ಜಿಲ್ಲೆಗಳು

ಹನೂರು : ಪೊಲೀಸ್ ಭದ್ರತೆಯಲ್ಲಿ ಆರ್ ಎಸ್ ಎಸ್ ಪಥಸಂಚಲನ

ಹನೂರು: ಪಟ್ಟಣದ ಸಾರ್ವಜನಿಕರ ವಿರೋಧದ ನಡುವೆಯೂ ಪೊಲೀಸ್ ಸರ್ಪಗಾವಲಿನಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕರ್ತರ ಪಥಸಂಚಲನ.

ಪಟ್ಟಣದ ವಿವೇಕನಂದಾ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 15 ದಿನಗಳಿಂದ ಆರ್ ಎಸ್ ಎಸ್ ವತಿಯಿಂದ ಪ್ರಾಥಮಿಕ ಶಿಕ್ಷಾವರ್ಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ‌ ಅಂಗವಾಗಿ ಶುಕ್ರವಾರ ಬಿ.ಎಂ.ಜಿ ಪ್ರೌಢಶಾಲೆಯಲ್ಲಿ ಸಮಾರೋಪ ಸಮಾರಂಭ ಹಾಗೂ ಪಥಸಂಚಲನ ಕಾರ್ಯಕ್ರಮ‌ ನಡೆಯಿತು.ಪರಿಶಿಷ್ಟ ಜಾತಿ ಸಮುದಾಯವದವರಿಂದ ಆಕ್ಷೇಪ: ಆರ್.ಎಸ್.ಎಸ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪಥಸಂಚಲನಕ್ಕೆ ಅವಕಾಶ ನೀಡದಂತೆ ಸಮುದಾಯದ ಮುಖಂಡರು ಇನ್ ಸ್ಪೆಕ್ಟರ್ ಸಂತೋಷ್ ಕಶ್ಯಪ್ ಅವರಿಗೆ ಮನವಿ ಮಾಡಿದರು.

ಧರ್ಮ ಮತ್ತು ಜಾತಿ ವಿಚಾರದಲ್ಲಿ ಸಾಮರಸ್ಯ ಕದಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಪಟ್ಟಣದ ಬಿಎಂಜಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ಸಂಜೆ 5.30 ಕ್ಕೆ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿರುವುದು ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಬಡಾವಣೆ ಮುಖ್ಯರಸ್ತೆಯಲ್ಲಿ ಪಥಸಂಚಲನ ನಡೆಸುವುದಕ್ಕೆ ಅವಕಾಶ ನೀಡಬಾರದು. ಎಂದು ಸಮುದಾಯದ ಮುಖಂಡರುಗಳು, ಯುವಕರು ಆಗ್ರಹಿಸಿದರು.
ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್ ಮಾತನಾಡಿ, ಯಾವುದೇ ಸಂಘಟನೆ ಸಾರ್ವಜನಿಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಕ್ಕೆ ತಡೆಯೊಡ್ಡುವುದು ಸರಿಯಲ್ಲ ಎಂದು ವಾದಿಸಿದರು. ಇದಕ್ಕೆ ಇನ್ಸ್ಪೆಕ್ಟರ್ ಹಾಗೂ ಮುಖಂಡರಗಳ ನಡುವೆ ಕೆಲವು ಗಂಟೆ ವಾಗ್ವಾದ ನಡೆಯಿತು.
ಪಥಸಂಚಲನಕ್ಕೆ ದಲಿತ ಸಂಘಟನೆಯಿಂದ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಪೊಲೀಸ್ ಇಲಾಖೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಪಥಸಂಚಲನಕ್ಕೆ ಭದ್ರತೆ ನೀಡಲು ಮುಂದಾಯಿತು.
ಚಾಮರಾಜನಗರ,ಗುಂಡ್ಲುಪೇಟೆ ಸಂತೇಮರಳ್ಳಿ, ಕೊಳ್ಳೇಗಾಲ ರಾಮಾಪುರ ಠಾಣೆಗಳಿಂದ ಇನ್ ಸ್ಪೆಕ್ಟರ್, ಪಿಎಸ್ಐ ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿಲಾಗಿತ್ತು. ಅಲ್ಲದೇ ಎರಡು ಜಿಲ್ಲಾ ಸಶಸ್ತ್ರ ಮಿಸಲು ಪಡೆ ಹಾಗೂ ಒಂದು ಕೆ.ಎಸ್ ಆರ್ ಪಿ ತುಕಡಿಯನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿತ್ತು.
ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದಿಂದ ಆರಂಭವಾದ ಪಥಸಂಚಲನ ಮುಖ್ಯ ರಸ್ತೆ ಹಾಗೂ ವಿವಿಧ ಬಡಾವಣೆಗಳಲ್ಲಿ ಸಾಗಿ ಬಿ.ಎಂ.ಜಿ ಶಾಲೆಯಲ್ಲಿ ಕೊನೆಗೊಂಡಿತು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

10 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

38 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago