ಜಿಲ್ಲೆಗಳು

ಪೊಲೀಸ್ ಠಾಣೆ ಅಂದ ಹೆಚ್ಚಿಸಿದ ಇನ್‌ಸ್ಪೆಕ್ಟರ್!

ಎಚ್.ಡಿ.ಕೋಟೆ ಠಾಣೆ ಅಭಿವೃದ್ಧಿಗೆ ನೆರವಾದ ಬಸವರಾಜು, ಸಿಬ್ಬಂದಿಗೆ ಸಾರ್ವಜನಿಕರ ಮೆಚ್ಚುಗೆ

ಮಂಜು ಕೋಟೆ
ಹೆಚ್.ಡಿ.ಕೋಟೆ: ಯಾವುದೇ ಒಬ್ಬ ಅಧಿಕಾರಿ ಇಲಾಖೆಗೆ ಮತ್ತು ತಾಲ್ಲೂಕಿಗೆ ಏನಾದರೂ ಸೇವೆ ಸಲ್ಲಿಸಬೇಕೆಂಬ ಛಲ ಇದ್ದರೆ ಅಭಿವೃದ್ಧಿಗೆ ಪೂರಕವಾಗಿ ಕೆಲಸ ನಡೆಯುತ್ತವೆ ಎಂಬುದಕ್ಕೆ ಪಟ್ಟಣದ ಇಲ್ಲೊಂದು ಪೊಲೀಸ್ ಠಾಣೆ ಉದಾಹರಣೆಯಾಗಿದೆ.
ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಪಟ್ಟಣದ ಪೊಲೀಸ್ ಠಾಣೆ ದುಸ್ಥಿತಿಯಿಂದ ಕೂಡಿತ್ತಲ್ಲದೆ, ಅನೇಕ ಮೂಲಭೂತ ಸೌಕರ್ಯಗಳಿಂದ  ವಂಚಿತವಾಗಿತ್ತು. ಇದನ್ನು ಮನಗಂಡ ತಾಲ್ಲೂಕಿನವರೇ ಆದ ಎಚ್.ಮಟಕೆರೆ ನಿವಾಸಿ ಬಸವರಾಜ್ ಅವರು ತಾಲ್ಲೂಕು ಸರ್ಕಲ್ ಇನ್‌ಸ್ಪೆಕ್ಟರ್ ಆಗಿ ಒಂದು ವರ್ಷದ ಹಿಂದೆ ಅಧಿಕಾರ ವಹಿಸಿಕೊಂಡು, ತಮ್ಮ ವ್ಯಾಪ್ತಿಯ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡು ಉತ್ತಮ ಸೇವೆ ಮಾಡುವುದರ ಜೊತೆಗೆ ತಮ್ಮ ಹಣ ಮತ್ತು ಕೆಲವರ ಸಹಾಯವನ್ನು ಪಡೆದುಕೊಂಡು ಪೊಲೀಸ್ ಠಾಣೆ ಹಾಗೂ ಆವರಣವನ್ನು ಲಕ್ಷಾಂತರ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಮೂಲಕ ಠಾಣೆಯ ಅಂದವನ್ನು ಹೆಚ್ಚಿಸುವ ಮೂಲಕ ಸಾರ್ವಜನಿಕರ ಪ್ರಶಂಸೆಗೂ ಪಾತ್ರರಾಗಿದ್ದಾರೆ.

