ಹನೂರು : ಪ್ರತಿಯೊಬ್ಬರಿಗೂ ಸದೃಢ ದೇಹ ಸದೃಢ ಮನಸು ಇರಬೇಕಾದರೆ ಪೌಷ್ಟಿಕ ಆಹಾರ ಬಹಳ ಮುಖ್ಯ ಈ ವಿಚಾರದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಹೋಲಿಕ್ರಾಸ್ ಸಂಸ್ಥೆಯ ಸಂಯೋಜಕ ಬಸವರಾಜು ತಿಳಿಸಿದರು.
ತಾಲೂಕಿನ ಕೂಡಲೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹೋಲಿಕ್ರಾಸ್ ಸಂಸ್ಥೆ, ಅಂಗನವಾಡಿ ಸಹಕಾರದೊಂದಿಗೆ ಹಮ್ಮಿಕೊoಡಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.
ಈ ಕಾರ್ಯಕ್ರಮದ ಉದ್ದೇಶ ಪೌಷ್ಟಿಕ ಆಹಾರದ ಬಗ್ಗೆ ಜನರಿಗೆ ಅರಿವು ಮೂಡಿಸುವುದಾಗಿದೆ. ಪೌಷ್ಟಿಕ ಆಹಾರ ನಮ್ಮ ದೈನಂದಿನ ಜೀವನದಲ್ಲಿ ತುಂಬಾ ಮುಖ್ಯವಾಗಿದೆ.ಆರೋಗ್ಯಕರ ಜೀವನ ನಡೆಸಲು ಇಂತಹ ಆಹಾರ ತುಂಬಾ ಅವಶ್ಯಕವಾಗಿದೆ.ಇಂತಹ ಆರೋಗ್ಯಕರ ಜೀವನ ನಡೆಸಲು ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದಲೇ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಇಲ್ಲಿ ಪಡೆದ ಮಾಹಿತಿ ತಿಳಿದುಕೊಂಡು ತಮ್ಮ ಜೀವನಕ್ಕೆ ಬೇಕಾದ ಆಹಾರ ಪದ್ಧತಿಯನ್ನು ಬದಲಾವಣೆ ಮಾಡಿಕೊಂಡು ಪೌಷ್ಟಿಕ ಆಹಾರ ಸೇವನೆ ಮಾಡಿ ಎಂದರು.
ಶಿಕ್ಷಕಿ ಗಾಯತ್ರಿ ಮಾತನಾಡಿ ಆರೋಗ್ಯವೇ ಭಾಗ್ಯ ಎಂಬಂತೆ ಮನುಷ್ಯ ಆರೋಗ್ಯಯುತವಾಗಿರಬೇಕಾದರೆ ಒಳ್ಳೆಯ ಪೌಷ್ಟಿಕ ಆಹಾರ ಸೇವನೆ ತುಂಬಾ ಮುಖ್ಯ ಆ ನಿಟ್ಟಿನಲ್ಲಿ ತಾವೆಲ್ಲರೂ ಸಹ ತರಕಾರಿ, ಹಣ್ಣು ಹಂಪಲು, ಹಾಲು ಈಗೆ ಪ್ರೊಟೀನ್ ಯುತ ಆಹಾರ ಪದಾರ್ಥ ಒಟ್ಟಾರೆ ಪೌಷ್ಟಿಕ ಆಹಾರ ಸೇವಿಸಲೇ ಬೇಕು ಎಂದರು.
ಇದೆ ಸಂದರ್ಭದಲ್ಲಿ ಪೌಷ್ಟಿಕ ಆಹಾರ ಸೇವನೆ ಕುರಿತು ಹೋಲಿಕ್ರಾಸ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಶಾಲಾ ಶಿಕ್ಷಕರು ಮಕ್ಕಳಿಗೆ, ನೆರೆದಿದ್ದ ಪೋಷಕರಿಗೆ ಅರಿವು ಮೂಡಿಸಿದರು.
ಇದೆ ಸಂದರ್ಭದಲ್ಲಿ , ಸಹ ಶಿಕ್ಷಕರಾದ ರಾಜಮ್ಮ,, ಮರಿಯಮ್ಮ, ನಿರ್ಮಲ ಮೇರಿ, ಅಂಗನವಾಡಿ ಶಿಕ್ಷಕಿಯಾದ ಉಮಾ ದೇವಿ, ಗ್ಲೋರಿಯ, ಈಶ್ವರಿ ಹೋಲಿಕ್ರಾಸ್ ಸಂಸ್ಥೆಯ ಸಂಯೋಜಕ ಸುರೇಶ್, ದಾನಪ್ಪ, ಮುತ್ತು, ಕಾಂತರಾಜು, ಮಧು, ಹಾಗೂ ಗರ್ಭಿಣಿ ಬಾಣoತಿಯರು, ಮಕ್ಕಳು ಇದ್ದರು..
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…