ್ತ ನಿತೀಶ್ ದೀಪಿಕಾ ಶವ ಸಿಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ. ‌

ಹೀಗೆ ಕಾಣೆಯಾದ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು ಆತನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ತಲೆ ಮರೆಸಿಕೊಂಡಿದ್ದ ನಿತೀಶ್‌ನನ್ನು ಮೇಲುಕೋಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದ್ದು, ನಿತೀಶ್‌ ಕೊಲೆ ಮಾಡಿರುವುದು ತಾನೇ ಎಂದು ತಿಳಿದುಬಂದಿದೆ.

ದೀಪಿಕಾಳನ್ನು ಕೊಲೆ ಮಾಡಲು ಮೊದಲೇ ಯೋಜನೆ ನಡೆದಿತ್ತು. ಕೊಲೆ ಮಾಡುವ ಮುನ್ನ ನಿತೀಶ್‌ ಗುಂಡಿ ಸಿದ್ಧಪಡಿಸಿಕೊಂಡಿದ್ದ. ಬಳಿಕ ದೀಪಿಕಾಳನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿದ ಎಂಬ ಅಂಶ ವಿಚಾರಣೆ ವೇಳೆ ತಿಳಿದುಬಂದಿದೆ. ಕೊಲೆ ಮಾಡಿರುವುದು ತಾನೇ ಎಂದೂ ಸಹ ನಿತೀಶ್‌ ಒಪ್ಪಿಕೊಂಡಿದ್ದಾನೆ.

ಇನ್ನು ದೀಪಿಕಾ ಶವ ಪತ್ತೆಯಾಗುವುದಕ್ಕೂ ಮುನ್ನ ಕಾಣೆಯಾಗಿದ್ದಾಳೆ ಎಂದು ಕುಟುಂಬ ಹುಡುಕಾಟ ನಡೆಸುತ್ತಿದ್ದಾಗ ದೀಪಿಕಾ ತಂದೆಗೆ ಕರೆ ಮಾಡಿ ʼಅಕ್ಕ ಸಿಕ್ಕಿದ್ಳಾ ಅಪ್ಪಾಜಿʼ ಎಂದು ವಿಚಾರಿಸಿ ತನ್ನ ಮೇಲೆ ಅನುಮಾನ ಬಾರದ ಹಾಗೆ ನಟಿಸಿದ್ದ ಎಂಬ ವಿಷಯ ಸಹ ತಿಳಿದುಬಂದಿದೆ.

andolana

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

16 mins ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

18 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

20 mins ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

26 mins ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

31 mins ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

41 mins ago