ಜಿಲ್ಲೆಗಳು

ಚೈಲ್ಡ್ ಪೋರ್ನೋಗ್ರಫಿ ಸರ್ಚ್ ಮಾಡೀರಾ ಜೋಕೆ!

ಮೈಸೂರು ಜಿಲ್ಲೆಯಲ್ಲಿ ಎರಡು ಪ್ರಕರಣ ದಾಖಲು

ಬಿ.ಎನ್.ಧನಂಜಯಗೌಡ

ಮೈಸೂರು : ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ಚಿತ್ರಗಳನ್ನು (child pornography) ನೋಡಿದರೆ ಮಾತ್ರವಲ್ಲ, ಆ ವಿಡಿಯೋಗಳ ಸರ್ಚ್ ಮಾಡಿದರು ಕೂಡ ಸಿಕ್ಕಿ ಬೀಳ್ತೀರಾ! ಹೌದು…ಇಂತಹದ್ದೆ ಎರಡು ಪ್ರಕರಣಗಳು ಮೈಸೂರು ಜಿಲ್ಲೆಯಲ್ಲಿ ಪತ್ತೆಯಾಗಿವೆ.

ಮಕ್ಕಳ ಸಂಬಂಧಿ ಅಶ್ಲೀಲ ವಿಡಿಯೋಗಳ ವಿಕ್ಷಣೆ, ಡೌನ್ಲೋಡ್, ಶೇರ್ ಮಾಡುವುದು ಗೂಗಲ್ ಸೇರಿದಂತೆ ಯಾವುದೇ ಅಂತರ್ಜಾಲದಲ್ಲಿ ಸರ್ಚ್ ಮಾಡಿದರೂ ಕಾನೂನು ಕ್ರಮಕ್ಕೆ ಒಳಗಾಗಬೇಕಾಗುತ್ತದೆ. ಇಂತಹ ಗೀಳಿದ್ರೆ ಬಿಡೋದು ವಾಸಿ.

ಮೈಸೂರು ಜಿಲ್ಲೆಯ ಇಬ್ಬರು ಯುವಕರು ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ಚಿತ್ರಗಳಿಗಾಗಿ ಹುಡುಕಾಡಿರುವ ಮತ್ತು ವೀಕ್ಷಣೆ ಮಾಡಿರುವ ಸಂಬಂಧದ ಮಾಹಿತಿ ‘ನ್ಯಾಷನಲ್ ಸೆಂಟರ್ ಫಾರ್ ಮಿಸ್ಸಿಂಗ್ ಆ್ಯಂಡ್ ಎಕ್ಸಾಫ್ಲಾಯ್ಟೆಡ್ ಚಿಲ್ಡ್ರನ್ (ಎನ್‌ಸಿಎಂಇಸಿ) ಸೆಂಟರ್‌ಗೆ’ ರವಾನೆಯಾಗಿದ್ದು, ಈ ಕೇಂದ್ರದಿಂದ ಮಾಹಿತಿ ಒಳಗೊಂಡಿರುವ ಸೈಬರ್ ಟಿಪ್ ಲೈನ್ ರಿಪೋರ್ಟ್ ಸಿಡಿಯನ್ನು ಎನ್‌ಸಿಆರ್‌ಬಿ ಅವರಿಂದ ಅಂಚೆ ಮೂಲಕ ಮೈಸೂರು ಜಿಲ್ಲಾ ಸೆನ್ ಠಾಣೆಗೆ ಕಳುಹಿಸಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ.

