ಜಿಲ್ಲೆಗಳು

ಕರ್ತವ್ಯಲೋಪ ಪೊಲೀಸ್‌ ಪೇದೆ ಅಮಾನತು

ಭಾರತೀನಗರ: ದೊಡ್ಡರಸಿನಕೆರೆಯಲ್ಲಿ ನಡೆದಿದ್ದ ರೌಡಿಶೀಟರ್ ಅರುಣಾ ಕೊಲೆ ಪ್ರಕರಣ ಮಾಹಿತಿ ಕಲೆಹಾಕದೆ ಕರ್ತವ್ಯಲೋಪವೆಸಗಿದ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಪೇದೆ ಎಲ್.ಆರ್.ಚೇತನ್‌ನನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.

ಮುಟ್ಟನಹಳ್ಳಿ, ದೊಡ್ಡರಸಿನಕೆರೆ, ಚಿಕ್ಕಮರೀಗೌಡನದೊಡ್ಡಿ ಅಸುಪಾಸಿನ ಗ್ರಾಮಗಳಲ್ಲಿ ಎನ್.ಆರ್.ಚೇತನ್ (ಪಿಸಿ ನಂಬರ್ ೩೦೮) ಬೀಟ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ರೌಡಿ ಶೀಟರ್ ಅರುಣಾ ಕೊಲೆಗೂ ಮುನ್ನ ನಡೆದ ಗುಂಪು ಘರ್ಷಣೆ ವೇಳೆ ಮುಂಜಾಗ್ರತಾ ಕ್ರಮವಾಗಿ ಮಾಹಿತಿ ಕಲೆಹಾಕದೆ ಕರ್ತವ್ಯ ಲೋಪ ಮಾಡಿರುವ ಹಿನ್ನೆಲೆಯಲ್ಲಿ ಚೇತನ್‌ನನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕಳೆದ ೩ ವರ್ಷಗಳ ಹಿಂದೆ ಪೇದೆಯಾಗಿ ನೇಮಕವಾಗಿದ್ದ ಚೇತನ್ ಬೀಟ್ ಕರ್ತವ್ಯದ ಜೊತೆಗೆ ಠಾಣಾ ವ್ಯಾಪ್ತಿಯಲ್ಲಿ ಶಿಂಷಾನದಿ ದಂಡೆಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆ, ಜೂಜಾಟ, ಮದ್ಯಂಗಡಿಗಳು ಹಾಗೂ ವೆಶ್ಯಾವಾಟಿಕೆ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳ ದಂಧೆ ನಡೆಸುವವರಿಂದ ಹಣ ವಸೂಲಿ ಮಾಡಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತಲುಪಿಸುತ್ತಿದ್ದ ಕಾರ್ಯವನ್ನು ಸಹ ಚೇತನ್ ಮಾಡುತ್ತಿದ್ದ ಎಂದು ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

14 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

15 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

20 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago