ಜಿಲ್ಲೆಗಳು

ನಗರಪಾಲಿಕೆ ವಾಹನಗಳಿಗೆ ಪೂಜಾ ಸ್ಪರ್ಶ

ಆಯುಧ ಪೂಜೆ ಮುನ್ನ ದಿನ ೪೦೦ ವಾಹನಗಳಿಗೆ ವಿಶೇಷ ಪೂಜೆ

ಮೈಸೂರು: ಮಹಾನಗರಪಾಲಿಕೆಯ ಸುಮಾರು ೪೦೦ ವಾಹನಗಳನ್ನು ಒಂದೆಡೆ ನಿಲ್ಲಿಸಿ ಪೂಜಾ ಕಾರ್ಯ ನಡೆಸುವ ಮೂಲಕ ಅದ್ಧೂರಿ ಯಾಗಿ ಆಯುಧ ಪೂಜೆ ಆಚರಿಸಲಾಯಿತು. ಜೊತೆಗೆ ಉತ್ತಮ ಚಾಲಕರಿಗೆ ಸನ್ಮಾನವನ್ನೂ ಮಾಡಲಾಯಿತು.

ನಗರದ ಕುಕ್ಕರಹಳ್ಳಿ ಕೆರೆ ರಸ್ತೆಯ ಮಹಾಬೋಧಿ ಶಾಲೆ ಎದುರಿನ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಆಯುಧ ಪೂಜಾ ಕಾರ್ಯಕ್ರಮ ವನ್ನು ಮಹಾಪೌರ ಶಿವಕುಮಾರ್ ಹಾಗೂ ಆಯುಕ್ತ ಲಕ್ಷ್ಮೀಕಾಂತರೆಡ್ಡಿ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

ನಗರಪಾಲಿಕೆಯ ೨೮೫ ಟಿಪ್ಪರ್, ೬೫ ಟ್ರಾಕ್ಟರ್, ೨೧ ಕಾಂಪ್ಯಾಕ್ಟ್ ವಾಹನ, ೯ ಜೆಸಿಬಿ, ೫ ಎಸ್ಕಾವೇಟರ್ ಸೇರಿದಂತೆ ಮೈದಾನದಲ್ಲಿ ೪೮೫ ವಾಹನ ಗಳನ್ನು ನಿಲ್ಲಿಸಲಾಗಿತ್ತು. ಅವುಗಳ ಅಲಂಕಾರಕ್ಕೆ ನಗರಪಾಲಿಕೆ ವತಿಯಿಂದ ೮೦ ಸಾವಿರ ರೂ. ಹಣ ನೀಡಲಾಗಿತ್ತು. ಹಬ್ಬದ ನಿಮಿತ್ತ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.

ಇದೇ ವೇಳೆ ಚಾಲಕರಾದ ಜಯರಾಜ್, ಸುಧೀಂದ್ರ, ಮುರುಗೇಶ್, ವೆಂಕಟೇಶ್, ಖಲೀಲ್, ಮಂಚಣ್ಣ, ರವಿ, ರಾಜಶೇಖರಮೂರ್ತಿ, ಸುದೀಂದ್ರ ಯಾದವ್, ಯಶವಂತ್, ವಾಜಿದ್ ಅವರನ್ನು ಸನ್ಮಾನಿಸಲಾಯಿತು. ವಾಹನ ವಿಭಾಗದ ಮೇಲ್ವಿಚಾರಕ ನಸ್ರುಲ್ಲಾ ಅವರನ್ನು ವಿಶೇಷವಾಗಿ ಅಭಿನಂದಿಸಲಾಯಿತು. ಆಯುಕ್ತ ಲಕ್ಷ್ಮೀಕಾಂತರೆಡ್ಡಿ, ಉಪ ಮಹಾಪೌರರಾದ ಡಾ.ಜಿ.ರೂಪಾ, ಉಪ ಆಯುಕ್ತ ಮಹೇಶ್, ಹೆಚ್ಚುವರಿ ಆಯುಕ್ತರಾದ ರೂಪಾ, ಸವಿತಾ, ನಗರಪಾಲಿಕೆ ಸದಸ್ಯರಾದ ಅಶ್ವಿನಿ ಅನಂತು, ವೇದಾವತಿ, ಸ್ವಚ್ಛತಾ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

andolana

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

7 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

7 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

7 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

7 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

7 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

7 hours ago