ಜಿಲ್ಲೆಗಳು

ಪೊಲೀಸ್ ಠಾಣೆ ಅಂದ ಹೆಚ್ಚಿಸಿದ ಇನ್‌ಸ್ಪೆಕ್ಟರ್!

ಎಚ್.ಡಿ.ಕೋಟೆ ಠಾಣೆ ಅಭಿವೃದ್ಧಿಗೆ ನೆರವಾದ ಬಸವರಾಜು, ಸಿಬ್ಬಂದಿಗೆ ಸಾರ್ವಜನಿಕರ ಮೆಚ್ಚುಗೆ

ಮಂಜು ಕೋಟೆ
ಹೆಚ್.ಡಿ.ಕೋಟೆ: ಯಾವುದೇ ಒಬ್ಬ ಅಧಿಕಾರಿ ಇಲಾಖೆಗೆ ಮತ್ತು ತಾಲ್ಲೂಕಿಗೆ ಏನಾದರೂ ಸೇವೆ ಸಲ್ಲಿಸಬೇಕೆಂಬ ಛಲ ಇದ್ದರೆ ಅಭಿವೃದ್ಧಿಗೆ ಪೂರಕವಾಗಿ ಕೆಲಸ ನಡೆಯುತ್ತವೆ ಎಂಬುದಕ್ಕೆ ಪಟ್ಟಣದ ಇಲ್ಲೊಂದು ಪೊಲೀಸ್ ಠಾಣೆ ಉದಾಹರಣೆಯಾಗಿದೆ.
ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಪಟ್ಟಣದ ಪೊಲೀಸ್ ಠಾಣೆ ದುಸ್ಥಿತಿಯಿಂದ ಕೂಡಿತ್ತಲ್ಲದೆ, ಅನೇಕ ಮೂಲಭೂತ ಸೌಕರ್ಯಗಳಿಂದ  ವಂಚಿತವಾಗಿತ್ತು. ಇದನ್ನು ಮನಗಂಡ ತಾಲ್ಲೂಕಿನವರೇ ಆದ ಎಚ್.ಮಟಕೆರೆ ನಿವಾಸಿ ಬಸವರಾಜ್ ಅವರು ತಾಲ್ಲೂಕು ಸರ್ಕಲ್ ಇನ್‌ಸ್ಪೆಕ್ಟರ್ ಆಗಿ ಒಂದು ವರ್ಷದ ಹಿಂದೆ ಅಧಿಕಾರ ವಹಿಸಿಕೊಂಡು, ತಮ್ಮ ವ್ಯಾಪ್ತಿಯ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡು ಉತ್ತಮ ಸೇವೆ ಮಾಡುವುದರ ಜೊತೆಗೆ ತಮ್ಮ ಹಣ ಮತ್ತು ಕೆಲವರ ಸಹಾಯವನ್ನು ಪಡೆದುಕೊಂಡು ಪೊಲೀಸ್ ಠಾಣೆ ಹಾಗೂ ಆವರಣವನ್ನು ಲಕ್ಷಾಂತರ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಮೂಲಕ ಠಾಣೆಯ ಅಂದವನ್ನು ಹೆಚ್ಚಿಸುವ ಮೂಲಕ ಸಾರ್ವಜನಿಕರ ಪ್ರಶಂಸೆಗೂ ಪಾತ್ರರಾಗಿದ್ದಾರೆ.

