ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಈ ವಿಚಾರವಾಗಿ ದೀಪಿಕಾ ಕುಟುಂಬಸ್ಥರು ದೀಪಿಕಾ ಸಾಯುವ ಮುನ್ನೆ ಕೊನೆಯದಾಗಿ ಕರೆ ಮಾಡಿರುವ ಅದೇ ಗ್ರಾಮದ ನಿತೀಶ್ ಎಂಬುವವನ ವಿರುದ್ಧ ಕೊಲೆ ಮಾಡಿರುವ ಆರೋಪ ಮಾಡಿ ದೂರು ನೀಡಿದ್ದರು. ಅತ್ತ ನಿತೀಶ್ ದೀಪಿಕಾ ಶವ ಸಿಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ.
ಹೀಗೆ ಕಾಣೆಯಾದ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು ಆತನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ತಲೆ ಮರೆಸಿಕೊಂಡಿದ್ದ ನಿತೀಶ್ನನ್ನು ಮೇಲುಕೋಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದ್ದು, ನಿತೀಶ್ ಕೊಲೆ ಮಾಡಿರುವುದು ತಾನೇ ಎಂದು ತಿಳಿದುಬಂದಿದೆ.
ದೀಪಿಕಾಳನ್ನು ಕೊಲೆ ಮಾಡಲು ಮೊದಲೇ ಯೋಜನೆ ನಡೆದಿತ್ತು. ಕೊಲೆ ಮಾಡುವ ಮುನ್ನ ನಿತೀಶ್ ಗುಂಡಿ ಸಿದ್ಧಪಡಿಸಿಕೊಂಡಿದ್ದ. ಬಳಿಕ ದೀಪಿಕಾಳನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿದ ಎಂಬ ಅಂಶ ವಿಚಾರಣೆ ವೇಳೆ ತಿಳಿದುಬಂದಿದೆ. ಕೊಲೆ ಮಾಡಿರುವುದು ತಾನೇ ಎಂದೂ ಸಹ ನಿತೀಶ್ ಒಪ್ಪಿಕೊಂಡಿದ್ದಾನೆ.
ಇನ್ನು ದೀಪಿಕಾ ಶವ ಪತ್ತೆಯಾಗುವುದಕ್ಕೂ ಮುನ್ನ ಕಾಣೆಯಾಗಿದ್ದಾಳೆ ಎಂದು ಕುಟುಂಬ ಹುಡುಕಾಟ ನಡೆಸುತ್ತಿದ್ದಾಗ ದೀಪಿಕಾ ತಂದೆಗೆ ಕರೆ ಮಾಡಿ ʼಅಕ್ಕ ಸಿಕ್ಕಿದ್ಳಾ ಅಪ್ಪಾಜಿʼ ಎಂದು ವಿಚಾರಿಸಿ ತನ್ನ ಮೇಲೆ ಅನುಮಾನ ಬಾರದ ಹಾಗೆ ನಟಿಸಿದ್ದ ಎಂಬ ವಿಷಯ ಸಹ ತಿಳಿದುಬಂದಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…