ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಈ ವಿಚಾರವಾಗಿ ದೀಪಿಕಾ ಕುಟುಂಬಸ್ಥರು ದೀಪಿಕಾ ಸಾಯುವ ಮುನ್ನೆ ಕೊನೆಯದಾಗಿ ಕರೆ ಮಾಡಿರುವ ಅದೇ ಗ್ರಾಮದ ನಿತೀಶ್ ಎಂಬುವವನ ವಿರುದ್ಧ ಕೊಲೆ ಮಾಡಿರುವ ಆರೋಪ ಮಾಡಿ ದೂರು ನೀಡಿದ್ದರು. ಅತ್ತ ನಿತೀಶ್ ದೀಪಿಕಾ ಶವ ಸಿಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ.
ಹೀಗೆ ಕಾಣೆಯಾದ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು ಆತನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ತಲೆ ಮರೆಸಿಕೊಂಡಿದ್ದ ನಿತೀಶ್ನನ್ನು ಮೇಲುಕೋಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದ್ದು, ನಿತೀಶ್ ಕೊಲೆ ಮಾಡಿರುವುದು ತಾನೇ ಎಂದು ತಿಳಿದುಬಂದಿದೆ.
ದೀಪಿಕಾಳನ್ನು ಕೊಲೆ ಮಾಡಲು ಮೊದಲೇ ಯೋಜನೆ ನಡೆದಿತ್ತು. ಕೊಲೆ ಮಾಡುವ ಮುನ್ನ ನಿತೀಶ್ ಗುಂಡಿ ಸಿದ್ಧಪಡಿಸಿಕೊಂಡಿದ್ದ. ಬಳಿಕ ದೀಪಿಕಾಳನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿದ ಎಂಬ ಅಂಶ ವಿಚಾರಣೆ ವೇಳೆ ತಿಳಿದುಬಂದಿದೆ. ಕೊಲೆ ಮಾಡಿರುವುದು ತಾನೇ ಎಂದೂ ಸಹ ನಿತೀಶ್ ಒಪ್ಪಿಕೊಂಡಿದ್ದಾನೆ.
ಇನ್ನು ದೀಪಿಕಾ ಶವ ಪತ್ತೆಯಾಗುವುದಕ್ಕೂ ಮುನ್ನ ಕಾಣೆಯಾಗಿದ್ದಾಳೆ ಎಂದು ಕುಟುಂಬ ಹುಡುಕಾಟ ನಡೆಸುತ್ತಿದ್ದಾಗ ದೀಪಿಕಾ ತಂದೆಗೆ ಕರೆ ಮಾಡಿ ʼಅಕ್ಕ ಸಿಕ್ಕಿದ್ಳಾ ಅಪ್ಪಾಜಿʼ ಎಂದು ವಿಚಾರಿಸಿ ತನ್ನ ಮೇಲೆ ಅನುಮಾನ ಬಾರದ ಹಾಗೆ ನಟಿಸಿದ್ದ ಎಂಬ ವಿಷಯ ಸಹ ತಿಳಿದುಬಂದಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…