ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಈ ವಿಚಾರವಾಗಿ ದೀಪಿಕಾ ಕುಟುಂಬಸ್ಥರು ದೀಪಿಕಾ ಸಾಯುವ ಮುನ್ನೆ ಕೊನೆಯದಾಗಿ ಕರೆ ಮಾಡಿರುವ ಅದೇ ಗ್ರಾಮದ ನಿತೀಶ್ ಎಂಬುವವನ ವಿರುದ್ಧ ಕೊಲೆ ಮಾಡಿರುವ ಆರೋಪ ಮಾಡಿ ದೂರು ನೀಡಿದ್ದರು. ಅತ್ತ ನಿತೀಶ್ ದೀಪಿಕಾ ಶವ ಸಿಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ.
ಹೀಗೆ ಕಾಣೆಯಾದ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು ಆತನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ತಲೆ ಮರೆಸಿಕೊಂಡಿದ್ದ ನಿತೀಶ್ನನ್ನು ಮೇಲುಕೋಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದ್ದು, ನಿತೀಶ್ ಕೊಲೆ ಮಾಡಿರುವುದು ತಾನೇ ಎಂದು ತಿಳಿದುಬಂದಿದೆ.
ದೀಪಿಕಾಳನ್ನು ಕೊಲೆ ಮಾಡಲು ಮೊದಲೇ ಯೋಜನೆ ನಡೆದಿತ್ತು. ಕೊಲೆ ಮಾಡುವ ಮುನ್ನ ನಿತೀಶ್ ಗುಂಡಿ ಸಿದ್ಧಪಡಿಸಿಕೊಂಡಿದ್ದ. ಬಳಿಕ ದೀಪಿಕಾಳನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿದ ಎಂಬ ಅಂಶ ವಿಚಾರಣೆ ವೇಳೆ ತಿಳಿದುಬಂದಿದೆ. ಕೊಲೆ ಮಾಡಿರುವುದು ತಾನೇ ಎಂದೂ ಸಹ ನಿತೀಶ್ ಒಪ್ಪಿಕೊಂಡಿದ್ದಾನೆ.
ಇನ್ನು ದೀಪಿಕಾ ಶವ ಪತ್ತೆಯಾಗುವುದಕ್ಕೂ ಮುನ್ನ ಕಾಣೆಯಾಗಿದ್ದಾಳೆ ಎಂದು ಕುಟುಂಬ ಹುಡುಕಾಟ ನಡೆಸುತ್ತಿದ್ದಾಗ ದೀಪಿಕಾ ತಂದೆಗೆ ಕರೆ ಮಾಡಿ ʼಅಕ್ಕ ಸಿಕ್ಕಿದ್ಳಾ ಅಪ್ಪಾಜಿʼ ಎಂದು ವಿಚಾರಿಸಿ ತನ್ನ ಮೇಲೆ ಅನುಮಾನ ಬಾರದ ಹಾಗೆ ನಟಿಸಿದ್ದ ಎಂಬ ವಿಷಯ ಸಹ ತಿಳಿದುಬಂದಿದೆ.
ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…
ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…
ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…
ಬೆಂಗಳೂರಿನ ಯಶವಂತಪುರ, ಎಸ್ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…
ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್ನ್ಯೂಸ್ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್ಪ್ರೆಸ್ಗೆ ಅನುಮೋದನೆ…
ಹೇಮಂತ್ಕುಮಾರ್ ರೈತ ಸಂಘ-ಕೆಆರ್ಎಸ್ ಪಕ್ಷ, ಎಸ್ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…