ಸಾರ್ವಜನಿಕರು ದೂರುಗಳಿಗೆ ಬಂದ ಸಂದರ್ಭದಲ್ಲಿ ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಪಾರ್ಕಿಂಗ್, ಸುಂದರವಾದ ಗಾರ್ಡನ್ ಜೊತೆಗೆ ಹಳೆಯ ಪೊಲೀಸ್ ಠಾಣೆ ಕಟ್ಟಡದ ನವೀಕರಣ, ಸುಣ್ಣಬಣ್ಣ , ಠಾಣೆ ಎದುರು ಫ್ಲಾಟ್ ಫಾರಂ ಹೀಗೆ ಹಲವಾರು ಅಬಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಸುವ್ಯವಸ್ಥಿತ ಪೊಲೀಸ್ ಠಾಣೆಯಾಗಿ ನಿರ್ಮಾಣಗೊಂಡಿದೆ.
ಪೊಲೀಸ್ ಠಾಣೆ ಎಂದರೆ ಪೊಲೀಸರು ಮತ್ತು ಸಿಬ್ಬಂದಿ ವರ್ಗದವರು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಾರೆ ಎಂಬ ಜನರ ಅಭಿಪ್ರಾಯಗಳೇ ಹೆಚ್ಚಾಗಿರುವ ಇಂತಹ ಸಂದರ್ಭದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಉತ್ತಮವಾದ ಕೆಲಸ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.
ಪೊಲೀಸ್ ಠಾಣೆಯ ಅಭಿವೃದ್ಧಿ ಕೆಲಸಗಳಿಗೆ ಸಿಬ್ಬಂದಿ ಮತ್ತು ನೌಕರರು ಸಹ ಸಾಥ್ ನೀಡಿರುವುದರಿಂದ ಇನ್ನೂ ಹಲವಾರು ವರ್ಷಗಳ ಕಾಲ ಈ ಠಾಣೆಯ ಕಟ್ಟಡವು ಜನರಿಗೆ ಸೇವೆ ನೀಡಬಹುದಾಗಿದೆ. ಸಾರ್ವಜನಿಕರು ಮತ್ತು ನೊಂದವರು ತಮ್ಮ ಕೆಲಸ ಕಾರ್ಯಕ್ಕೆ ಬಂದವರಿಗೆ ಪೊಲೀಸ್ ಇಲಾಖೆಯವರು ಉತ್ತಮ ಸೇವೆ ನೀಡಿದರೆ ಜನಪರ ಪೊಲೀಸ್ ಠಾಣೆಯಾಗುವುದರಲ್ಲಿ ಎರಡು ಮಾತಿಲ್ಲ. ಇದು ಇತರೆ ತಾಲ್ಲೂಕು ಠಾಣೆಗಳಿಗೂ ಸ್ಫೂರ್ತಿಗಲಿದೆ.


ಪೊಲೀಸ್ ಠಾಣೆಯ ವಾತಾವರಣ ಉತ್ತಮವಾಗಿದ್ದರೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು  ಮಾಡಲು ಸ್ಫೂರ್ತಿ ಸಿಗಲಿದೆ. ಅದಕ್ಕಾಗಿಯೇ ಕಚೇರಿಯ ಸುತ್ತಮುತ್ತ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿತ್ತು. ಅದರಂತೆ ಮಾಡಿಕೊಂಡಿದ್ದಾರೆ. ಇದು ಉತ್ತಮವಾದ ಬೆಳವಣಿಗೆ.
-ಚೇತನ್, ಪೊಲೀಸ್ ವರಿಷ್ಠಾಧಿಕಾರಿ

 


ಪೊಲೀಸ್ ಠಾಣೆ ಕಟ್ಟಡ ತುಂಬಾ ಹಳೆಯದಾಗಿದ್ದರಿಂದ ಮಳೆ ಬಂದರೆ ನೀರು ಶೇಖರಣೆಯಾಗಿ ಕೆರೆಯಂತಾಗುತ್ತಿತ್ತು. ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಅನೇಕರ ಸಹಕಾರದಿಂದ ಪೊಲೀಸ್ ಠಾಣೆಯನ್ನು ನವೀಕರಿಸುವುದರ ಜೊತೆಗೆ ಹೊಸ ವಾತಾವರಣ ನಿರ್ಮಿಸಲಾಗಿದೆ.
-ಬಸವರಾಜು, ಸರ್ಕಲ್ ಇನ್‌ಸ್ಪೆಕ್ಟರ್

andolanait

Recent Posts

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

1 hour ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

1 hour ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

3 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

4 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

5 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

8 hours ago