ಆಯುಧ ಪೂಜೆ ಮುನ್ನ ದಿನ ೪೦೦ ವಾಹನಗಳಿಗೆ ವಿಶೇಷ ಪೂಜೆ
ಮೈಸೂರು: ಮಹಾನಗರಪಾಲಿಕೆಯ ಸುಮಾರು ೪೦೦ ವಾಹನಗಳನ್ನು ಒಂದೆಡೆ ನಿಲ್ಲಿಸಿ ಪೂಜಾ ಕಾರ್ಯ ನಡೆಸುವ ಮೂಲಕ ಅದ್ಧೂರಿ ಯಾಗಿ ಆಯುಧ ಪೂಜೆ ಆಚರಿಸಲಾಯಿತು. ಜೊತೆಗೆ ಉತ್ತಮ ಚಾಲಕರಿಗೆ ಸನ್ಮಾನವನ್ನೂ ಮಾಡಲಾಯಿತು.
ನಗರದ ಕುಕ್ಕರಹಳ್ಳಿ ಕೆರೆ ರಸ್ತೆಯ ಮಹಾಬೋಧಿ ಶಾಲೆ ಎದುರಿನ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಆಯುಧ ಪೂಜಾ ಕಾರ್ಯಕ್ರಮ ವನ್ನು ಮಹಾಪೌರ ಶಿವಕುಮಾರ್ ಹಾಗೂ ಆಯುಕ್ತ ಲಕ್ಷ್ಮೀಕಾಂತರೆಡ್ಡಿ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ನಗರಪಾಲಿಕೆಯ ೨೮೫ ಟಿಪ್ಪರ್, ೬೫ ಟ್ರಾಕ್ಟರ್, ೨೧ ಕಾಂಪ್ಯಾಕ್ಟ್ ವಾಹನ, ೯ ಜೆಸಿಬಿ, ೫ ಎಸ್ಕಾವೇಟರ್ ಸೇರಿದಂತೆ ಮೈದಾನದಲ್ಲಿ ೪೮೫ ವಾಹನ ಗಳನ್ನು ನಿಲ್ಲಿಸಲಾಗಿತ್ತು. ಅವುಗಳ ಅಲಂಕಾರಕ್ಕೆ ನಗರಪಾಲಿಕೆ ವತಿಯಿಂದ ೮೦ ಸಾವಿರ ರೂ. ಹಣ ನೀಡಲಾಗಿತ್ತು. ಹಬ್ಬದ ನಿಮಿತ್ತ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.
ಇದೇ ವೇಳೆ ಚಾಲಕರಾದ ಜಯರಾಜ್, ಸುಧೀಂದ್ರ, ಮುರುಗೇಶ್, ವೆಂಕಟೇಶ್, ಖಲೀಲ್, ಮಂಚಣ್ಣ, ರವಿ, ರಾಜಶೇಖರಮೂರ್ತಿ, ಸುದೀಂದ್ರ ಯಾದವ್, ಯಶವಂತ್, ವಾಜಿದ್ ಅವರನ್ನು ಸನ್ಮಾನಿಸಲಾಯಿತು. ವಾಹನ ವಿಭಾಗದ ಮೇಲ್ವಿಚಾರಕ ನಸ್ರುಲ್ಲಾ ಅವರನ್ನು ವಿಶೇಷವಾಗಿ ಅಭಿನಂದಿಸಲಾಯಿತು. ಆಯುಕ್ತ ಲಕ್ಷ್ಮೀಕಾಂತರೆಡ್ಡಿ, ಉಪ ಮಹಾಪೌರರಾದ ಡಾ.ಜಿ.ರೂಪಾ, ಉಪ ಆಯುಕ್ತ ಮಹೇಶ್, ಹೆಚ್ಚುವರಿ ಆಯುಕ್ತರಾದ ರೂಪಾ, ಸವಿತಾ, ನಗರಪಾಲಿಕೆ ಸದಸ್ಯರಾದ ಅಶ್ವಿನಿ ಅನಂತು, ವೇದಾವತಿ, ಸ್ವಚ್ಛತಾ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…