ಜಿಲ್ಲೆಗಳು

ಪೊಲೀಸ್ ಠಾಣೆ ಅಂದ ಹೆಚ್ಚಿಸಿದ ಇನ್‌ಸ್ಪೆಕ್ಟರ್!

ಎಚ್.ಡಿ.ಕೋಟೆ ಠಾಣೆ ಅಭಿವೃದ್ಧಿಗೆ ನೆರವಾದ ಬಸವರಾಜು, ಸಿಬ್ಬಂದಿಗೆ ಸಾರ್ವಜನಿಕರ ಮೆಚ್ಚುಗೆ

ಮಂಜು ಕೋಟೆ
ಹೆಚ್.ಡಿ.ಕೋಟೆ: ಯಾವುದೇ ಒಬ್ಬ ಅಧಿಕಾರಿ ಇಲಾಖೆಗೆ ಮತ್ತು ತಾಲ್ಲೂಕಿಗೆ ಏನಾದರೂ ಸೇವೆ ಸಲ್ಲಿಸಬೇಕೆಂಬ ಛಲ ಇದ್ದರೆ ಅಭಿವೃದ್ಧಿಗೆ ಪೂರಕವಾಗಿ ಕೆಲಸ ನಡೆಯುತ್ತವೆ ಎಂಬುದಕ್ಕೆ ಪಟ್ಟಣದ ಇಲ್ಲೊಂದು ಪೊಲೀಸ್ ಠಾಣೆ ಉದಾಹರಣೆಯಾಗಿದೆ.
ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಪಟ್ಟಣದ ಪೊಲೀಸ್ ಠಾಣೆ ದುಸ್ಥಿತಿಯಿಂದ ಕೂಡಿತ್ತಲ್ಲದೆ, ಅನೇಕ ಮೂಲಭೂತ ಸೌಕರ್ಯಗಳಿಂದ  ವಂಚಿತವಾಗಿತ್ತು. ಇದನ್ನು ಮನಗಂಡ ತಾಲ್ಲೂಕಿನವರೇ ಆದ ಎಚ್.ಮಟಕೆರೆ ನಿವಾಸಿ ಬಸವರಾಜ್ ಅವರು ತಾಲ್ಲೂಕು ಸರ್ಕಲ್ ಇನ್‌ಸ್ಪೆಕ್ಟರ್ ಆಗಿ ಒಂದು ವರ್ಷದ ಹಿಂದೆ ಅಧಿಕಾರ ವಹಿಸಿಕೊಂಡು, ತಮ್ಮ ವ್ಯಾಪ್ತಿಯ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡು ಉತ್ತಮ ಸೇವೆ ಮಾಡುವುದರ ಜೊತೆಗೆ ತಮ್ಮ ಹಣ ಮತ್ತು ಕೆಲವರ ಸಹಾಯವನ್ನು ಪಡೆದುಕೊಂಡು ಪೊಲೀಸ್ ಠಾಣೆ ಹಾಗೂ ಆವರಣವನ್ನು ಲಕ್ಷಾಂತರ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಮೂಲಕ ಠಾಣೆಯ ಅಂದವನ್ನು ಹೆಚ್ಚಿಸುವ ಮೂಲಕ ಸಾರ್ವಜನಿಕರ ಪ್ರಶಂಸೆಗೂ ಪಾತ್ರರಾಗಿದ್ದಾರೆ.

ಸಾರ್ವಜನಿಕರು ದೂರುಗಳಿಗೆ ಬಂದ ಸಂದರ್ಭದಲ್ಲಿ ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಪಾರ್ಕಿಂಗ್, ಸುಂದರವಾದ ಗಾರ್ಡನ್ ಜೊತೆಗೆ ಹಳೆಯ ಪೊಲೀಸ್ ಠಾಣೆ ಕಟ್ಟಡದ ನವೀಕರಣ, ಸುಣ್ಣಬಣ್ಣ , ಠಾಣೆ ಎದುರು ಫ್ಲಾಟ್ ಫಾರಂ ಹೀಗೆ ಹಲವಾರು ಅಬಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಸುವ್ಯವಸ್ಥಿತ ಪೊಲೀಸ್ ಠಾಣೆಯಾಗಿ ನಿರ್ಮಾಣಗೊಂಡಿದೆ.
ಪೊಲೀಸ್ ಠಾಣೆ ಎಂದರೆ ಪೊಲೀಸರು ಮತ್ತು ಸಿಬ್ಬಂದಿ ವರ್ಗದವರು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಾರೆ ಎಂಬ ಜನರ ಅಭಿಪ್ರಾಯಗಳೇ ಹೆಚ್ಚಾಗಿರುವ ಇಂತಹ ಸಂದರ್ಭದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಉತ್ತಮವಾದ ಕೆಲಸ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.
ಪೊಲೀಸ್ ಠಾಣೆಯ ಅಭಿವೃದ್ಧಿ ಕೆಲಸಗಳಿಗೆ ಸಿಬ್ಬಂದಿ ಮತ್ತು ನೌಕರರು ಸಹ ಸಾಥ್ ನೀಡಿರುವುದರಿಂದ ಇನ್ನೂ ಹಲವಾರು ವರ್ಷಗಳ ಕಾಲ ಈ ಠಾಣೆಯ ಕಟ್ಟಡವು ಜನರಿಗೆ ಸೇವೆ ನೀಡಬಹುದಾಗಿದೆ. ಸಾರ್ವಜನಿಕರು ಮತ್ತು ನೊಂದವರು ತಮ್ಮ ಕೆಲಸ ಕಾರ್ಯಕ್ಕೆ ಬಂದವರಿಗೆ ಪೊಲೀಸ್ ಇಲಾಖೆಯವರು ಉತ್ತಮ ಸೇವೆ ನೀಡಿದರೆ ಜನಪರ ಪೊಲೀಸ್ ಠಾಣೆಯಾಗುವುದರಲ್ಲಿ ಎರಡು ಮಾತಿಲ್ಲ. ಇದು ಇತರೆ ತಾಲ್ಲೂಕು ಠಾಣೆಗಳಿಗೂ ಸ್ಫೂರ್ತಿಗಲಿದೆ.


ಪೊಲೀಸ್ ಠಾಣೆಯ ವಾತಾವರಣ ಉತ್ತಮವಾಗಿದ್ದರೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು  ಮಾಡಲು ಸ್ಫೂರ್ತಿ ಸಿಗಲಿದೆ. ಅದಕ್ಕಾಗಿಯೇ ಕಚೇರಿಯ ಸುತ್ತಮುತ್ತ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿತ್ತು. ಅದರಂತೆ ಮಾಡಿಕೊಂಡಿದ್ದಾರೆ. ಇದು ಉತ್ತಮವಾದ ಬೆಳವಣಿಗೆ.
-ಚೇತನ್, ಪೊಲೀಸ್ ವರಿಷ್ಠಾಧಿಕಾರಿ

 


ಪೊಲೀಸ್ ಠಾಣೆ ಕಟ್ಟಡ ತುಂಬಾ ಹಳೆಯದಾಗಿದ್ದರಿಂದ ಮಳೆ ಬಂದರೆ ನೀರು ಶೇಖರಣೆಯಾಗಿ ಕೆರೆಯಂತಾಗುತ್ತಿತ್ತು. ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಅನೇಕರ ಸಹಕಾರದಿಂದ ಪೊಲೀಸ್ ಠಾಣೆಯನ್ನು ನವೀಕರಿಸುವುದರ ಜೊತೆಗೆ ಹೊಸ ವಾತಾವರಣ ನಿರ್ಮಿಸಲಾಗಿದೆ.
-ಬಸವರಾಜು, ಸರ್ಕಲ್ ಇನ್‌ಸ್ಪೆಕ್ಟರ್

andolanait

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

7 hours ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

9 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

10 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

10 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

10 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

11 hours ago