ಜಿಲ್ಲೆಗಳು

ಹನೂರು : ಪೊಲೀಸ್ ಭದ್ರತೆಯಲ್ಲಿ ಆರ್ ಎಸ್ ಎಸ್ ಪಥಸಂಚಲನ

ಹನೂರು: ಪಟ್ಟಣದ ಸಾರ್ವಜನಿಕರ ವಿರೋಧದ ನಡುವೆಯೂ ಪೊಲೀಸ್ ಸರ್ಪಗಾವಲಿನಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕರ್ತರ ಪಥಸಂಚಲನ.

ಪಟ್ಟಣದ ವಿವೇಕನಂದಾ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 15 ದಿನಗಳಿಂದ ಆರ್ ಎಸ್ ಎಸ್ ವತಿಯಿಂದ ಪ್ರಾಥಮಿಕ ಶಿಕ್ಷಾವರ್ಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ‌ ಅಂಗವಾಗಿ ಶುಕ್ರವಾರ ಬಿ.ಎಂ.ಜಿ ಪ್ರೌಢಶಾಲೆಯಲ್ಲಿ ಸಮಾರೋಪ ಸಮಾರಂಭ ಹಾಗೂ ಪಥಸಂಚಲನ ಕಾರ್ಯಕ್ರಮ‌ ನಡೆಯಿತು.ಪರಿಶಿಷ್ಟ ಜಾತಿ ಸಮುದಾಯವದವರಿಂದ ಆಕ್ಷೇಪ: ಆರ್.ಎಸ್.ಎಸ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪಥಸಂಚಲನಕ್ಕೆ ಅವಕಾಶ ನೀಡದಂತೆ ಸಮುದಾಯದ ಮುಖಂಡರು ಇನ್ ಸ್ಪೆಕ್ಟರ್ ಸಂತೋಷ್ ಕಶ್ಯಪ್ ಅವರಿಗೆ ಮನವಿ ಮಾಡಿದರು.

ಧರ್ಮ ಮತ್ತು ಜಾತಿ ವಿಚಾರದಲ್ಲಿ ಸಾಮರಸ್ಯ ಕದಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಪಟ್ಟಣದ ಬಿಎಂಜಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ಸಂಜೆ 5.30 ಕ್ಕೆ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿರುವುದು ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಬಡಾವಣೆ ಮುಖ್ಯರಸ್ತೆಯಲ್ಲಿ ಪಥಸಂಚಲನ ನಡೆಸುವುದಕ್ಕೆ ಅವಕಾಶ ನೀಡಬಾರದು. ಎಂದು ಸಮುದಾಯದ ಮುಖಂಡರುಗಳು, ಯುವಕರು ಆಗ್ರಹಿಸಿದರು.
ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್ ಮಾತನಾಡಿ, ಯಾವುದೇ ಸಂಘಟನೆ ಸಾರ್ವಜನಿಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಕ್ಕೆ ತಡೆಯೊಡ್ಡುವುದು ಸರಿಯಲ್ಲ ಎಂದು ವಾದಿಸಿದರು. ಇದಕ್ಕೆ ಇನ್ಸ್ಪೆಕ್ಟರ್ ಹಾಗೂ ಮುಖಂಡರಗಳ ನಡುವೆ ಕೆಲವು ಗಂಟೆ ವಾಗ್ವಾದ ನಡೆಯಿತು.
ಪಥಸಂಚಲನಕ್ಕೆ ದಲಿತ ಸಂಘಟನೆಯಿಂದ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಪೊಲೀಸ್ ಇಲಾಖೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಪಥಸಂಚಲನಕ್ಕೆ ಭದ್ರತೆ ನೀಡಲು ಮುಂದಾಯಿತು.
ಚಾಮರಾಜನಗರ,ಗುಂಡ್ಲುಪೇಟೆ ಸಂತೇಮರಳ್ಳಿ, ಕೊಳ್ಳೇಗಾಲ ರಾಮಾಪುರ ಠಾಣೆಗಳಿಂದ ಇನ್ ಸ್ಪೆಕ್ಟರ್, ಪಿಎಸ್ಐ ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿಲಾಗಿತ್ತು. ಅಲ್ಲದೇ ಎರಡು ಜಿಲ್ಲಾ ಸಶಸ್ತ್ರ ಮಿಸಲು ಪಡೆ ಹಾಗೂ ಒಂದು ಕೆ.ಎಸ್ ಆರ್ ಪಿ ತುಕಡಿಯನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿತ್ತು.
ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದಿಂದ ಆರಂಭವಾದ ಪಥಸಂಚಲನ ಮುಖ್ಯ ರಸ್ತೆ ಹಾಗೂ ವಿವಿಧ ಬಡಾವಣೆಗಳಲ್ಲಿ ಸಾಗಿ ಬಿ.ಎಂ.ಜಿ ಶಾಲೆಯಲ್ಲಿ ಕೊನೆಗೊಂಡಿತು.

andolanait

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago