ಜಿಲ್ಲೆಗಳು

ಕೂಡಲೂರು ಶಾಲೆಯಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ

ಹನೂರು : ಪ್ರತಿಯೊಬ್ಬರಿಗೂ ಸದೃಢ ದೇಹ ಸದೃಢ ಮನಸು ಇರಬೇಕಾದರೆ ಪೌಷ್ಟಿಕ ಆಹಾರ ಬಹಳ ಮುಖ್ಯ ಈ ವಿಚಾರದ  ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಹೋಲಿಕ್ರಾಸ್ ಸಂಸ್ಥೆಯ ಸಂಯೋಜಕ ಬಸವರಾಜು ತಿಳಿಸಿದರು.

ತಾಲೂಕಿನ ಕೂಡಲೂರು   ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹೋಲಿಕ್ರಾಸ್ ಸಂಸ್ಥೆ, ಅಂಗನವಾಡಿ ಸಹಕಾರದೊಂದಿಗೆ  ಹಮ್ಮಿಕೊoಡಿದ್ದ ಪೋಷಣ್   ಅಭಿಯಾನ  ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

ಈ ಕಾರ್ಯಕ್ರಮದ  ಉದ್ದೇಶ ಪೌಷ್ಟಿಕ ಆಹಾರದ ಬಗ್ಗೆ ಜನರಿಗೆ ಅರಿವು ಮೂಡಿಸುವುದಾಗಿದೆ.  ಪೌಷ್ಟಿಕ ಆಹಾರ ನಮ್ಮ ದೈನಂದಿನ ಜೀವನದಲ್ಲಿ ತುಂಬಾ ಮುಖ್ಯವಾಗಿದೆ.ಆರೋಗ್ಯಕರ ಜೀವನ ನಡೆಸಲು ಇಂತಹ ಆಹಾರ ತುಂಬಾ ಅವಶ್ಯಕವಾಗಿದೆ.ಇಂತಹ ಆರೋಗ್ಯಕರ ಜೀವನ ನಡೆಸಲು ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದಲೇ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಇಲ್ಲಿ ಪಡೆದ ಮಾಹಿತಿ ತಿಳಿದುಕೊಂಡು ತಮ್ಮ ಜೀವನಕ್ಕೆ ಬೇಕಾದ ಆಹಾರ ಪದ್ಧತಿಯನ್ನು ಬದಲಾವಣೆ ಮಾಡಿಕೊಂಡು ಪೌಷ್ಟಿಕ ಆಹಾರ ಸೇವನೆ ಮಾಡಿ ಎಂದರು.

ಶಿಕ್ಷಕಿ  ಗಾಯತ್ರಿ   ಮಾತನಾಡಿ ಆರೋಗ್ಯವೇ ಭಾಗ್ಯ ಎಂಬಂತೆ ಮನುಷ್ಯ ಆರೋಗ್ಯಯುತವಾಗಿರಬೇಕಾದರೆ ಒಳ್ಳೆಯ ಪೌಷ್ಟಿಕ ಆಹಾರ ಸೇವನೆ ತುಂಬಾ ಮುಖ್ಯ ಆ ನಿಟ್ಟಿನಲ್ಲಿ ತಾವೆಲ್ಲರೂ ಸಹ ತರಕಾರಿ, ಹಣ್ಣು ಹಂಪಲು, ಹಾಲು ಈಗೆ ಪ್ರೊಟೀನ್ ಯುತ ಆಹಾರ ಪದಾರ್ಥ ಒಟ್ಟಾರೆ ಪೌಷ್ಟಿಕ ಆಹಾರ ಸೇವಿಸಲೇ ಬೇಕು ಎಂದರು.

ಇದೆ ಸಂದರ್ಭದಲ್ಲಿ ಪೌಷ್ಟಿಕ ಆಹಾರ ಸೇವನೆ ಕುರಿತು ಹೋಲಿಕ್ರಾಸ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಶಾಲಾ ಶಿಕ್ಷಕರು ಮಕ್ಕಳಿಗೆ, ನೆರೆದಿದ್ದ ಪೋಷಕರಿಗೆ ಅರಿವು ಮೂಡಿಸಿದರು.

ಇದೆ ಸಂದರ್ಭದಲ್ಲಿ , ಸಹ ಶಿಕ್ಷಕರಾದ ರಾಜಮ್ಮ,,  ಮರಿಯಮ್ಮ, ನಿರ್ಮಲ ಮೇರಿ, ಅಂಗನವಾಡಿ ಶಿಕ್ಷಕಿಯಾದ ಉಮಾ ದೇವಿ, ಗ್ಲೋರಿಯ, ಈಶ್ವರಿ  ಹೋಲಿಕ್ರಾಸ್ ಸಂಸ್ಥೆಯ ಸಂಯೋಜಕ  ಸುರೇಶ್, ದಾನಪ್ಪ, ಮುತ್ತು, ಕಾಂತರಾಜು, ಮಧು,  ಹಾಗೂ  ಗರ್ಭಿಣಿ ಬಾಣoತಿಯರು, ಮಕ್ಕಳು  ಇದ್ದರು..

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

18 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

18 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

18 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

18 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

19 hours ago