ಹನೂರು: ಪಟ್ಟಣದ ಸಾರ್ವಜನಿಕರ ವಿರೋಧದ ನಡುವೆಯೂ ಪೊಲೀಸ್ ಸರ್ಪಗಾವಲಿನಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕರ್ತರ ಪಥಸಂಚಲನ.
ಪಟ್ಟಣದ ವಿವೇಕನಂದಾ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 15 ದಿನಗಳಿಂದ ಆರ್ ಎಸ್ ಎಸ್ ವತಿಯಿಂದ ಪ್ರಾಥಮಿಕ ಶಿಕ್ಷಾವರ್ಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ ಅಂಗವಾಗಿ ಶುಕ್ರವಾರ ಬಿ.ಎಂ.ಜಿ ಪ್ರೌಢಶಾಲೆಯಲ್ಲಿ ಸಮಾರೋಪ ಸಮಾರಂಭ ಹಾಗೂ ಪಥಸಂಚಲನ ಕಾರ್ಯಕ್ರಮ ನಡೆಯಿತು.ಪರಿಶಿಷ್ಟ ಜಾತಿ ಸಮುದಾಯವದವರಿಂದ ಆಕ್ಷೇಪ: ಆರ್.ಎಸ್.ಎಸ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪಥಸಂಚಲನಕ್ಕೆ ಅವಕಾಶ ನೀಡದಂತೆ ಸಮುದಾಯದ ಮುಖಂಡರು ಇನ್ ಸ್ಪೆಕ್ಟರ್ ಸಂತೋಷ್ ಕಶ್ಯಪ್ ಅವರಿಗೆ ಮನವಿ ಮಾಡಿದರು.
ಧರ್ಮ ಮತ್ತು ಜಾತಿ ವಿಚಾರದಲ್ಲಿ ಸಾಮರಸ್ಯ ಕದಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಪಟ್ಟಣದ ಬಿಎಂಜಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ಸಂಜೆ 5.30 ಕ್ಕೆ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿರುವುದು ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಬಡಾವಣೆ ಮುಖ್ಯರಸ್ತೆಯಲ್ಲಿ ಪಥಸಂಚಲನ ನಡೆಸುವುದಕ್ಕೆ ಅವಕಾಶ ನೀಡಬಾರದು. ಎಂದು ಸಮುದಾಯದ ಮುಖಂಡರುಗಳು, ಯುವಕರು ಆಗ್ರಹಿಸಿದರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…