ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯಿಸ್ನ ೧೨ನೇ ಫೆಡರಲ್ ಕೌನ್ಸಿಲ್ ಅಧಿವೇಶನ ಉದ್ಘಾಟನೆ
ಮೈಸೂರು: ಅಂಚೆ ಇಲಾಖೆಯನ್ನು ಖಾಸಗೀಕರಣ ಮಾಡುವ ಹುನ್ನಾರಗಳು ನಡೆಯುತ್ತಿದ್ದು, ಸಾರ್ವಜನಿಕರ ಸ್ವತ್ತಾದ ಅಂಚೆ ಇಲಾಖೆಯನ್ನು ಉಳಿಸಿಕೊಳ್ಳಬೇಕಾದದ್ದು ಪ್ರತಿಯೊಬ್ಬ ಅಂಚೆ ನೌಕರನ ಜವಾಬ್ದಾರಿಯಾಗಿರುವ ಕಾರಣ ಅಗತ್ಯ ಹೋರಾಟ ನಡೆಸಬೇಕು ಎಂದು ಸಿಐಟಿಯು ರಾಷ್ಟ್ರೀಯ ಕಾರ್ಯದರ್ಶಿ ಕೆ.ಎನ್.ಉಮೇಶ್ ಸಲಹೆ ನೀಡಿದರು.
ನಗರದ ಜೆಎಲ್ಬಿ ರಸ್ತೆಯಲ್ಲಿರುವ ಗೋವಿಂದರಾವ್ ಮೆಮೋರಿಯಲ್ ಹಾಲ್ನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯೀಸ್ನ ೧೨ನೇ ಫೆಡರಲ್ ಕೌನ್ಸಿಲ್ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಚೆ ಇಲಾಖೆಯನ್ನು ಆರು ಘಟಕಗಳನ್ನಾಗಿ ವಿಭಜಿಸಲು ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಇದೊಂದು ಅವೈಜ್ಞಾನಿಕ ಕ್ರಮವಾಗಿದೆ. ಒಂದೆಡೆ ಲಾಭ ಮತ್ತೊಂದೆಡೆ ನಷ್ಟದಲ್ಲಿರುವ ಬೇರೆ ಬೇರೆ ಬ್ಯಾಂಕ್ಗಳನ್ನು ಒಟ್ಟಿಗೆ ಸೇರಿಸುವ ಕೆಲಸ ಮಾಡುತ್ತಿರುವ ಸರ್ಕಾರ ಅಂಚೆ ಇಲಾಖೆಯನ್ನು ಆರು ಘಟಕಗಳಾಗಿ ವಿಭಜಿಸಲು ಹೊರಟಿರುವುದು ಹಾಸ್ಯಾಸ್ಪದವಾಗಿದೆ ಎಂದು ವ್ಯಂಗ್ಯವಾಡಿದರು.
೧೯೯೧ರಲ್ಲಿ ಆರಂಭವಾದ ಉದಾರೀಕರಣದ ಫಲವಾಗಿ ದೇಶದಲ್ಲಿಂದು ಎಲ್ಲಾ ಸಾರ್ವಜನಿಕ ರಂಗದ ಉದ್ಯಮಗಳನ್ನು ಒಂದೊಂದಾಗಿ ಖಾಸಗೀಕರಣ ಮಾಡುವ ಪ್ರಕ್ರಿಯೆ ಶುರುವಾಗಿದೆ. ಇದಕ್ಕಾಗಿ ಒಂದು ಇಲಾಖೆಯನ್ನೇ ತೆರೆಯಲಾಗಿದೆ. ನವರತ್ನಗಳು ಎಂದು ಕರೆಯಲಾಗುವ ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಅಥವಾ ಖಾಸಗೀಕರಣ ಮಾಡಲು ಹೊರಟಿರುವುದು ಸರ್ಕಾರದ ಆರ್ಥಿಕ ದಿವಾಳಿತನದ ಸಂಕೇತವಾಗಿದೆ ಎಂದು ವಿಷಾಧಿಸಿದರು.
ಕರ್ನಾಟಕ ವೃತ್ತದ ಚೀಫ್ ಪೋಸ್ಟ್ ವಾಸ್ಟರ್ ಜನರಲ್ ಎಸ್.ರಾಜೇಂದ್ರಕುವಾರ್ ಮಾತನಾಡಿ, ಬದಲಾಗುತ್ತಿರುವ ಗ್ರಾಹಕರ ಮನೋಭಾವಕ್ಕೆ ತಕ್ಕಂತೆ ಸೇವೆಗಳನ್ನು ಒದಗಿಸಬೇಕಾಗಿರುವುದು ಇಂದಿನ ಅವಶ್ಯಕತೆಯಾಗಿದೆ. ಈ ನಿಟ್ಟಿನಲ್ಲಿ ಅಂಚೆ ಇಲಾಖೆಯ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯಿಸ್ನ ವಿಶ್ರಾಂತ ಸೆಕ್ರೆಟರಿ ಜನರಲ್ ಆರ್.ಎನ್.ಪರಾಶರ್ ಹೊಸ ಪಿಂಚಣಿ ನೀತಿಯನ್ನು ರದ್ದುಪಡಿಸಿ, ಹಳೇ ಪಿಂಚಣಿ ಯೋಜನೆಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಕರ್ನಾಟಕ ವೃತ್ತದ ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯಿಸ್ನ ಅಧ್ಯಕ್ಷ ಎ.ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…