ಜಿಲ್ಲೆಗಳು

ರಾಜಕೀಯ ತೊರೆದರೂ ಮಂಡ್ಯ ಬಿಡಲಾರೆ: ಸಂಸದೆ ಸುಮಲತಾ

ಮಂಡ್ಯ: ಮಂಡ್ಯ ಅಂಬರೀಶ್ ಅವರ ಕರ್ಮಭೂಮಿ ಹಾಗಾಗಿ ರಾಜಕೀಯ ಬಿಟ್ಟರೂ ಮಂಡ್ಯವನ್ನು ಬಿಡಲ್ಲ ಎಂದು ಸಂಸದೆ ಸುಮಲತಾ ಸ್ಪಷ್ಟಪಡಿಸಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ” ಹೊಸ ಕ್ಷೇತ್ರ ಹುಡುಕುತ್ತಿರುವವರು ಯಾರು ಅಂತ ಗೊತ್ತಿಲ್ಲ. ಸುಮಲತಾ ಮಂಡ್ಯ ಬಿಟ್ಟು ಹೋಗುತ್ತಾರೆ ಎಂದು ಒಂದಷ್ಟು ಜನ ಕನಸು ಕಾಣುತ್ತಿದ್ದಾರೆ. ನಾನು ಕ್ಷೇತ್ರ ಬಿಟ್ಟು ಹೋಗಲ್ಲ ಎನ್ನುವುದು ಅವರ ಕನಸಿಗೆ ನೀರು ಚೆಲ್ಲಿದಂತಾಗಿರಬಹುದು” ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು.

ನಾನು ರಾಜಕೀಯಕ್ಕೆ ಬಂದಿರುವುದು ಮಂಡ್ಯ ಜನಕ್ಕೋಸ್ಕರ. ರಾಜಕೀಯದಿಂದ ಏನೇನೋ ಆಗಲು ಬಂದಿಲ್ಲ. ರಾಜಕೀಯದಲ್ಲಿ ಬೇಕಿದ್ರೆ ಇಂದು ಇರುತ್ತೇನೆ, ನಾಳೆ ಬಿಡುತ್ತೇನೆ, ಆದರೆ ಮಂಡ್ಯ ಮಾತ್ರ ಬಿಡಲ್ಲ ಎಂದು ಸ್ಪಷ್ಟಪಡಿಸಿದರು.

ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ನನ್ನನ್ನು ಬೆಂಬಲಿಸಿದ್ದಾರೆ. ಯಾರ ಪರ, ವಿರೋಧ ಎಂಬ ಧೋರಣೆ ಅನುಸರಿಸದೆ ತಟಸ್ಥವಾಗಿರುವುದು ಒಳ್ಳೆಯದು. ಯಾರಿಗೂ ಕೂಡ ನೋಯಿಸಬಾರದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅಭಿಷೇಕ್‌ ರಾಜಕೀಯ ಪ್ರವೇಶದ ನಿರ್ಧಾರ ನನ್ನದಲ್ಲ
ಅಭಿಷೇಕ್‌ ರಾಜಕೀಯ ಪ್ರವೇಶದ ನಿರ್ಧಾರ ನನ್ನದಲ್ಲ
ವಿಧಾನ ಸಭಾ ಚುನಾವಣೆಯಲ್ಲಿ ನಾನೇನು ಸ್ಪರ್ಧಿಸುವುದಿಲ್ಲ. ನಾನು ಯಾರಿಗೆ ಬೆಂಬಲ ಕೊಡಬೇಕು ಎನ್ನುವುದು ಮುಂದೆ ನೋಡೋಣ. ಇನ್ನೂ ಯಾರ್ಯಾರು ಕ್ಯಾಂಡಿಡೇಟ್ಸ್ ಎನ್ನುವುದೇ ಗೊತ್ತಿಲ್ಲ. ಈಗಲೇ ನಾನು ಯಾರಿಗೆ ಅಂತ ಬೆಂಬಲ ಸೂಚಿಸಲಿ ಎಂದು ಪ್ರಶ್ನಿಸಿದರು.

ರಾಜಕೀಯಕ್ಕೆ ಬರಬೇಕೋ ಬೇಡವೋ ಎಂಬುದನ್ನು ಅಭಿಷೇಕ್ ಅಂಬರೀಶ್ ಅವರೇ ನಿರ್ಧರಿಸುತ್ತಾರೆ. ಇದರಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಈಗ ಸದ್ಯಕ್ಕೆ ಅವನು ಎರಡು ಮೂರು ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದಾನೆ. ಅವರ ರಾಜಕೀಯ ಭವಿಷ್ಯವನ್ನು ಅವನೇ ಡಿಸೈಡ್ ಮಾಡಬೇಕು ಎಂದು ಉತ್ತರಿಸಿದರು.

ಜಿಲ್ಲೆ ಅಭಿವೃದ್ಧಿಗೆ 300 ಕೋಟಿ ರೂ.ಗೆ ಬೇಡಿಕೆ
ಮಂಡ್ಯ ಜಿಲ್ಲೆಯಲ್ಲಿರುವ ಹಲವಾರು ರಸ್ತೆಗಳು ಹಾಳಾಗಿವೆ, ಕೆರೆಗಳ ಅಭಿವೃದ್ಧಿ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ 300 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೆ, ಖುದ್ದು ಭೇಟಿ ಮಾಡಿಯೂ ಚರ್ಚೆ ನಡೆಸಿ ಮನವಿ ಮಾಡಿದ್ದೆ. ಅವರೂ ಸಹ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು. ಅದು ಕಾರ್ಯರೂಪಕ್ಕೆ ಬರಬೇಕಷ್ಟೇ ಎಂದು ಹೇಳಿದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

8 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

8 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago