ಮೈಸೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಹಾಗೂ ಟೇಕ್ಆಫ್ ವೇಳೆ ವಿಮಾನಗಳಿಗೆ ಲೇಸರ್ ಲೈಟ್ ಬಿಟ್ಟು ಅಡೆಚಣೆ ಉಂಟುಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಕುರಿತು ವಿಮಾನ ನಿಲ್ದಾಣ ಪ್ರಾಧಿಕಾರ ಪೊಲೀಸ್ ಇಲಾಖೆಗೆ ಮಾಹಿತಿಯನ್ನೂ ಸಹ ನೀಡಿ ಹಾವಳಿ ತಪ್ಪಿಸುವಂತೆ ಮನವಿ ಮಾಡಿತ್ತು.
ಇದರ ಕುರಿತಾಗಿ ಇದೀಗ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾತನಾಡಿದ್ದಾರೆ. ನಗರದಲ್ಲಿ ನಡೆದ ಚಾಮುಂಡಿ ಪಡೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ರಮೇಶ್ ಬಾನೋತ್ ಲೇಸರ್ ಹಾವಳಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಿಸಿದ ಪೊಲೀಸ್ ಠಾಣೆಗೂ ಸಹ ಈ ಕುರಿತು ಸೂಚನೆ ನೀಡಿದ್ದೇವೆ ಎಂದಿದ್ದಾರೆ. ಅಲ್ಲದೇ ಮಕ್ಕಳು ಲೇಸರ್ ಲೈಟ್ ಬಿಟ್ಟಿದ್ದಾರೆ ಎಂಬ ಮಾಹಿತಿ ಇದ್ದು, ಪ್ರಕರಣದ ತನಿಖೆ ನಂತರ ಸತ್ಯಾಂಶ ತಿಳಿಯಲಿದೆ. ಯಾರು ಲೇಸರ್ ಲೈಟ್ ಬಿಡುತ್ತಿದ್ದಾರೆ ಎಂಬ ಅಂಶ ತಿಳಿದ ನಂತರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…