ಎಲ್ಲಿ ಸರ್ಚ್ ಮಾಡಿದ್ರು ಸಿಕ್ಕಿ ಬೀಳೋದೆ : ದೇಶದ ಯಾವುದೇ ಭಾಗದಲ್ಲಿ ಮೊಬೈಲ್, ಡೆಸ್ಕ್ ಟಾಪ್‌ಗಳಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳ ವಿಡಿಯೋ ಸರ್ಚ್ ಮಾಡಿದರೂ, ಈ ಮಾಹಿತಿ ಕೂಡಲೇ ದೆಹಲಿಯಲ್ಲಿ ಇರುವ ‘ನ್ಯಾಷನಲ್ ಸೆಂಟರ್ ಫಾರ್ ಮಿಸ್ಸಿಂಗ್ ಆ್ಯಂಡ್ ಎಕ್ಸಾಫ್ಲಾಯ್ಟೆಡ್ ಚಿಲ್ಡ್ರನ್ (ಎನ್‌ಸಿಎಂಇಸಿ) ಸೆಂಟರ್‌ಗೆ’ ಗೊತ್ತಾಗುತ್ತದೆ. ಇಲ್ಲಿ ದಾಖಲಾಗುವ ಐಪಿ ಅಡ್ರೆಸ್ ಆಧರಿಸಿ ವ್ಯಕ್ತಿಯ ವಿಳಾಸ ಹುಡುಕಿ ಅದನ್ನು ಸಂಬಂಧಿತ ವ್ಯಾಪ್ತಿಯ ಪೊಲೀಸ ಠಾಣೆಗೆ ಸೈಬರ್ ಟಿಪ್ ಲೈನ್ ರಿಪೋರ್ಟ್ ಸಿಡಿಯನ್ನು ಎನ್‌ಸಿಆರ್‌ಬಿ ಮೂಲಕ ಕಳಿಸಲಾಗುತ್ತದೆ.

ಕೆಟ್ಟ ಗೀಳು : ಇತ್ತೀಚಿಗೆ ಅಶ್ಲೀಲ ಚಿತ್ರ ನೋಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕೆಲವರಿಗೆ ಮಕ್ಕಳ ಅಶ್ಲೀಲ ಚಿತ್ರಗಳನ್ನು ನೋಡುವುದು ಗೀಳಾಗಿದೆ. ಇದು ಡ್ರಗ್ಸ್ ಸೇವನೆಯಂತೆಯೇ ಆಗಿದ್ದು, ಕೆಲವರು ಅಡಿಕ್ಟ್ ಆಗಿ ಬಿಡುತ್ತಾರೆ. ಅತ್ಯಂತ ಕೆಟ್ಟ ಚಟವಾಗಿದ್ದು, ಇತ್ತಿಚಿನ ದಿನಗಳಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಅಶ್ಲಿಲ ವಿಡಿಯೋಗಳನ್ನು ನೋಡುತ್ತಿರುವುದು ಕಂಡುಬಂದಿದೆ. ಇದರಿಂದಾಗಿ ಸಮಾಜದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಇದನ್ನು ತಡೆಯಲು ಕೇಂದ್ರ ಸರ್ಕಾರವೇ ಕಠಿಣ ಕಾನೂನು ರೂಪಿಸಿದೆ.

ಶಿಕ್ಷೆ: ಐಟಿ ಕಾಯಿದೆ ೬೭ ಬಿ ಪ್ರಕಾರ ೫ ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ೧೦ ಲಕ್ಷ ರೂ.ವರೆಗೆ ದಂಡ ವಿಧಿಸಬಹುದು. ಮಕ್ಕಳ ಅಶ್ಲಿಲ ವಿಡಿಯೋ, ಫೋಟೊಗಳ ವಿಕ್ಷಣೆ, ಡೌನ್ಲೋಡ್ ಮಾಡುವುದು ಹಾಗೂ ಶೇರ್ ಮಾಡುವುದರ ಜತೆಗೆ ಅವುಗಳಿಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹುಡುಕುವುದು ಶಿಕ್ಷಾರ್ಹ ಅಪರಾಧ ಎನ್ನುತ್ತಾರೆ ಪೊಲೀಸ್ ಅಧಿಕಾರಿಯೊಬ್ಬರು.

andolanait

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

1 hour ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

2 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

3 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

4 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

5 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

5 hours ago