ಜಿಲ್ಲೆಗಳು

ಅಂಚೆ ಇಲಾಖೆ ಉಳಿವಿಗಾಗಿ ಹೋರಾಟ ಅಗತ್ಯ: ಕೆ.ಎನ್.ಉಮೇಶ್

ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯಿಸ್‌ನ ೧೨ನೇ ಫೆಡರಲ್ ಕೌನ್ಸಿಲ್ ಅಧಿವೇಶನ ಉದ್ಘಾಟನೆ

ಮೈಸೂರು: ಅಂಚೆ ಇಲಾಖೆಯನ್ನು ಖಾಸಗೀಕರಣ ಮಾಡುವ ಹುನ್ನಾರಗಳು ನಡೆಯುತ್ತಿದ್ದು, ಸಾರ್ವಜನಿಕರ ಸ್ವತ್ತಾದ ಅಂಚೆ ಇಲಾಖೆಯನ್ನು ಉಳಿಸಿಕೊಳ್ಳಬೇಕಾದದ್ದು ಪ್ರತಿಯೊಬ್ಬ ಅಂಚೆ ನೌಕರನ ಜವಾಬ್ದಾರಿಯಾಗಿರುವ ಕಾರಣ ಅಗತ್ಯ ಹೋರಾಟ ನಡೆಸಬೇಕು ಎಂದು ಸಿಐಟಿಯು ರಾಷ್ಟ್ರೀಯ ಕಾರ್ಯದರ್ಶಿ ಕೆ.ಎನ್.ಉಮೇಶ್ ಸಲಹೆ ನೀಡಿದರು.
ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಗೋವಿಂದರಾವ್ ಮೆಮೋರಿಯಲ್ ಹಾಲ್‌ನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯೀಸ್‌ನ ೧೨ನೇ ಫೆಡರಲ್ ಕೌನ್ಸಿಲ್ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಚೆ ಇಲಾಖೆಯನ್ನು ಆರು ಘಟಕಗಳನ್ನಾಗಿ ವಿಭಜಿಸಲು ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಇದೊಂದು ಅವೈಜ್ಞಾನಿಕ ಕ್ರಮವಾಗಿದೆ. ಒಂದೆಡೆ ಲಾಭ ಮತ್ತೊಂದೆಡೆ ನಷ್ಟದಲ್ಲಿರುವ ಬೇರೆ ಬೇರೆ ಬ್ಯಾಂಕ್‌ಗಳನ್ನು ಒಟ್ಟಿಗೆ ಸೇರಿಸುವ ಕೆಲಸ ಮಾಡುತ್ತಿರುವ ಸರ್ಕಾರ ಅಂಚೆ ಇಲಾಖೆಯನ್ನು ಆರು ಘಟಕಗಳಾಗಿ ವಿಭಜಿಸಲು ಹೊರಟಿರುವುದು ಹಾಸ್ಯಾಸ್ಪದವಾಗಿದೆ ಎಂದು ವ್ಯಂಗ್ಯವಾಡಿದರು.
೧೯೯೧ರಲ್ಲಿ ಆರಂಭವಾದ ಉದಾರೀಕರಣದ ಫಲವಾಗಿ ದೇಶದಲ್ಲಿಂದು ಎಲ್ಲಾ ಸಾರ್ವಜನಿಕ ರಂಗದ ಉದ್ಯಮಗಳನ್ನು ಒಂದೊಂದಾಗಿ ಖಾಸಗೀಕರಣ ಮಾಡುವ ಪ್ರಕ್ರಿಯೆ ಶುರುವಾಗಿದೆ. ಇದಕ್ಕಾಗಿ ಒಂದು ಇಲಾಖೆಯನ್ನೇ ತೆರೆಯಲಾಗಿದೆ. ನವರತ್ನಗಳು ಎಂದು ಕರೆಯಲಾಗುವ ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಅಥವಾ ಖಾಸಗೀಕರಣ ಮಾಡಲು ಹೊರಟಿರುವುದು ಸರ್ಕಾರದ ಆರ್ಥಿಕ ದಿವಾಳಿತನದ ಸಂಕೇತವಾಗಿದೆ ಎಂದು ವಿಷಾಧಿಸಿದರು.
ಕರ್ನಾಟಕ ವೃತ್ತದ ಚೀಫ್ ಪೋಸ್ಟ್ ವಾಸ್ಟರ್ ಜನರಲ್ ಎಸ್.ರಾಜೇಂದ್ರಕುವಾರ್ ಮಾತನಾಡಿ, ಬದಲಾಗುತ್ತಿರುವ ಗ್ರಾಹಕರ ಮನೋಭಾವಕ್ಕೆ ತಕ್ಕಂತೆ ಸೇವೆಗಳನ್ನು ಒದಗಿಸಬೇಕಾಗಿರುವುದು ಇಂದಿನ ಅವಶ್ಯಕತೆಯಾಗಿದೆ. ಈ ನಿಟ್ಟಿನಲ್ಲಿ ಅಂಚೆ ಇಲಾಖೆಯ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯಿಸ್‌ನ ವಿಶ್ರಾಂತ ಸೆಕ್ರೆಟರಿ ಜನರಲ್ ಆರ್.ಎನ್.ಪರಾಶರ್ ಹೊಸ ಪಿಂಚಣಿ ನೀತಿಯನ್ನು ರದ್ದುಪಡಿಸಿ, ಹಳೇ ಪಿಂಚಣಿ ಯೋಜನೆಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಕರ್ನಾಟಕ ವೃತ್ತದ ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯಿಸ್‌ನ ಅಧ್ಯಕ್ಷ ಎ.ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

19 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

19 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

19 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

19 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

19 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago