ಜಿಲ್ಲೆಗಳು

ಪೊಲೀಸ್ ಠಾಣೆ ಅಂದ ಹೆಚ್ಚಿಸಿದ ಇನ್‌ಸ್ಪೆಕ್ಟರ್!

ಎಚ್.ಡಿ.ಕೋಟೆ ಠಾಣೆ ಅಭಿವೃದ್ಧಿಗೆ ನೆರವಾದ ಬಸವರಾಜು, ಸಿಬ್ಬಂದಿಗೆ ಸಾರ್ವಜನಿಕರ ಮೆಚ್ಚುಗೆ

ಮಂಜು ಕೋಟೆ
ಹೆಚ್.ಡಿ.ಕೋಟೆ: ಯಾವುದೇ ಒಬ್ಬ ಅಧಿಕಾರಿ ಇಲಾಖೆಗೆ ಮತ್ತು ತಾಲ್ಲೂಕಿಗೆ ಏನಾದರೂ ಸೇವೆ ಸಲ್ಲಿಸಬೇಕೆಂಬ ಛಲ ಇದ್ದರೆ ಅಭಿವೃದ್ಧಿಗೆ ಪೂರಕವಾಗಿ ಕೆಲಸ ನಡೆಯುತ್ತವೆ ಎಂಬುದಕ್ಕೆ ಪಟ್ಟಣದ ಇಲ್ಲೊಂದು ಪೊಲೀಸ್ ಠಾಣೆ ಉದಾಹರಣೆಯಾಗಿದೆ.
ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಪಟ್ಟಣದ ಪೊಲೀಸ್ ಠಾಣೆ ದುಸ್ಥಿತಿಯಿಂದ ಕೂಡಿತ್ತಲ್ಲದೆ, ಅನೇಕ ಮೂಲಭೂತ ಸೌಕರ್ಯಗಳಿಂದ  ವಂಚಿತವಾಗಿತ್ತು. ಇದನ್ನು ಮನಗಂಡ ತಾಲ್ಲೂಕಿನವರೇ ಆದ ಎಚ್.ಮಟಕೆರೆ ನಿವಾಸಿ ಬಸವರಾಜ್ ಅವರು ತಾಲ್ಲೂಕು ಸರ್ಕಲ್ ಇನ್‌ಸ್ಪೆಕ್ಟರ್ ಆಗಿ ಒಂದು ವರ್ಷದ ಹಿಂದೆ ಅಧಿಕಾರ ವಹಿಸಿಕೊಂಡು, ತಮ್ಮ ವ್ಯಾಪ್ತಿಯ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡು ಉತ್ತಮ ಸೇವೆ ಮಾಡುವುದರ ಜೊತೆಗೆ ತಮ್ಮ ಹಣ ಮತ್ತು ಕೆಲವರ ಸಹಾಯವನ್ನು ಪಡೆದುಕೊಂಡು ಪೊಲೀಸ್ ಠಾಣೆ ಹಾಗೂ ಆವರಣವನ್ನು ಲಕ್ಷಾಂತರ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಮೂಲಕ ಠಾಣೆಯ ಅಂದವನ್ನು ಹೆಚ್ಚಿಸುವ ಮೂಲಕ ಸಾರ್ವಜನಿಕರ ಪ್ರಶಂಸೆಗೂ ಪಾತ್ರರಾಗಿದ್ದಾರೆ.

ಸಾರ್ವಜನಿಕರು ದೂರುಗಳಿಗೆ ಬಂದ ಸಂದರ್ಭದಲ್ಲಿ ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಪಾರ್ಕಿಂಗ್, ಸುಂದರವಾದ ಗಾರ್ಡನ್ ಜೊತೆಗೆ ಹಳೆಯ ಪೊಲೀಸ್ ಠಾಣೆ ಕಟ್ಟಡದ ನವೀಕರಣ, ಸುಣ್ಣಬಣ್ಣ , ಠಾಣೆ ಎದುರು ಫ್ಲಾಟ್ ಫಾರಂ ಹೀಗೆ ಹಲವಾರು ಅಬಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಸುವ್ಯವಸ್ಥಿತ ಪೊಲೀಸ್ ಠಾಣೆಯಾಗಿ ನಿರ್ಮಾಣಗೊಂಡಿದೆ.
ಪೊಲೀಸ್ ಠಾಣೆ ಎಂದರೆ ಪೊಲೀಸರು ಮತ್ತು ಸಿಬ್ಬಂದಿ ವರ್ಗದವರು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಾರೆ ಎಂಬ ಜನರ ಅಭಿಪ್ರಾಯಗಳೇ ಹೆಚ್ಚಾಗಿರುವ ಇಂತಹ ಸಂದರ್ಭದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಉತ್ತಮವಾದ ಕೆಲಸ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.
ಪೊಲೀಸ್ ಠಾಣೆಯ ಅಭಿವೃದ್ಧಿ ಕೆಲಸಗಳಿಗೆ ಸಿಬ್ಬಂದಿ ಮತ್ತು ನೌಕರರು ಸಹ ಸಾಥ್ ನೀಡಿರುವುದರಿಂದ ಇನ್ನೂ ಹಲವಾರು ವರ್ಷಗಳ ಕಾಲ ಈ ಠಾಣೆಯ ಕಟ್ಟಡವು ಜನರಿಗೆ ಸೇವೆ ನೀಡಬಹುದಾಗಿದೆ. ಸಾರ್ವಜನಿಕರು ಮತ್ತು ನೊಂದವರು ತಮ್ಮ ಕೆಲಸ ಕಾರ್ಯಕ್ಕೆ ಬಂದವರಿಗೆ ಪೊಲೀಸ್ ಇಲಾಖೆಯವರು ಉತ್ತಮ ಸೇವೆ ನೀಡಿದರೆ ಜನಪರ ಪೊಲೀಸ್ ಠಾಣೆಯಾಗುವುದರಲ್ಲಿ ಎರಡು ಮಾತಿಲ್ಲ. ಇದು ಇತರೆ ತಾಲ್ಲೂಕು ಠಾಣೆಗಳಿಗೂ ಸ್ಫೂರ್ತಿಗಲಿದೆ.


ಪೊಲೀಸ್ ಠಾಣೆಯ ವಾತಾವರಣ ಉತ್ತಮವಾಗಿದ್ದರೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು  ಮಾಡಲು ಸ್ಫೂರ್ತಿ ಸಿಗಲಿದೆ. ಅದಕ್ಕಾಗಿಯೇ ಕಚೇರಿಯ ಸುತ್ತಮುತ್ತ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿತ್ತು. ಅದರಂತೆ ಮಾಡಿಕೊಂಡಿದ್ದಾರೆ. ಇದು ಉತ್ತಮವಾದ ಬೆಳವಣಿಗೆ.
-ಚೇತನ್, ಪೊಲೀಸ್ ವರಿಷ್ಠಾಧಿಕಾರಿ

 


ಪೊಲೀಸ್ ಠಾಣೆ ಕಟ್ಟಡ ತುಂಬಾ ಹಳೆಯದಾಗಿದ್ದರಿಂದ ಮಳೆ ಬಂದರೆ ನೀರು ಶೇಖರಣೆಯಾಗಿ ಕೆರೆಯಂತಾಗುತ್ತಿತ್ತು. ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಅನೇಕರ ಸಹಕಾರದಿಂದ ಪೊಲೀಸ್ ಠಾಣೆಯನ್ನು ನವೀಕರಿಸುವುದರ ಜೊತೆಗೆ ಹೊಸ ವಾತಾವರಣ ನಿರ್ಮಿಸಲಾಗಿದೆ.
-ಬಸವರಾಜು, ಸರ್ಕಲ್ ಇನ್‌ಸ್ಪೆಕ್ಟರ್

andolanait

Recent Posts

ಪ್ರೇಮಿಗಳ ಆತ್ಮಹತ್ಯೆ ; ಪೊನ್ನಾಚಿ ಗ್ರಾಮದಲ್ಲಿ ದುರಂತ

ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…

44 mins ago

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…

2 hours ago

ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…

2 hours ago

ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ

ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…

2 hours ago

ಹನೂರು: ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿಸಲಗ ದಾಂಧಲೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…

3 hours ago

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…

4 hours ago