ಹನೂರು: ಪಟ್ಟಣದ ಸಾರ್ವಜನಿಕರ ವಿರೋಧದ ನಡುವೆಯೂ ಪೊಲೀಸ್ ಸರ್ಪಗಾವಲಿನಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕರ್ತರ ಪಥಸಂಚಲನ.
ಪಟ್ಟಣದ ವಿವೇಕನಂದಾ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 15 ದಿನಗಳಿಂದ ಆರ್ ಎಸ್ ಎಸ್ ವತಿಯಿಂದ ಪ್ರಾಥಮಿಕ ಶಿಕ್ಷಾವರ್ಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ ಅಂಗವಾಗಿ ಶುಕ್ರವಾರ ಬಿ.ಎಂ.ಜಿ ಪ್ರೌಢಶಾಲೆಯಲ್ಲಿ ಸಮಾರೋಪ ಸಮಾರಂಭ ಹಾಗೂ ಪಥಸಂಚಲನ ಕಾರ್ಯಕ್ರಮ ನಡೆಯಿತು.ಪರಿಶಿಷ್ಟ ಜಾತಿ ಸಮುದಾಯವದವರಿಂದ ಆಕ್ಷೇಪ: ಆರ್.ಎಸ್.ಎಸ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪಥಸಂಚಲನಕ್ಕೆ ಅವಕಾಶ ನೀಡದಂತೆ ಸಮುದಾಯದ ಮುಖಂಡರು ಇನ್ ಸ್ಪೆಕ್ಟರ್ ಸಂತೋಷ್ ಕಶ್ಯಪ್ ಅವರಿಗೆ ಮನವಿ ಮಾಡಿದರು.
ಧರ್ಮ ಮತ್ತು ಜಾತಿ ವಿಚಾರದಲ್ಲಿ ಸಾಮರಸ್ಯ ಕದಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಪಟ್ಟಣದ ಬಿಎಂಜಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ಸಂಜೆ 5.30 ಕ್ಕೆ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿರುವುದು ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಬಡಾವಣೆ ಮುಖ್ಯರಸ್ತೆಯಲ್ಲಿ ಪಥಸಂಚಲನ ನಡೆಸುವುದಕ್ಕೆ ಅವಕಾಶ ನೀಡಬಾರದು. ಎಂದು ಸಮುದಾಯದ ಮುಖಂಡರುಗಳು, ಯುವಕರು ಆಗ್ರಹಿಸಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…