ಸಾರ್ವಜನಿಕರು ದೂರುಗಳಿಗೆ ಬಂದ ಸಂದರ್ಭದಲ್ಲಿ ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಪಾರ್ಕಿಂಗ್, ಸುಂದರವಾದ ಗಾರ್ಡನ್ ಜೊತೆಗೆ ಹಳೆಯ ಪೊಲೀಸ್ ಠಾಣೆ ಕಟ್ಟಡದ ನವೀಕರಣ, ಸುಣ್ಣಬಣ್ಣ , ಠಾಣೆ ಎದುರು ಫ್ಲಾಟ್ ಫಾರಂ ಹೀಗೆ ಹಲವಾರು ಅಬಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಸುವ್ಯವಸ್ಥಿತ ಪೊಲೀಸ್ ಠಾಣೆಯಾಗಿ ನಿರ್ಮಾಣಗೊಂಡಿದೆ.
ಪೊಲೀಸ್ ಠಾಣೆ ಎಂದರೆ ಪೊಲೀಸರು ಮತ್ತು ಸಿಬ್ಬಂದಿ ವರ್ಗದವರು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಾರೆ ಎಂಬ ಜನರ ಅಭಿಪ್ರಾಯಗಳೇ ಹೆಚ್ಚಾಗಿರುವ ಇಂತಹ ಸಂದರ್ಭದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಉತ್ತಮವಾದ ಕೆಲಸ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.
ಪೊಲೀಸ್ ಠಾಣೆಯ ಅಭಿವೃದ್ಧಿ ಕೆಲಸಗಳಿಗೆ ಸಿಬ್ಬಂದಿ ಮತ್ತು ನೌಕರರು ಸಹ ಸಾಥ್ ನೀಡಿರುವುದರಿಂದ ಇನ್ನೂ ಹಲವಾರು ವರ್ಷಗಳ ಕಾಲ ಈ ಠಾಣೆಯ ಕಟ್ಟಡವು ಜನರಿಗೆ ಸೇವೆ ನೀಡಬಹುದಾಗಿದೆ. ಸಾರ್ವಜನಿಕರು ಮತ್ತು ನೊಂದವರು ತಮ್ಮ ಕೆಲಸ ಕಾರ್ಯಕ್ಕೆ ಬಂದವರಿಗೆ ಪೊಲೀಸ್ ಇಲಾಖೆಯವರು ಉತ್ತಮ ಸೇವೆ ನೀಡಿದರೆ ಜನಪರ ಪೊಲೀಸ್ ಠಾಣೆಯಾಗುವುದರಲ್ಲಿ ಎರಡು ಮಾತಿಲ್ಲ. ಇದು ಇತರೆ ತಾಲ್ಲೂಕು ಠಾಣೆಗಳಿಗೂ ಸ್ಫೂರ್ತಿಗಲಿದೆ.


ಪೊಲೀಸ್ ಠಾಣೆಯ ವಾತಾವರಣ ಉತ್ತಮವಾಗಿದ್ದರೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು  ಮಾಡಲು ಸ್ಫೂರ್ತಿ ಸಿಗಲಿದೆ. ಅದಕ್ಕಾಗಿಯೇ ಕಚೇರಿಯ ಸುತ್ತಮುತ್ತ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿತ್ತು. ಅದರಂತೆ ಮಾಡಿಕೊಂಡಿದ್ದಾರೆ. ಇದು ಉತ್ತಮವಾದ ಬೆಳವಣಿಗೆ.
-ಚೇತನ್, ಪೊಲೀಸ್ ವರಿಷ್ಠಾಧಿಕಾರಿ

 


ಪೊಲೀಸ್ ಠಾಣೆ ಕಟ್ಟಡ ತುಂಬಾ ಹಳೆಯದಾಗಿದ್ದರಿಂದ ಮಳೆ ಬಂದರೆ ನೀರು ಶೇಖರಣೆಯಾಗಿ ಕೆರೆಯಂತಾಗುತ್ತಿತ್ತು. ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಅನೇಕರ ಸಹಕಾರದಿಂದ ಪೊಲೀಸ್ ಠಾಣೆಯನ್ನು ನವೀಕರಿಸುವುದರ ಜೊತೆಗೆ ಹೊಸ ವಾತಾವರಣ ನಿರ್ಮಿಸಲಾಗಿದೆ.
-ಬಸವರಾಜು, ಸರ್ಕಲ್ ಇನ್‌ಸ್ಪೆಕ್ಟರ್

andolanait

Recent Posts

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

39 mins ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

1 hour ago

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

1 hour ago

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

2 hours ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

2 hours ago

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

3 hours ago