ಭಾರತೀನಗರ: ದೊಡ್ಡರಸಿನಕೆರೆಯಲ್ಲಿ ನಡೆದಿದ್ದ ರೌಡಿಶೀಟರ್ ಅರುಣಾ ಕೊಲೆ ಪ್ರಕರಣ ಮಾಹಿತಿ ಕಲೆಹಾಕದೆ ಕರ್ತವ್ಯಲೋಪವೆಸಗಿದ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಪೇದೆ ಎಲ್.ಆರ್.ಚೇತನ್ನನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.
ಮುಟ್ಟನಹಳ್ಳಿ, ದೊಡ್ಡರಸಿನಕೆರೆ, ಚಿಕ್ಕಮರೀಗೌಡನದೊಡ್ಡಿ ಅಸುಪಾಸಿನ ಗ್ರಾಮಗಳಲ್ಲಿ ಎನ್.ಆರ್.ಚೇತನ್ (ಪಿಸಿ ನಂಬರ್ ೩೦೮) ಬೀಟ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ರೌಡಿ ಶೀಟರ್ ಅರುಣಾ ಕೊಲೆಗೂ ಮುನ್ನ ನಡೆದ ಗುಂಪು ಘರ್ಷಣೆ ವೇಳೆ ಮುಂಜಾಗ್ರತಾ ಕ್ರಮವಾಗಿ ಮಾಹಿತಿ ಕಲೆಹಾಕದೆ ಕರ್ತವ್ಯ ಲೋಪ ಮಾಡಿರುವ ಹಿನ್ನೆಲೆಯಲ್ಲಿ ಚೇತನ್ನನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕಳೆದ ೩ ವರ್ಷಗಳ ಹಿಂದೆ ಪೇದೆಯಾಗಿ ನೇಮಕವಾಗಿದ್ದ ಚೇತನ್ ಬೀಟ್ ಕರ್ತವ್ಯದ ಜೊತೆಗೆ ಠಾಣಾ ವ್ಯಾಪ್ತಿಯಲ್ಲಿ ಶಿಂಷಾನದಿ ದಂಡೆಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆ, ಜೂಜಾಟ, ಮದ್ಯಂಗಡಿಗಳು ಹಾಗೂ ವೆಶ್ಯಾವಾಟಿಕೆ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳ ದಂಧೆ ನಡೆಸುವವರಿಂದ ಹಣ ವಸೂಲಿ ಮಾಡಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತಲುಪಿಸುತ್ತಿದ್ದ ಕಾರ್ಯವನ್ನು ಸಹ ಚೇತನ್ ಮಾಡುತ್ತಿದ್ದ ಎಂದು ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…